ಹುಬ್ಬಳ್ಳಿ | ಧರ್ಮದ ಕಾಲಂ’ನಲ್ಲಿ ‘ನವಬೌದ್ಧ’ ಎಂದು ನಮೂದಿಸಲು ಮೂಲನಿವಾಸಿ ದ್ರಾವಿಡ ಒಕ್ಕೂಟ ಕರೆ

Date:

Advertisements

ಒಳ ಮೀಸಲಾತಿ ಜಾರಿಗೆ ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳ ನಿಖರ ದತ್ತಾಂಶ ಸಂಗ್ರಹದ ಸಮೀಕ್ಷೆಯಲ್ಲಿ ಧರ್ಮದ ಕಾಲಂ ಸೇರಿಸಬೇಕು. ಈ ವೇಳೆ ಬಲಗೈ ಸಮುದಾಯದ 37 ಉಪಜಾತಿಗೆ ಸೇರಿದವರು ತಮ್ಮ ಉಪಜಾತಿಯನ್ನು ಛಲವಾದಿ ಅಥವಾ ಹೊಲೆಯರು ಎಂದು ನಮೂದಿಸಬೇಕು ಮತ್ತು ಧರ್ಮದ ಕಾಲಂನಲ್ಲಿ ’ನವಬೌದ್ಧ’ ಎಂದು ನಮೂದಿಸಬೇಕು ಎಂದು ಭಾರತೀಯ ಮೂಲ ನಿವಾಸಿ ದ್ರಾವಿಡ ಒಕ್ಕೂಟದ ರಾಜ್ಯ ಸಂಚಾಲಕ ಶಂಕರ್ ಅಜ್ಮನಿ ಹೇಳಿದರು.

ಹುಬ್ಬಳ್ಳಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳ ನಿಖರ ದತ್ತಾಂಶ ಸಂಗ್ರಕ್ಕಾಗಿ ರಾಜ್ಯ ಸರ್ಕಾರ ಹೊಸದಾಗಿ ಸಮೀಕ್ಷೆ ನಡೆಸಲು‌ ಮುಂದಾಗಿದ್ದು, ಈ ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂ ಇಲ್ಲ. ಧರ್ಮವನ್ನು ನಮೂದಿಸದಿದ್ದರೆ ಸಂವಿಧಾನಾತ್ಮಕವಾಗಿ ಸಿಗಬೇಕಾದ ಸೌಲಭ್ಯಗಳು ಕೆಲವು ಉಪಜಾತಿಗಳಿಗೆ ಸಿಗುವುದಿಲ್ಲ. ಹೀಗಾಗಿ ಧರ್ಮದ ಕಾಲಂ ಸೇರಿಸಬೇಕು. ಮತ್ತು ಸಮಾಜದವರು ಜಾತೀಯ ಸಮೀಕ್ಷೆ ವೇಳೆ ಧರ್ಮದ ಕಾಲಂನಲ್ಲಿ ’ನವಬೌದ್ಧ’ ಎಂದು ನಮೂದಿಸಬೇಕು ಆಗ ಮಾತ್ರ ಶೈಕ್ಷಣಿಕ ಮತ್ತು ರಾಜಕೀಯವಾಗಿ ಸರ್ಕಾರದ ಎಲ್ಲ ಸೌಲಭ್ಯ ಪಡೆಯಲು ಸಾಧ್ಯ ಎಂದರು.

ಸದಾಶಿವ ಆಯೋಗ ಹಾಗೂ ಜೆಸಿ ಮಾಧುಸ್ವಾಮಿ ಆಯೋಗದ ವರದಿಯಲ್ಲಿನ ನ್ಯೂನ್ಯತೆ ಸರಿಪಡಿಸಿ ವೈಜ್ಞಾನಿಕವಾಗಿ ಮಾಹಿತಿ ಸಂಗ್ರಹಿಸಲು ಮೇ 5 ರಿಂದ ಸಮೀಕ್ಷೆ ನಡೆಯಲಿದೆ. ಸಮೀಕ್ಷೆ ನಡೆಸಲು ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರ ಈಗಾಗಲೇ ನಿಯೋಜಿಸಿದೆ. ಪರಿಶಿಷ್ಟ ಜಾತಿಗಳಲ್ಲಿ ಛಲವಾದಿ ಅಂದರೆ; ಬಲಗೈ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಿಖರ ಮಾಹಿತಿ ಗೊತ್ತಾಗಬೇಕಾದರೆ ಎಲ್ಲರೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದ್ದು ಸಮೀಕ್ಷೆಯಲ್ಲಿ ಭಾಗವಹಿಸಿದವರು ಆನ್ಲೈನ್ ಮೂಲಕ ನೊಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಮೀಕ್ಷೆ ಮಾಡಲು ಮನೆಗೆ ಬಂದಾಗ ಮಾಹಿತಿ ಕೊಡಲು ಸಾಧ್ಯವಾಗದಿದ್ದರೆ; ಅಂಗನವಾಡಿ ಶಿಶುವಿಹಾರಗಳಲ್ಲಿನ ಬೂತ್ ಕಚೇರಿಗೆ ಹೋಗಿ ಮಾಹಿತಿ ಕೊಡಬೇಕು. ಬೇರೆ ರಾಜ್ಯ ವಿದೇಶಗಳಲ್ಲಿ ಇರುವವರು ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು ಎಂದರು.

Advertisements

ಈ ಸಂದರ್ಭದಲ್ಲಿ ಗಣೇಶ್ ದೊಡ್ಡಮನಿ, ಇಂದೂಮತಿ, ಮಂಜುನಾಥ್ ಗುಡಿಮನಿ, ಫಕೀರಪ್ಪ ಚಲವಾದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X