ನೋಟು ಹಿಂಪಡೆದು ಎರಡು ವರ್ಷವಾದರೂ 6,000 ಕೋಟಿ ರೂ.ಗಳಿಗೂ ಹೆಚ್ಚು 2,000 ರೂ. ನೋಟುಗಳು ಚಲಾವಣೆಯಲ್ಲಿ: ಆರ್‌ಬಿಐ

Date:

Advertisements

ಎರಡು ಸಾವಿರ ರೂಪಾಯಿ ನೋಟುಗಳ ಹಿಂಪಡೆದು ಎರಡು ವರ್ಷಗಳಾದರೂ 6,266 ಕೋಟಿ ರೂಪಾಯಿಗಳ ಹೆಚ್ಚಿನ ಮೌಲ್ಯದ 2000 ರೂಪಾಯಿ ನೋಟುಗಳು ಚಲಾವಣೆಯಲ್ಲಿವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಹೇಳಿದೆ.

2023ರ ಮೇ 19ರಂದು ಆರ್‌ಬಿಐ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಂಡಿದೆ. ಆದರೆ 2000 ರೂಪಾಯಿ ನೋಟುಗಳು ಇನ್ನೂ ಕಾನೂನುಬದ್ಧವಾಗಿರುತ್ತದೆ ಎಂದು ಘೋಷಿಸಿದೆ. ಆದರೆ ಇಂದಿಗೂ ಸಾವಿರಾರು ಕೋಟ್ಯಾಂತರ ರೂಪಾಯಿ ಮೌಲ್ಯದ ಎರಡು ಸಾವಿರ ರೂಪಾಯಿ ನೋಟುಗಳು ಚಲಾವಣೆಯಲ್ಲಿದೆ.

ಇದನ್ನು ಓದಿದ್ದೀರಾ? ₹2 ಸಾವಿರ ನೋಟುಗಳನ್ನು ಹಿಂಪಡೆಯಲು ನಿರ್ಧರಿಸಿದ ಆರ್‌ಬಿಐ; ಸೆ.30 ಕೊನೆ ದಿನ!

Advertisements

ಈ ಬಗ್ಗೆ ಆರ್‌ಬಿಐ ಶುಕ್ರವಾರ ಹೇಳಿಕೆಯನ್ನು ನೀಡಿದೆ. “2023ರ ಮೇ 19ರಂದು 2000 ರೂಪಾಯಿ ನೋಟುಗಳನ್ನು ಹಿಂಪಡೆದುಕೊಂಡಾಗ 3.56 ಲಕ್ಷ ಕೋಟಿ ರೂ.ಗಳಷ್ಟು ನೋಟುಗಳು ಚಲಾವಣೆಯಲ್ಲಿತ್ತು. ಆದರೆ 2025ರ ಏಪ್ರಿಲ್ 30ರ ಮುಕ್ತಾಯದ ಸಂದರ್ಭದಲ್ಲಿ 6,266 ಕೋಟಿ ರೂ.ಗಳಿಗೆ ಇಳಿದಿದೆ” ಎಂದು ಆರ್‌ಬಿಐ ತಿಳಿಸಿದೆ.

2023ರ ಮೇ 19ರಂದು ಚಲಾವಣೆಯಲ್ಲಿರುವ ರೂ. 2000 ನೋಟುಗಳಲ್ಲಿ ಶೇ. 98.24ರಷ್ಟು ಹಿಂತಿರುಗಿಸಲಾಗಿದೆ. 2023ರ ಅಕ್ಟೋಬರ್ 7ರವರೆಗೆ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ಅಂತಹ ನೋಟುಗಳ ಠೇವಣಿ ಅಥವಾ ವಿನಿಮಯದ ಸೌಲಭ್ಯ ಲಭ್ಯವಿತ್ತು. ಆದರೂ 19 ಆರ್‌ಬಿಐ ಕಚೇರಿಗಳಲ್ಲಿ ಇನ್ನೂ ಕೂಡಾ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

2023ರ ಅಕ್ಟೋಬರ್ 9ರಿಂದ ಆರ್‌ಬಿಐ ವಿತರಣಾ ಕಚೇರಿಗಳು ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ 2000 ರೂಪಾಯಿ ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಗಳಿಗೆ ಠೇವಣಿ ಇಡಲು ಸ್ವೀಕರಿಸುತ್ತಿವೆ. ಇದಲ್ಲದೆ ಜನರು ತಮ್ಮ ಅಂಚೆ ಕಚೇರಿ ಖಾತೆಗಳಿಗೆ 2000 ರೂಪಾಯಿ ನೋಟುಗಳನ್ನು ಜಮೆ ಮಾಡಬಹುದಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X