ದೇಶದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ ಸಾಧ್ಯತೆ; ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

Advertisements

ದೇಶದ ಹಲವು ಭಾಗಗಳಲ್ಲಿ ಈ ವಾರ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಉತ್ತರ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬಿರುಗಾಳಿ ಬೀಸಿದ್ದು ಮುಂದಿನ ನಾಲ್ಕು ದಿನಗಳವರೆಗೆ ದೆಹಲಿ-ಎನ್‌ಸಿಆರ್ ಪ್ರದೇಶ ಸೇರಿದಂತೆ ವಾಯುವ್ಯ ಭಾರತ, ಪೂರ್ವ ಮತ್ತು ಮಧ್ಯ ಭಾರತದಲ್ಲಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ವಾರದಲ್ಲಿ ಮಿಂಚು, ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಬೆಳೆಗಳು ಮತ್ತು ತೋಟಗಳನ್ನು ರಕ್ಷಿಸಲು ಐಎಂಡಿ ಕೃಷಿ ಹವಾಮಾನ ಸಲಹೆಯನ್ನು ನೀಡಿದೆ. ವಿಶೇಷವಾಗಿ ನಗರ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿನ ದುರ್ಬಲ ಪ್ರದೇಶಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಐಎಂಡಿ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಮಳೆ: ಹವಾಮಾನ ಇಲಾಖೆ

Advertisements

ಕಳೆದ 24 ಗಂಟೆಗಳಲ್ಲಿ ದೆಹಲಿಯ ಸಫ್ದರ್ಜಂಗ್ ನಿಲ್ದಾಣದಲ್ಲಿ 77 ಮಿಮೀ ಮಳೆ ದಾಖಲಾಗಿವೆ. 1901ರ ಮೇ ತಿಂಗಳ ಬಳಿಕ ಇದು ಎರಡನೇ ಅತಿ ಹೆಚ್ಚು ಮಳೆಯಾಗಿದೆ. 2021ರ ಮೇ 20ರಂದು ಸಫ್ದರ್ಜಂಗ್ ವಿಮಾನ ನಿಲ್ದಾಣದಲ್ಲಿ 119.3 ಮಿಮೀ ಮಳೆ ದಾಖಲಾಗಿದೆ.

ಐಎಂಡಿ ವರದಿಗಳ ಪ್ರಕಾರ ದೇಶದ ಹಲವೆಡೆ ನಿರಂತರ ಮಳೆ, ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳಲಿದೆ. ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಸಮೀಪದಲ್ಲಿ ಚಂಡಮಾರುತ ಹಾದುಹೋಗುವ ಕಾರಣ ಉತ್ತರ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನದ ಕೆಲವು ಭಾಗಗಳಲ್ಲಿ ಧೂಳಿನ ಬಿರುಗಾಳಿ ಮತ್ತು ಪ್ರತ್ಯೇಕ ಆಲಿಕಲ್ಲು ಮಳೆಯಾಗಬಹುದು.

ಒಡಿಶಾ, ಕೇರಳ ಮತ್ತು ಕರ್ನಾಟಕದಲ್ಲಿ ಕೃಷಿ ಪ್ರದೇಶದಲ್ಲಿ ನಿಂತಿರುವ ನೀರನ್ನು ತೆಗೆಯುವಂತೆ ಐಎಂಡಿ ಸಲಹೆ ನೀಡಿದೆ. ಸಿಕ್ಕಿಂ, ಒಡಿಶಾ, ಹಿಮಾಚಲ ಪ್ರದೇಶ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಬೆಳೆಗಳನ್ನು ಕಾಪಾಡಲು ಆಲಿಕಲ್ಲು ಬಲೆಗಳು ಮತ್ತು ಕ್ಯಾಪ್‌ಗಳನ್ನು ಬಳಸುವಂತೆ ಐಎಂಡಿ ಸಲಹೆ ನೀಡಿದೆ. ಆಲಿಕಲ್ಲು ಮಳೆ ಸಂದರ್ಭದಲ್ಲಿ ಪ್ರಾಣಿಗಳನ್ನು ಕೊಟ್ಟಿಗೆಯೊಳಗೆ ಇರಿಸುವಂತೆ, ಆಹಾರ ಮತ್ತು ಮೇವನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಲು ಸಲಹೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X