ಜಾತಿ ಜನಗಣತಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಮಾಯಾವತಿ ವಾಗ್ದಾಳಿ

Date:

Advertisements

ಜಾತಿ ಜನಗಣತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ. “ದಲಿತರು ಮತ್ತು ಒಬಿಸಿಗಳಿಗೆ ಮೀಸಲಾತಿ ಸೇರಿದಂತೆ ಅವರ ಸಾಂವಿಧಾನಿಕ ಹಕ್ಕುಗಳನ್ನು ನಿರಾಕರಿಸುವ ಕರಾಳ ಇತಿಹಾಸವನ್ನು ಕಾಂಗ್ರೆಸ್ ಮರೆತಿದೆ” ಎಂದು ಆರೋಪಿಸಿದ್ದಾರೆ.

ಮುಂಬರುವ ಜನಗಣತಿ ಕಾರ್ಯದಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ. ಈ ವಿಚಾರದಲ್ಲಿ ಬಿಜೆಪಿ ವಿರುದ್ಧವೂ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿ ಕೂಡ ಅಷ್ಟೇನೂ ಕಡಿಮೆಯಲ್ಲ. ಜಾತಿ ಜನಗಣತಿ ನಡೆಸುವ ಬಗ್ಗೆ ಸಾರ್ವಜನಿಕ ಒತ್ತಡಕ್ಕೆ ಮಣಿಯಬೇಕಾಯಿತು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಂವಿಧಾನ ಬದಲಾವಣೆಯ ಆತಂಕ; ‘ಬಿಜೆಪಿ-ಎನ್‌ಡಿಎ’ಯಿಂದ ದೂರ ಸರಿಯುತ್ತಿದೆ ದಲಿತ ಸಮುದಾಯ

Advertisements

ಮಾಯಾವತಿ ತನ್ನ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿದ್ದಾರೆ. “1931 ರ ನಂತರ ಮತ್ತು ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮನ್ನಣೆ ಪಡೆಯುವ ಆತುರದಲ್ಲಿ, ಕಾಂಗ್ರೆಸ್ ಕೋಟ್ಯಂತರ ದಲಿತರು ಮತ್ತು ಒಬಿಸಿಗಳ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಂಡ ಇತಿಹಾಸದಲ್ಲಿ ತನ್ನ ಒಂದು ಕರಾಳ ಅಧ್ಯಾಯವಿದೆ ಎಂಬುದನ್ನು ಮರೆತಿದೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಅಧಿಕಾರ ಕಳೆದುಕೊಂಡ ನಂತರ ದಲಿತರು ಮತ್ತು ಒಬಿಸಿಗಳ ಬಗ್ಗೆ ಕಾಂಗ್ರೆಸ್‌ಗೆ ಹೊಸದಾಗಿ ಕಂಡುಬಂದಿರುವ ಪ್ರೀತಿಯು ಮತಗಳನ್ನು ಗಳಿಸುವ ಗುರಿಯನ್ನು ಹೊಂದಿದೆ. ಇದು ಅವಕಾಶವಾದಿ ರಾಜಕೀಯವೇ ಹೊರತು ಬೇರೇನೂ ಅಲ್ಲ” ಎಂದು ಆರೋಪಿಸಿದ್ದಾರೆ.

“ದಲಿತರು ಮತ್ತು ಒಬಿಸಿಗಳ ಮೇಲಿನ ಈ ಪ್ರೀತಿ ನಿಜವಾದದ್ದಲ್ಲ, ಬದಲಾಗಿ ಮತದಾರರನ್ನು ಓಲೈಸಲು ಉದ್ದೇಶದಿಂದ ಮಾಡುವ ರಾಜಕೀಯ ವಂಚನೆಯಾಗಿದೆ. ಮೀಸಲಾತಿಯನ್ನು ನಿಷ್ಪರಿಣಾಮಕಾರಿಯನ್ನಾಗಿ ಮಾಡುವ ಮೂಲಕ ಅಂತಿಮವಾಗಿ ದುರ್ಬಲಗೊಳಿಸುವ ಮತ್ತು ಕೊನೆಗೊಳಿಸುವ ಅವರ ದುಷ್ಟ ಉದ್ದೇಶವನ್ನು ಯಾರು ಮರೆಯಲು ಸಾಧ್ಯ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ಮೀಸಲಾತಿಯ ಸಾಂವಿಧಾನಿಕ ಉದ್ದೇಶಗಳನ್ನು ದುರ್ಬಲಗೊಳಿಸುವ ವಿಷಯದಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಕಡಿಮೆಯೇನಿಲ್ಲ ಎಂದು ಬಿಎಸ್‌ಪಿ ನಾಯಕಿ ಹೇಳಿದ್ದಾರೆ. “ವಾಸ್ತವವಾಗಿ, ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಬದಿಗಳಾಗಿವೆ. ಜನರ ಒತ್ತಡ ಮತ್ತು ಮತ ರಾಜಕೀಯದಿಂದಾಗಿ, ಬಿಜೆಪಿಯು ಜಾತಿ ಜನಗಣತಿ ನಡೆಸುವ ಜನರ ಬೇಡಿಕೆಯ ಮುಂದೆ ತಲೆಬಾಗಬೇಕಾಯಿತು. ಇದು ಸ್ವಾಗತಾರ್ಹ” ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

“ಬಾಬಾಸಾಹೇಬ್ ಡಾ.ಭೀಮ್‌ರಾವ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡುವುದನ್ನು ವಿಳಂಬ ಮಾಡುವುದರಿಂದ ಹಿಡಿದು 340ನೇ ವಿಧಿಯ ಅಡಿಯಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡುವ ಬಗ್ಗೆ ಅವರ ಜಾತಿವಾದಿ ಮತ್ತು ಪ್ರತಿಕೂಲ ನಿಲುವಿನವರೆಗೆ, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ವಿಧಾನವು ತಾರತಮ್ಯದಿಂದ ಕೂಡಿದೆ. ಆದರೆ ಮತ ರಾಜಕೀಯವು ಮುಂದುವರೆದಿದೆ. ಜನರು ಜಾಗರೂಕರಾಗಿರಬೇಕು” ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X