ದಕ್ಷಿಣ ಕನ್ನಡ | ಸುಹಾಸ್ ಶೆಟ್ಟಿ ಹತ್ಯೆ; ಜಿಲ್ಲೆಯ ಎರಡು ಸ್ಥಳಗಳಲ್ಲಿ ಇಬ್ಬರಿಗೆ ಚೂರಿ ಇರಿತ

Date:

Advertisements

ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಸ್ಥಳಗಳಲ್ಲಿ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಅಡ್ಯಾರ್ ಕಣ್ಣೂರು ಮತ್ತು ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯಲ್ಲಿ ಯುವಕರಿಗೆ ಚೂರಿ ಇರಿಯಲಾಗಿದೆ ಎಂಬ ಮಾಹಿತಿ ಲಭಿಸಿದೆ.

ಮಂಗಳೂರು ಕಮಿಷನರ್ ವ್ಯಾಪ್ತಿಯ ಅಡ್ಯಾರ್ ಕಣ್ಣೂರು ಎಂಬಲ್ಲಿ ಬೈಕ್‌ನಲ್ಲಿ ಬಂದ ತಂಡವೊಂದು ಯುವಕನೋರ್ವನಿಗೆ ಚೂರಿ ಇರಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಯುವಕ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ರೌಡಿಶೀಟರ್ ಹತ್ಯೆ ಹಿನ್ನೆಲೆ: ಸಂಘಪರಿವಾರದಿಂದ ಶುಕ್ರವಾರ ದ.ಕ. ಜಿಲ್ಲಾ ಬಂದ್‌ಗೆ ಕರೆ

Advertisements

ಅಡ್ಯಾರ್ ಕಣ್ಣೂರು ನಿವಾಸಿ ನೌಶಾದ್ ಎಂಬಾತ ತೊಕ್ಕೋಟು ಕಲ್ಲಾಪಿನ ಗ್ಲೋಬಲ್ ಮಾರುಕಟ್ಟೆಗೆ ತೆರಳಲು ಮುಂಜಾನೆ 3 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿರುವಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಫೋಟೋ

ಎರಡು ಬೈಕ್‌ನಲ್ಲಿ ಬಂದ ನಾಲ್ವರ ತಂಡ ಚೂರಿಯಿಂದ ದಾಳಿಗೆ ಮುಂದಾಗಿದ್ದು ಈ ವೇಳೆ ಅಪಾಯವನ್ನು ಅರಿತ ನೌಶಾದ್ ಓಡಿ ಪಾರಾಗಿದ್ದಾನೆ ಎನ್ನಲಾಗಿದೆ. ಇರಿತದಿಂದ ನೌಶಾದ್ ಬೆನ್ನಿಗೆ ಅಲ್ಪ ಪ್ರಮಾಣದ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯಲ್ಲಿ ಫೈಝಲ್ ಎಂಬ ಯುವಕನಿಗೆ ಚೂರಿ ಇರಿಯಲಾಗಿದ್ದು, ಬೆನ್ನಿಗೆ ಗಾಯವಾಗಿದೆ. ಫೈಝಲ್ ಕೂಡಾ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X