ಉಡುಪಿ | ದೇಶದ ಹಾಗೂ ಜನರ ಭದ್ರತೆಗೆ ಆದ್ಯತೆ ನೀಡಬೇಕು – ವಿನಯ್ ಕುಮಾರ್ ಸೊರಕೆ

Date:

Advertisements

ಜಾತಿ, ಧರ್ಮ, ಆಕ್ರೋಶ ಇವುಗಳೆಲ್ಲಕ್ಕಿಂತ ಮುಖ್ಯವಾದುದು ದೇಶದ ಜನರ ರಕ್ಷಣೆ ಎಂದು ಪಹಲ್ ಗಾಮ್ ಹತ್ಯಾಕಾಂಡವನ್ನು ಖಂಡಿಸುತ್ತಾ ಇದು ಕೇಂದ್ರ ಸರಕಾರದ ವೈಫಲ್ಯವೆಂದು ತಿಳಿಯಬಹುದಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ಸಿನ ಮಾಸಿಕ ಸಭೆಯನ್ನು ಉದ್ದೇಶಿಸಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಂಸದ ಜಯಪ್ರಕಾಶ್ ಹೆಗಡೆ, ಕೇವಲ ಭಾಷಣ ಮಾಡಿ ಪ್ರಯೋಜನವಿಲ್ಲ ಕಾರ್ಯಸಾಧನೆ ಆಗಬೇಕು, ಕಾರ್ಯಕರ್ತರ ಬೇಡಿಕೆ ಪೂರೈಸಲು ಪಕ್ಷ ಗಮನ ಹರಿಸಬೇಕೆಂದು ಹೆಚ್ಚಿನ ಸದಸ್ಯರು ಒತ್ತಾಯಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕೈಗೊಂಡ ಕಾರ್ಯಕ್ರಮಗಳನ್ನು ವಿವರಿಸಿ ಮೇ 6 ರಂದು ಬೈಂದೂರಿನಲ್ಲಿ ನಡೆಯುವ ಜೈ ಗಾಂಧಿ, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಎಲ್ಲರೂ ಬರಬೇಕೆಂದು ವಿನಂತಿಸಿದರು.

Advertisements

ಸಭೆಯಲ್ಲಿ ಪ್ರಮುಖರಾದ ಎಂ .ಎ . ಗಪೂರ್ ಕಿಶನ್ ಹೆಗ್ಡೆ ಕೊಲ್ಕೆಬೈಲು, ಮಲ್ಯಾಡಿ ಶಿವರಾಮ್ ಶೆಟ್ಟಿ, ದಿನೇಶ್ ಪುತ್ರನ್, ರಮೇಶ್ ಕಾಂಚನ್, ಹರಿಪ್ರಸಾದ್ ಶೆಟ್ಟಿ, ಗೋಪಿನಾಥ್ ಭಟ್ , ಸಂತೋಷ್ ಕುಲಾಲ್, ವೈ ಸುಕುಮಾರ್, ಮಹಾಬಲ ಕುಂದರ, ನರಸಿಂಹಮೂರ್ತಿ, ಶರ್ಪುದ್ದೀನ್, ಅಶೋಕ ಎ ಎರ್ಮಲ್ ಹರೀಶ್ ಕಿಣಿ, ಶಬೀರ್ ಅಹಮದ್, ಸೌರಬ್ ಬಲ್ಲಾಳ್, ಜಯಕುಮಾರ್, ಪ್ರತ್ಯಾತ್ ಶೆಟ್ಟಿ, ಪ್ರಶಾಂತ್ ಜತ್ತನ್, ರೋಷನ್ ಶೆಟ್ಟಿ, ನಾಗೇಶ್ ಉದ್ಯಾವರ, ಭುಜಂಗಶೆಟ್ಟಿ, ಸುರೇಶ್ ಶೆಟ್ಟಿ, ಬನ್ನಂಜೆ ದಿಲೀಪ್ ಹೆಗ್ಡೆ, ಜ್ಯೋತಿ ಹೆಬ್ಬಾರ್, ಕಿರಣ್ ಹೆಗಡೆ, ಶಿರಿಯಣ್ಣ ಶೆಟ್ಟಿ, ಇಸ್ಮಾಯಿಲ್ ಆತ್ರಾಡಿ, ಹರೀಶ್ ಶೆಟ್ಟಿ ಪಾಂಗಳ, ಮುರಳಿ ಶೆಟ್ಟಿ, ಲಕ್ಷ್ಮೀಶ ಶೆಟ್ಟಿ, ಬಾಲಕೃಷ್ಣ ಪೂಜಾರಿ, ಸಂತೋಷ್ ಕುಮಾರ್ ಹಕ್ಲಾಡಿ, ಸಂಧ್ಯಾ ತಿಲಕ್ ರಾಜ್, ಲೂಯಿಸ್ ಲೋಬೊ, ಸುಕನ್ಯಾ ಪೂಜಾರಿ, ಸಜ್ಜನ್ ಶೆಟ್ಟಿ, ಆನಂದ ಪೂಜಾರಿ, ರಮೇಶ್ ಶೆಟ್ಟಿ, ಕೀರ್ತಿ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಳೆದ ಅವಧಿಯಲ್ಲಿ ಅಗಲಿದ ಕಾಂಗ್ರೆಸ್ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಉಪಾಧ್ಯಕ್ಷ ನೀರೇ ಕೃಷ್ಣ ಶೆಟ್ಟಿ ಸ್ವಾಗತಿಸಿ , ಜಿಲ್ಲಾ ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಕೆ ಅಣ್ಣಯ್ಯ ಸೇರಿಗಾರ್ ನಿರೂಪಿಸಿ, ಕೆಪಿಸಿಸಿ ಸ್ಪೆಷಲಿಸ್ಟ್ ವೇರೋನಿಕ ಕರ್ನೆಲಿಯೋ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X