ಚಿತ್ರದುರ್ಗ | ಗಂಡು ಮಗುವಿಗೆ ಜನ್ಮ ನೀಡದಕ್ಕೆ ಪತ್ನಿ ಮೇಲೆ ಗಂಭೀರ ಹಲ್ಲೆ.

Date:

Advertisements

ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಬ್ಬ ಹೆಂಡತಿಯ ಮೇಲೆ ಗಂಭೀರವಾಗಿ ಹಲ್ಲೆ ನೆಲೆಸಿರುವ ಘಟನೆ ನಡೆದಿದೆ. ಅಲ್ಲದೇ ಪತಿ ಎರಡನೇ ವಿವಾಹವಾಗಿದ್ದಾನೆ ಎನ್ನುವ ಆರೋಪ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಂದಲಹಟ್ಟಿ ಗ್ರಾಮದಲ್ಲಿ ಕೇಳಿಬಂದಿದೆ.

ಗಂಡು ಮಗುವಿನ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ಹೆಂಡತಿಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಲ್ಲದೇ, ಮೂರು ಬಾರಿ ಲಿಂಗ ಪತ್ತೆ ಪರೀಕ್ಷೆ ನಡೆಸಿ ಗರ್ಭಪಾತ ಮಾಡಿಸಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನೆಡೆದಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1001922877

ಚಳ್ಳಕೆರೆ ತಾಲೂಕಿನ ಮಂದಲಹಟ್ಟಿ ಗ್ರಾಮದ ಕಾಟಮಲಿಂಗಯ್ಯ ಎನ್ನುವ ವ್ಯಕ್ತಿಯೇ ಆರೋಪಿಯಾಗಿದ್ದು, ಈತನ ವಿರುದ್ಧ ನಾಯಕನಹಟ್ಟಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪತ್ನಿ ಶಾಂತಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisements

ಕಾಟಮಲಿಂಗಯ್ಯ ಹಂಪಿ ಕನ್ನಡ ವಿವಿಯ ಪಿಎಚ್‌ಡಿ ಪದವಿ ಪಡೆದಿರುವ ಪದವೀಧರನಾಗಿದ್ದು, ದೇವರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಾಕಿಸ್ತಾನಿ ಮಹಿಳೆಯ ಅಧ್ಯಯನ ವೀಸಾ, ಭಾರತ ಬಿಡುವ ಅಗತ್ಯವಿಲ್ಲ; ಎಸ್ಸಿ ಉಮಾ ಪ್ರಶಾಂತ್.‌

ಎಂಟು ವರ್ಷದ ಹಿಂದೆ ಮದುವೆಯಾಗಿದ್ದ ಕಾಟಮಲಿಂಗಯ್ಯ ಹಾಗೂ ಶಾಂತಮ್ಮ ದಂಪತಿಗಳಿಗೆ ಎರಡು ಹೆಣ್ಣುಮಕ್ಕಳಿವೆ.‌ ಗಂಡು ಮಗು ಹುಟ್ಟಲಿಲ್ಲ ಎಂದು ಆಗಾಗ್ಗೆ ಇದೇ ವಿಷಯಕ್ಕೆ ಪೀಡಿಸುತ್ತಿದ್ದು, ಹೆಂಡತಿಯ ಮೇಲೆ ಹಲ್ಲೆಯನ್ನೂ ನಡೆಸುತ್ತಿದ್ದ.
ವಿದ್ಯಾವಂತನಾಗಿದ್ದು, ಪದವೀಧರನಾದರೂ ಹೆಂಡತಿಗೆ ಗಂಡು ಮಗು ಬೇಕೆಂದು ಸತತ ಹಲ್ಲೆ ನಡೆಸಿದ್ದಲ್ಲದೇ, ಗೌರಮ್ಮ ಎಂಬ ಯುವತಿಯನ್ನು ಎರಡನೇ ವಿವಾಹವಾಗಿದ್ದಾನೆಂದು ಆರೋಪಿಸಲಾಗಿದೆ.

ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ಕಾಟಮಲಿಂಗಯ್ಯನ ವಿಚಾರಣೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ...

ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ...

Download Eedina App Android / iOS

X