ಹಾಸನ | ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನವೂ ಯಶಸ್ವಿ

Date:

Advertisements

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಿದ್ದು, ಎರಡನೇ ದಿನದ ಕಾರ್ಯಾಚರಣೆಯೂ ಯಶಸ್ವಿಯಾಗಿದೆ.

ಇಟಿಎಫ್ ಸಿಬ್ಭಂದಿಗಳು ಹಳ್ಳಿಯೂರು ಗ್ರಾಮದಲ್ಲಿ ಪುಂಡಾನೆ ಇರುವ ಸ್ಥಳವನ್ನು ಇಂದು ಬೆಳಿಗ್ಗೆ ಪತ್ತೆ ಹಚ್ಚಿದ್ದು, ಪಾರ್ವತಮ್ಮ ಬೆಟ್ಟದ ಬಳಿ ನಿಂತಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿದ್ದಾರೆ.

ಈ ಅಡಕ-ಬಡಕ ಹೆಸರಿನ ಕಾಡಾನೆಗೆ, ವೈದ್ಯರು ಅರವಳಿಕೆ ಚುಚ್ಚುಮದ್ದು ‌ನೀಡಿದ್ದರು. ಹಾಗಾಗಿ ಆ ಕಾಡಾನೆಯೂ ಸ್ವಲ್ಪ ದೂರ ಓಡಿ ಪ್ರಜ್ಞೆ ತಪ್ಪಿ ಬಿದ್ದಿತ್ತು. ಈ ದೈತ್ಯಾಕಾರದ ಕಾಡಾನೆಗೆ ನೀರು ಹಾಕಿ ಆರೈಕೆ ಮಾಡಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗಳು, ಕಾಲಿಗೆ ಹಗ್ಗಕಟ್ಟಿದ್ದಾರೆ. ಅಲ್ಲದೇ ವೈದ್ಯರು ರಿವರ್ಸಲ್ ಇಂಜೆಕ್ಷನ್ ನೀಡಿದ್ದಾರೆ.

Advertisements

ಅಡಕ-ಬಡಕ ಎಂಬ ಕಾಡಾನೆ ಎಚ್ಚರಗೊಂಡ ಕೂಡಲೇ ಘೀಳಿಟ್ಟು ಅಬ್ಬರಿಸಿದ್ದು, ಸಾಕಾನೆಗಳನ್ನು ಹೈರಾಣಗಿಸಿದೆ. ಇನ್ನೂ ಕಾಡಾನೆಯನ್ನು ಎಳೆದು ತರಲು ಸಾಕಾನೆಗಳು ಹರಸಾಹಸಪಡುತ್ತಿವೆ.

ಈ ಸುದ್ದಿ ಓದಿದ್ದೀರಾ? ಮತ್ತೆ ಕೆಪಿಎಸ್‌ಸಿ ಎಡವಟ್ಟು : ಮೇ 3ರ ಕೆಎಎಸ್ ಮುಖ್ಯ ಪರೀಕ್ಷೆಗೆ ಮಧ್ಯರಾತ್ರಿ 12ಕ್ಕೆ ಹಾಲ್ ಟಿಕೆಟ್ ವಿತರಣೆ!

ಈ ಕಾರ್ಯಾಚರಣೆಯೂ ಡಿಎಫ್‌ಒ ಸೌರಭ್‌ಕುಮಾರ್, ಆರ್‌ಎಫ್‌ಒ ಹೇಮಂತ್ ನೇತೃತ್ವದಲ್ಲಿ ನಡೆದಿದ್ದು, ಸಾಕಾನೆಗಳಾದ ಕಂಜನ್, ಕರ್ನಾಟಕ ಭೀಮ, ಮಹೇಂದ್ರ, ಧನಂಜಯ, ಏಕಲವ್ಯ, ಸುಗ್ರೀವ ಎಂಬ ಆನೆಗಳು ಇದ್ದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X