ಎಸ್‌ಎಸ್‌ಎಲ್‌ಸಿ ಫಲಿತಾಂಶ | ತುಮಕೂರಿನ ಮೊಹಮ್ಮದ್ ಮಸ್ತೂದ್ ಆದಿಲ್ ರಾಜ್ಯಕ್ಕೆ ಟಾಪರ್

Date:

Advertisements

ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆವಿಗೂ ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಚೇತನ ವಿದ್ಯಾಮಂದಿರದ ವಿದ್ಯಾರ್ಥಿ ಮೊಹಮದ್ ಮುಸ್ತಾರ್ ಆದೀಲ್ 625 ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.

” ಟಾಪರ್ ಬಂದಿರುವುದು ಖುಷಿ ತಂದಿದೆ. ಗಣಿತ, ವಿಜ್ಞಾನ ವಿಷಯಗಳು ನನಗೆ ತುಂಬಾ ಇಷ್ಟವಾದವು. ಆದರೆ ನನಗೆ ಸಮಾಜ ವಿಜ್ಞಾನ ಕಷ್ಟವಾಗುತ್ತಿತ್ತು. ಉಪನ್ಯಾಸಕರು ಕಥೆ ರೂಪದಲ್ಲಿ ಹೇಳಿಕೊಡುತ್ತಿದ್ದರು. ಪಠ್ಯ ಪುಸ್ತಕಕ್ಕೆ ಮಾತ್ರ ಸೀಮಿತವಾಗದೆ ಇತರ ಚಟುವಟಿಕೆಯನ್ನು ಮಾಡುತ್ತಿದ್ದೆ. ಶಿಕ್ಷಕರು ನಮಗೆ ಮಾರ್ಗದರ್ಶನ ಮಾಡುತ್ತಿದ್ದರು. ಮೊದಲ ದಿನದಿಂದಲೂ ಪ್ರತಿ ದಿನ 2 ಗಂಟೆ ಓದಿದರೆ ಸಾಕು. ಅರ್ಥ ಮಾಡಿಕೊಂಡು ಓದಬೇಕು. ಮನೆಯಲ್ಲಿ ಓದಿಗೆ ಪ್ರೋತ್ಸಾಹ ನೀಡುತ್ತಿದ್ದರು. ನನಗೆ ವೈದ್ಯನಾಗಬೇಕೆಂಬ ಆಸೆಯಿದೆ ಎಂದು ವಿದ್ಯಾರ್ಥಿ ಮೊಹಮದ್ ಮುಸ್ತಾರ್ ಆದೀಲ್ ತನ್ನ ಬಯಕೆ ವ್ಯಕ್ತಪಡಿಸಿದ್ದಾರೆ.

ತುಮಕೂರಿನ ಸದಾಶಿವನಗರದಲ್ಲಿ ವಾಸವಿದ್ದೇವೆ. ನಾನು ಖತಾರ್‌ನಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದೆ. ತದ ನಂತರ ವಾಲೆಂಟರಿ ರಿಟೈನ್ ಮೆಂಟ್ ತೆಗೆದುಕೊಂಡೆ. ಮಗನಿಗೆ ಪ್ರತಿನ ದಿನ ಓದಿಕೊಳ್ಳುವಂತೆ, ಆಯಾ ವಿಷಯಗಳನ್ನು ಮನನ ಮಾಡಿಸುತ್ತಿದ್ದೆ. ಶಿಕ್ಷಕರು ಅಲ್ಲದೇ ನಾನು ಸಹ ಫಾಲೋಅಪ್ ಮಾಡುತ್ತಿದ್ದೆ. ಇದರಿಂದಾಗಿ ಮಗ ರ್ಯಾಂಕ್ ಬಂದಿದ್ದಾನೆ. ನಮಗೆ ಸಂತೋಷವಾಗಿದ್ದು, ಆತ ವೈದ್ಯನಾಗಬೇಕೆಂಬ ಆಸೆಗೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ವಿದ್ಯಾರ್ಥಿ ತಂದೆ ಮೊಹಮದ್ ಮನ್ಸೂರ್ ಆದೀಲ್ ಹಾಗೂ ತಾಯಿ ಹಫ್ರೋಜ್ ಜಹಾನ್ ಖುಷಿ ಹಂಚಿಕೊಂಡರು.

Advertisements

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ವಿ. ಸುಬ್ಬರಾವ್ ಮಾತನಾಡಿ, ಸರ್ವೋದಯ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಚೇತನ ವಿದ್ಯಾಮಂದಿರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಬಂದಿರುವುದು ತುಂಬಾ ಸಂತೋಷ ತಂದಿದೆ. ಇದುವರೆಗೂ 2 ಮತ್ತು 3ನೇ ಸ್ಥಾನ ಬರುತ್ತಿತ್ತು. ಇದೇ ಮೊದಲ ಬಾರಿಗೆ ಪ್ರಥಮ ಸ್ಥಾನ ಪಡೆದಿದೆ. ಇದಕ್ಕೆ ಕಾರಣಕರ್ತರಾದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಫಸ್ಟ್ ರ‍್ಯಾಂಕ್ ಜತೆಗೆ ಇನ್ನು 4 ರ‍್ಯಾಂಕ್‌ಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ಚೇತನ ವಿದ್ಯಾಮಂದಿರ ಸಂಸ್ಥೆಯ ಎಸ್. ಸುಬ್ಬರಾಯ, ಕೆ.ವಿ. ಸುಬ್ಬರಾವ್ ವಿದ್ಯಾರ್ಥಿ ಮೊಹಮದ್ ಮುಸ್ತಾರ್ ಆದೀಲ್ ರವರನ್ನು ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X