ತುಮಕೂರು | ನೊಂದವರ ಪರವಾಗಿ ನಿಂತ ಪ್ರಾಮಾಣಿಕ ಅಧಿಕಾರಿ ಎಎಸ್ಪಿ ಅಬ್ದುಲ್ ಖಾದರ್ : ಹೆತ್ತೇನಹಳ್ಳಿ ಮಂಜುನಾಥ್

Date:

Advertisements

ನೊಂದವರು ಮತ್ತು ಶೋಷಿತರ ಪರವಾಗಿ ನಿಂತ ಪ್ರಾಮಾಣಿಕ ಅಧಿಕಾರಿಗಳಲ್ಲಿ ನಿವೃತ್ತ ಎಎಸ್ಪಿ ಅಬ್ದುಲ್ ಖಾದರ್ ಕೂಡ ಒಬ್ಬರು ಎಂದು ರಾಜಕೀಯ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ಶ್ಲಾಘಿಸಿದರು.

ತುಮಕೂರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ತುಮಕೂರಿನ ನಿವೃತ್ತ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್’ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗಡಿಕಾಯುವ ಸೈನಿಕರಿಗೆ ದೊರೆಯುವ ಸನ್ಮಾನ ಅಬ್ದುಲ್ ಖಾದರ್ ಅವರಿಗೂ ಈ ಜಿಲ್ಲೆಯ ನಾಗರಿಕರಿಂದ ದೊರೆಯುತ್ತಿದೆ. ಜನಪರ ಸೇವೆಯಿಂದಾಗಿ ಅವರು ಜಿಲ್ಲೆಯ ಜನರ ಹೃದಯದಲ್ಲಿದಾರೆ ಎಂದು ಅವರು ಹೇಳಿದರು.

ಅಂಬೇಡ್ಕರ್ ನೀಡಿದಂತ ಕಾನೂನನ್ನು ಎದೆಗಪ್ಪಿಕೊಂಡು, ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ಇಂದು ನಿವೃತ್ತಿಯಾಗುತ್ತಿದ್ದಾರೆ. ಇವರು ಅಬ್ದುಲ್ ಖಾದರ್ ಅಲ್ಲ, ಅಬ್ದುಲ್ ಕಾನೂನು ಸಾಹೇಬರು ಎಂದು ಬಣ್ಣಿಸಿದರು.

Advertisements
1001389990

ಅಧಿಕಾರಿಯಾಗಿದ್ದ ಸಮಯದಲ್ಲಿ ಬಡವರು, ನಿರ್ಗತಿಕರು, ಶೋಷಿತರು, ಮಹಿಳೆಯರ ಪರವಾಗಿ ಗಟ್ಟಿಯಾಗಿ ಹೋರಾಡಿದವರು, ಯಾವ ರಾಜಕಾರಣಿಗಳೂ ಅವರು ಸೊಪ್ಪು ಹಾಕುತ್ತಿರಲಿಲ್ಲ. ಇಂತಹ ದಕ್ಷ ಅಧಿಕಾರಿಯನ್ನು ಪಡೆದದ್ದು ನಮ್ಮ ಜಿಲ್ಲೆಯ ಭಾಗ್ಯ ಎಂದರಲ್ಲದೆ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳ ಪುಸ್ತಕಗಳನ್ನು ಪೊಲೀಸ್ ಇಲಾಖೆ ವತಿಯಿಂದ ಪ್ರಕಟಿಸಬೇಕು ಎಂದು ಅವರು ವಿನಂತಿಸಿದರು.

ಸದೃಢ ಸಮಾಜವನ್ನು ನಿರ್ಮಾಣ ಮಾಡುವಂತಹ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅಂತೆಯೇ ಆ ಸಮಾಜವನ್ನು ರಕ್ಷಣೆ ಮಾಡುವಂತಹ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಆ ರೀತಿಯ ದಕ್ಷತೆಯನ್ನು ತೋರಿಸಿಕೊಟ್ಟವರು ಅಬ್ದುಲ್ ಖಾದರ್ ಅವರು ಎಂದು ಹೆತ್ತೇನಹಳ್ಳಿ ಮಂಜುನಾಥ್ ನುಡಿದರು.

ನಿವೃತ್ತರಾದ ಎಎಸ್ಪಿ ಅಬ್ದುಲ್ ಖಾದರ್ ದಂಪತಿಯನ್ನು ಈ ವೇಳೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಎಡಿಜಿಪಿ ವಝೀರ್ ಅಹಮದ್ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಗೋಪಾಲ್, 12 ಬಟಾಲಿಯನ್ ಕೆಎಸ್‌ಆರ್‌ಪಿ ಕಮಾಂಡೆಂಟ್ ಹಂಝಾ ಹುಸೇನ್, ತುಮಕೂರು ಎಸ್ಪಿ ಅಶೋಕ್‌ ಕೆ.ವಿ, ಡಿಎಸ್ಪಿರವರುಗಳಾದ ಚಂದ್ರಶೇಖರ್, ಶೇಖರ್, ವಿನಾಯಕ್ ಶೆಟಗೇರಿ, ಮಂಜುನಾಥ, ಓಂ ಪ್ರಕಾಶ್, ಡಿಎಆರ್ ಡಿಎಸ್ಪಿ ಪರಮೇಶ್ ಹಾಗೂ ನಗರ ಮತ್ತು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ನಾಗರಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X