ಚಾಮರಾಜನಗರ | ಬಾಂಬ್ ಬೆದರಿಕೆ : ಇ – ಮೇಲ್ ಸಂದೇಶ; ಕೆಲಕಾಲ ಆತಂಕ, ತಪಾಷಣೆ

Date:

Advertisements

ರಾಜ್ಯದ ವಿವಿಧೆಡೆ ‘ ಬಾಂಬ್‌ ಇಡಲಾಗಿದೆ ’ ಎಂದು ಸರ್ಕಾರಿ ಕಚೇರಿಗಳಿಗೆ ಬಂದ ‘ಇ–ಮೇಲ್‌’ ಸಂದೇಶ ಆತಂಕಕ್ಕೆ ಎಡೆ ಮಾಡಿತು.ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ, ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿ,ರಾಯಚೂರು ಜಿಲ್ಲಾಧಿಕಾರಿ ಕಚೇರಿಗಳಿಗೆ ಬೆದರಿಕೆಯ ಇ – ಮೇಲ್ ಸಂದೇಶಗಳು ಬಂದಿವೆ.

ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಮೂಲಕ ಕಚೇರಿ, ಪ್ರಮುಖ ಸ್ಥಳಗಳ ತಪಾಸಣೆ ನಡೆಸಿದ ಪೊಲೀಸರು, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿದ್ದಾರೆ. ಇದೊಂದು ಹುಸಿ ಬೆದರಿಕೆಯಾಗಿದ್ದು ಭಯ ಪಡುವ, ಆತಂಕ ಪಡುವ ಅಗತ್ಯವಿಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹೇಳಿಕೆ ನೀಡಿದ್ದಾರೆ.

ಬೆಳಿಗ್ಗೆ 7 -10 ರ ಸಮಯದಲ್ಲಿ ಅಜಿತ್ ಜಕ್ಕುಮೋಲಾ ಎಂಬ ಖಾತೆಯಿಂದ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ಇ – ಮೇಲ್‌ಗೆ ಸಂದೇಶ ಬಂದಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಪೊಲೀಸ್ ಅಧೀಕ್ಷಕರಾದ ಬಿ.ಟಿ. ಕವಿತಾ ಕಚೇರಿಯ ಸಿಬ್ಬಂದಿಗಳನ್ನು ಹೊರ ಕಳುಹಿಸಿದ್ದಾರೆ. ಬಳಿಕ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಜಿಲ್ಲಾಡಳಿತ ಭವನವನ್ನು ಪೂರ್ತಿ ತಪಾಸಣೆ ನಡೆಸಿದರು. ಆದರೆ, ಬಾಂಬ್ ಪತ್ತೆಯಾಗಲಿಲ್ಲ. ‘ ಮೇಲ್ನೋಟಕ್ಕೆ ಹುಸಿ ಬಾಂಬ್ ಬೆದರಿಕೆಯಂತೆ ಕಂಡುಬಂದಿದ್ದು ಮುಂಜಾಗ್ರತಾ ಕ್ರಮವಾಗಿ ಭವನಕ್ಕೆ ಭದ್ರತೆ ಹೆಚ್ಚಿಸಲಾಗಿದೆ ’ ಎಂದು ಮಾಹಿತಿ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ವಖ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ : ಅಯೂಬ್ ಖಾನ್

ಜಿಲ್ಲಾಡಳಿತ ನೀಡಿರುವ ದೂರಿನ ಅನುಸಾರ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ರವಾನಿಸಿದವರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X