ಹಾಸನ | 1.5 ಲಕ್ಷ ರೂ. ಮೌಲ್ಯದ ಟೊಮೆಟೊ ಕಳವು

Date:

Advertisements

ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. 100 ರೂ. ಕೊಟ್ಟು ಟೊಮೆಟೊ ಖರೀದಿಸಲು ಸಾದ್ಯವಾಗದಿರುವವರು ಹುಣಸೆಹಣ್ಣು ಬಳಸಿ ಅಡುಗೆ ಮಾಡುತ್ತಿದ್ದಾರೆ. ಟೊಮೆಟೊ ಬೆಳೆದಿರುವ ರೈತರು ತಮ್ಮ ಜಮೀನುಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ, ಲಕ್ಷಾಂತರ ರೂಪಾಯಿ ಮೌಲ್ಯದ ಟೊಮೆಟೊ ಕಳ್ಳತನವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲುಕಿನಲ್ಲಿ ನಡೆದಿದೆ.

ತಾಲೂಕಿನ ಗೋಣಿ ಸೋಮನಹಳ್ಳಿಯಲ್ಲಿ ರೈತ ಧರಣಿ ಎಂಬಾತ ಬೆಳೆದಿದ್ದ ಟೊಮೆಟೊ ಕಳ್ಳತನವಾಗಿದೆ. ಧರಣಿ ಅವರು ಟೊಮೆಟೊ ಬೆಳೆ ಬೆಳೆದಿದ್ದರು. ಉತ್ತಮ ಇಳುವರಿಯೂ ಬಂದಿತ್ತು. ಈಗಾಗಲೇ ಒಮ್ಮೆ ಕಟಾವು ಮಾಡಿ, ಮಾರಾಟವನ್ನೂ ಮಾಡಿದ್ದರು. ಹಾಕಿದ್ದ ಬಂಡವಾಳದ ಜೊತೆಗೆ ಲಾಭವೂ ದೊರೆಯುತ್ತಿದೆ ಎಂಬ ಸಂತೋಷದಲ್ಲಿದ್ದರು.

ಆದರೆ, ಅವರ ಸಂತೋಷಕ್ಕೆ ಕಳ್ಳಲು ತಣ್ಣೀರು ಎರೆಚಿದ್ದಾರೆ. ಮಂಗಳವಾರ ರಾತ್ರಿ ಅವರ ತೋಟಕ್ಕೆ ನುಗ್ಗಿದ ಕಳ್ಳರು ಟೊಮೆಟೊವನ್ನು ಕದ್ದು ಹೊತ್ತೊಯ್ದಿದ್ದಾರೆ. ಸುಮಾರು 1.5 ಲಕ್ಷ ರೂ. ಮೌಲ್ಯದ ಟೊಮೆಟೊ ಕಳುವಾಗಿದೆ ಎಂದು ರೈತ ಧರಣಿ ಹೇಳಿದ್ದಾರೆ. ಹಳೇಬೀಡು ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಾರೆ.

Advertisements

ಜುಲೈ 4ರ ಮಂಗಳವಾರವಷ್ಟೇ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಗ್ರಾಮದ ಸಂತೆಯಲ್ಲಿ ಟೊಮೆಟೊ ಮಾರಾಟಕ್ಕೆ ಮಳಿಗೆ ಹಾಕಿದ್ದ ರೈತರೊಬ್ಬರು ತಮ್ಮ ಮಳಿಗೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. “ಹಾವೇರಿಯಲ್ಲಿ ಟೊಮೆಟೊ ಬೆಲೆ ಕೆ.ಜಿಗೆ 130 ರೂ. ಇದೆ. ಹೀಗಾಗಿ, ಟೊಮೆಟೊ ಕಳ್ಳರ ಹಾವಳಿ ಹೆಚ್ಚಾಗಿದೆ. ಅದಕ್ಕಾಗಿ, ಸಿಸಿ ಕ್ಯಾಮೆರಾ ಹಾಕಿದ್ದೇನೆ” ಎಂದು ರೈತ ಮಲ್ಲಪ್ಪ ಹೇಳಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X