ಮಧ್ಯಪ್ರದೇಶ | ತನ್ನೊಂದಿಗೆ ಮಾತು ನಿಲ್ಲಿಸಿದ್ದಕ್ಕೆ ಸಹಪಾಠಿ ಬಾಲಕಿಯನ್ನು ಕೊಂದ ಬಾಲಕ

Date:

Advertisements

ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ಕಾರಣಕ್ಕೆ 17 ವರ್ಷದ ಸಹಪಾಠಿ ಬಾಲಕಿಯನ್ನು ಬಾಲಕನೋರ್ವ ಕೊಂದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.

ಧಾರ್ ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಉಮರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲದಲ್ಲಿ ಶನಿವಾರ 12ನೇ ತರಗತಿಯ (ದ್ವಿತೀಯ ಪಿಯುಸಿ) ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಜಗಳದ ವೇಳೆ 4ನೇ ತರಗತಿ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿದ ಸಹಪಾಠಿಗಳು

Advertisements

ಈ ಬಗ್ಗೆ ಮಾಹಿತಿ ನೀಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತೇಶ್ ಗರ್ಗ್, ಬಾಲಕಿ ಕೊಲೆಯ ಬಗ್ಗೆ ಮಾಹಿತಿ ತಿಳಿದ ಬಳಿಕ ತನಿಖೆಯನ್ನು ಆರಂಭಿಸಲಾಗಿದೆ. ತನಿಖೆ ವೇಳೆ ಸಹಪಾಠಿಯೊಬ್ಬ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.

ವಿಚಾರಣೆಯ ವೇಳೆ ಆರೋಪಿ ಬಾಲಕ ಬಾಲಕಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಅವಳು ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ಕಾರಣ ನನಗೆ ಬೇಸರವಾಯಿತು, ಸಿಟ್ಟು ಬಂದಿತ್ತು. ಅದಕ್ಕೆ ಕೊಂದೆ ಎಂದು ಅವನು ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಾಗಿದೆ.

ಶುಕ್ರವಾರ ರಾತ್ರಿ ಕೃಷಿ ಹೊಲದಲ್ಲಿ ತನ್ನನ್ನು ಭೇಟಿಯಾಗುವಂತೆ ಆರೋಪಿಯು ಬಾಲಕಿಗೆ ಹೇಳಿದ್ದಾನೆ. ಅಲ್ಲಿ ಹರಿತವಾದ ಆಯುಧದಿಂದ ಆಕೆಯನ್ನು ಕೊಂದಿದ್ದಾನೆ ಎಂದು ಹೇಳಲಾಗಿದೆ. ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇವನ ಕ್ರೂರತೆ ಉಗ್ರತೆಗೆೇನು ಹೊರತಲ್ಲ. ಇಂತಹವರಿಗೆ ಶೀಘ್ರವಾಗಿ ಉಗ್ರ ಶಿಕ್ಷೆಯನ್ನು ವಿಧಿಸುವವರಿಗೆ ನಮ್ಮ ಪ್ರಾರ್ಥನೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X