ಪಾಕ್‌ ಮಹಿಳೆಯನ್ನು ಮದುವೆಯಾಗಿದ್ದ ಯೋಧ; ಸಿಆರ್​ಪಿಎಫ್‌ನಿಂದ ವಜಾ

Date:

Advertisements

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್‌ ಕಳಿಸಲಾಗಿದೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವವರಲ್ಲಿ ಕೆಲವರು ಭಾರತೀಯರನ್ನು ವಿವಾಹವಾಗಿದ್ದು, ಅವರು ಪಾಕ್‌ಗೆ ಮರಳಲು ನಿರಾಕರಿಸಿದ್ದಾರೆ. ಈ ನಡುವೆ, ಪಾಕಿಸ್ತಾನ್ ಮೂಲದ ಮಹಿಳೆಯನ್ನು ವಿವಾಹವಾಗಿದ್ದ ಕಾರಣಕ್ಕೆ ಸಿಆರ್‌ಪಿಎಫ್‌ ಯೋಧನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಘರೋಟಾ ನಿವಾಸಿಯಾಗಿರುವ ಮುನೀರ್ ಅಹ್ಮದ್ ಅವರನ್ನು ಕೇಂದ್ರ ಮೀಸಲು ಪೊಲೀಸ್‌ ಪಡೆಯಿಂದ (ಸಿಆರ್‌ಪಿಎಫ್‌) ವಜಾಗೊಳಿಸಲಾಗಿದೆ. ಮುನೀರ್ ಅವರು 2017ರಿಂದ ಸಿಆರ್‌ಪಿಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಪಾಕಿಸ್ತಾನಿ ಮಹಿಳೆ ಮಿನಾಲ್ ಖಾನ್ ಅವರನ್ನು 2023ರ ಮೇ ತಿಂಗಳಿನಲ್ಲಿ ಆನ್‌ಲೈನ್‌ನಲ್ಲಿ ಮದುವೆಯಾಗಿದ್ದರು. ಬಳಿಕ, ಮಿನಾಲ್ ಅವರು ಭಾರತಕ್ಕೆ ಬಂದಿದ್ದರು. ಆದರೆ, ಪಹಲ್ಗಾಮ್‌ ದಾಳಿಯ ಬೆನ್ನಲ್ಲೇ ಅವರನ್ನು ಸೇವೆಯಿಂದ ತೆಗೆದುಹಾಕಲಾಗಿದೆ.

ಮುನೀರ್ ಅವರು ತಮ್ಮ ಮದುವೆಯನ್ನು ಮರೆಮಾಚಿದ್ದರು. ಅಲ್ಲದೆ, ಮಿನಾಲ್ ಅವರ ವೀಸಾ ಅವಧಿ ಮುಗಿದ ಬಳಿಕವೂ ಅವರು ಭಾರತದಲ್ಲಿಯೇ ಉಳಿದಿದ್ದರು. ಅವರನ್ನು ಮುನೀರ್ ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದರು ಎಂದು ಆರೋಪಿಸಲಾಗಿದೆ.ಇದು ಗಂಭೀರ ದುಷ್ಕೃತ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದಿರುವ ಸಿಆರ್‌ಪಿಎಫ್‌ ಸೇವೆಯಿಂದ ವಜಾಗೊಳಿಸಿದೆ.

Advertisements

ಈ ವರದಿ ಓದಿದ್ದೀರಾ?: ಉಗ್ರರ ದಾಳಿಗೆ ಹತ್ತು ದಿನ: ‘ಹುಡುಕಿ ಹುಡುಕಿ ಬೇಟೆ’ಯಾಡುತ್ತಿರುವುದು ಯಾರನ್ನು?

“ವಿವಾಹಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಸಿಆರ್‌ಪಿಎಫ್‌ನಿಂದ ಅನುಮತಿ ಪಡೆದುಕೊಂಡೇ ವಿವಾಹವಾಗಿದ್ದೇನೆ. ನಮ್ಮ ಮದುವೆಗೆ 2023ರ ಏಪ್ರಿಲ್ 30ರಂದು ಸಿಆರ್‌ಪಿಎಫ್‌ ಅನುಮತಿ ನೀಡಿತ್ತು. ಆದರೆ, ಇದೀಗ ನನ್ನನ್ನು ವಜಾಗೊಳಿಸಲಾಗಿದೆ. ಇದು ನಮಗೆ ಆಘಾತ ಉಂಟುಮಾಡಿದೆ. ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತೇನೆ” ಎಂದು ಮುನೀರ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X