ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ: ಸಿಎಂ ಸಿದ್ದರಾಮಯ್ಯ

Date:

Advertisements
  • ಸಾರಿಗೆ ಇಲಾಖೆ ಚಾಲಕರ ಆತ್ಮಹತ್ಯೆ ಆರೋಪದಲ್ಲಿ ಹುರುಳಿಲ್ಲ
  • ಇಲಾಖೆ ವರ್ಗಾವಣೆ ಮಾಡಿದ್ದಕ್ಕೆ ವಿಷ ಕುಡಿದಿದ್ದಾರೆ: ಸಿದ್ದರಾಮಯ್ಯ

ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಜಿ ಉಪಪ್ರಧಾನಮಂತ್ರಿ ಡಾ. ಬಾಬು ಜಗಜೀವನ್ ರಾಂ ಅವರ 37 ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮೃತ ಚಾಲಕರು ಡೆತ್ ನೋಟಿನಲ್ಲಿ ಸಚಿವ ಚಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವರ ರಾಜೀನಾಮೆ ಕೊಡಬೇಕು ಎಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ವಿಚಾರ ಮಾಡುತ್ತೇನೆ. ಅವರ ಪತ್ನಿ ಪಂಚಾಯತಿ ಸದಸ್ಯರು, ಅಧ್ಯಕ್ಷರಾಗುವ ಪ್ರಯತ್ನ ಮಾಡುತ್ತಿದ್ದಾರೆ. ಇಲಾಖೆ ವರ್ಗಾವಣೆ ಮಾಡಿದ್ದು, ವರ್ಗಾವಣೆ ಮಾಡಿದ ಕಾರಣಕ್ಕೆ ವಿಷ ಕುಡಿದಿದ್ದಾರೆ” ಎಂದರು.

Advertisements

ಕುಮಾರಸ್ವಾಮಿ ಹತಾಶರಾಗಿದ್ದಾರೆ

ಎಚ್‌ ಡಿ ಕುಮಾರಸ್ವಾಮಿ ಅವರು ವರ್ಗಾವಣೆಗಳ ಬಗ್ಗೆ ಹತಾಶರಾಗಿದ್ದಾರೆ. ಸರ್ಕಾರ ವರ್ಗಾವಣೆ ಮಾಡಲೇಬೇಕು, ಮಾಡುತ್ತಿದೆ. ಅದಕ್ಕೆ ದಂಧೆ ನಡೆದಿದೆ, ಲಂಚ ಪಡೆದಿದ್ದಾರೆ ಎನ್ನುವುದು ಸುಳ್ಳು ಆರೋಪ. ಅವರ ಕಾಲದಲ್ಲಿಯೂ ವರ್ಗಾವಣೆ ಆಗಿದ್ದವು. ಅವರು ದುಡ್ಡು ಪಡೆದಿದ್ದರೆ? ಊಹೆ ಮೇಲೆ ಹೇಳಲಾಗುವುದಿಲ್ಲ. ಹೊಸ ಸರ್ಕಾರ ಬಂದಿದೆ. ವರ್ಗಾವಣೆಯನ್ನು ಆಡಳಿತದ ಹಿತದೃಷ್ಟಿಯಿಂದ ಮಾಡಬೇಕು. ಮಾರ್ಚ್, ಏಪ್ರಿಲ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವರ್ಗಾವಣೆ ಆಗಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆಗಳಾಗುತ್ತಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಸೂರು ಸ್ಯಾಂಡಲ್ ಸೋಪ್: ಭ್ರಷ್ಟ ಜನಪ್ರತಿನಿಧಿ, ಅಧಿಕಾರಶಾಹಿಗೆ ಬೇಕಿದೆ ಚಾಟಿಯೇಟು

ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ

ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಎಚ್ ಡಿ ಕುಮಾರಸ್ವಾಮಿ ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ಮಾಡಿರುವ ಯಾವ ಆರೋಪಗಳನ್ನು ತಾರ್ತಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರಾ? ಎಂದು ಪ್ರಶ್ನಿಸಿದರು.

ಮಾಜಿ ಶಾಸಕ ಯತೀಂದ್ರ ಅವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಮಾತನಾಡಿ, “ಅವರ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರ ಮನೆ ಮಗ, ಅವರ ಅಣ್ಣ ಸಚಿವರಾಗಿದ್ದವರು, ಅವರ ಪತ್ನಿ ಶಾಸಕರು, ಅವರ ತಂದೆ ಪ್ರಧಾನಿಗಳಾಗಿದ್ದವರು, ಅವರ ಅಣ್ಣನ ಮಕ್ಕಳು ಶಾಸಕರಾಗಿದ್ದಾರಲ್ಲ, ಅವರನ್ನು ಏನಂತ ಕರೆಯಬೇಕು ಎಂದು ಕೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X