ತುರುವೇಕೆರೆ | ಸೂಳೇಕೆರೆ ಕೆರೆ ಕೋಡಿಯಲ್ಲಿ ಒಂದು ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ : ಶಾಸಕ ಎಂ.ಟಿ.ಕೃಷ್ಣಪ್ಪ

Date:

Advertisements

ತುರುವೇಕೆರೆ ತಾಲೂಕಿನ ಸೂಳೇಕೆರೆಯ ಕೆರೆ ಕೋಡಿ ಬಳಿ ನೀರನ್ನು ಸಂಗ್ರಹ ಮಾಡುವ ಸಲುವಾಗಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಸರಣಿ ಚೆಕ್ ಡ್ಯಾಂ ಅನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. 

  ತಾಲೂಕಿನ ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಳೇಕೆರೆ ಕೆರೆ ಕೋಡಿ ಬಳಿ ಸಣ್ಣ ನೀರಾವರಿ ಇಲಾಖಾ ವತಿಯಿಂದ ಸುಮಾರು ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಸರಣಿ ಚೆಕ್ ಡ್ಯಾಂ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಅಂತರ್ಜಲವೃದ್ದಿಗೆ ಹಳ್ಳಗಳಿಗೆ ಚೆಕ್ ಡ್ಯಾಮ್‌ಗಳ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಈ ಭಾಗದಲ್ಲಿ ಸಾಕಷ್ಟು ಕೆಲಸಗಳಾಗಿವೆ. ಹೇಮಾವತಿ ಇಲಾಖೆಯಿಂದಲೂ ತಡೆಗೋಡೆ, ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಕಾಮಗಾರಿಗಳನ್ನು ಸಹಾ ಕೈಗೆತ್ತಿಕೊಳ್ಳಲಾಗುವುದು. ಉತ್ತಮ ಗುಣಮಟ್ಟದ ಕಾಮಗಾರಿಗೆ ಆಧ್ಯತೆ ನೀಡುವಂತೆ ಇಂಜಿನಿಯರ್ ಗಳಿಗೆ ಮತ್ತು ಗುತ್ತಿಗೆದಾರರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಸೂಚಿಸಿದರು.

 ಇದೇ ಸಂದರ್ಭದಲ್ಲಿ ಕೊಡಗಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಿರಣ್‌ಕುಮಾರ್ ಸದಸ್ಯ ದೇವರಾಜು, ಮುಖಂಡರಾದ ಆಬಲಕಟ್ಟೆ ರಾಮಣ್ಣ, ಕೊಟ್ಟೂರನಕೊಟ್ಟಿಗೆ ಮಂಜಣ್ಣ, ಹುಚ್ಚಯ್ಯ, ಸಿದ್ದಲಿಂಗಯ್ಯ, ನಾಗೇಶ್, ಜವರಪ್ಪ, ಕಾರ್ತಿಕ್, ಎಇಇ ದೊಡ್ಡಯ್ಯ ಎ.ಇ.ಮಧುಸೂಧನ್, ನರಸಿಂಹಯ್ಯ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು. 

Advertisements

ವರದಿ- ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X