ರೇಬೀಸ್‌ ಲಸಿಕೆ ಪಡೆದರೂ ಬಾಲಕಿ ಸಾವು; ತಿಂಗಳಲ್ಲಿ ಕೇರಳದಲ್ಲಿ ಇದು ಮೂರನೇ ಪ್ರಕರಣ

Date:

Advertisements

ರೇಬೀಸ್ ಲಸಿಕೆ ಪಡೆದರೂ ಚಿಕಿತ್ಸೆ ಪಡೆಯುತ್ತಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.

ಕೊಲ್ಲಂನ ಕುನ್ನಿಕೋಡ್‌ನ ನಿಯಾ ಫೈಸಲ್‌ ಮೃತ ಬಾಲಕಿ. ರೇಬೀಸ್‌ ಪತ್ತೆಯಾದ ಬಳಿಕ ಆಕೆಯನ್ನು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಸಾವಿನೊಂದಿಗೆ ಕಳೆದ ಒಂದು ತಿಂಗಳಲ್ಲಿ ಕೇರಳದಲ್ಲಿ ರೇಬೀಸ್ ಸೋಂಕಿನಿಂದ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ಮೂರಕ್ಕೇರಿದೆ.

ಏಪ್ರಿಲ್ 8 ರಂದು ಬಾಲಕಿ ಅಂಗಳದಲ್ಲಿ ಆಟವಾಡುತ್ತಿದ್ದಾಗ ಬೀದಿ ನಾಯಿ ಕಚ್ಚಿತ್ತು. ಅಂಗಳದಲ್ಲಿದ್ದ ಬಾತುಕೋಳಿ ಮೇಲೆ ದಾಳಿ ಮಾಡಲು ಮುಂದಾಗಿದ್ದಾಗ ಬಾಲಕಿ ರಕ್ಷಿಸಲು ಹೋಗಿದ್ದಳು. ಈ ವೇಳೆ ನಾಯಿ ಬಾಲಕಿಯ ಮೊಣಕೈಗೆ ಕಚ್ಚಿತ್ತು. ಬಾಲಕಿಯನ್ನು ಕೂಡಲೇ ವಿಲಕ್ಕುಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ರೇಬೀಸ್ ಲಸಿಕೆಯ ಮೊದಲ ಡೋಸ್ ನೀಡಲಾಯಿತು. ನಂತರ ಏ.11 ಮತ್ತು 15 ರಂದು ಕ್ರಮವಾಗಿ ಎರಡನೇ ಮತ್ತು ಮೂರನೇ ಡೋಸ್ ನೀಡಲಾಯಿತು. ಅಂತಿಮ ಡೋಸ್ ಅನ್ನು ಮೇ 6 ರಂದು ನೀಡಲು ನಿಗದಿಪಡಿಸಲಾಗಿತ್ತು.

Advertisements

ಎರಡನೇ ಡೋಸ್‌ ಪಡೆದ ಕೆಲ ದಿನಗಳಲ್ಲಿ ಆಕೆಗೆ ಜ್ವರ ಬಂದಿದೆ. ನಾಯಿ ಕಚ್ಚಿದ ಮೊಣಕೈಯಲ್ಲಿ ನೋವು ಅನುಭವಿಸಲು ಪ್ರಾರಂಭಿಸಿದಳು. ನಂತರ ಆಕೆಯನ್ನು ಪುನಲೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ವಿಶೇಷ ಆರೈಕೆಗಾಗಿ ಸ್ಯಾಟ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಬಾಲಕಿಯನ್ನು ಕಚ್ಚಿದ್ದ ನಾಯಿಯನ್ನು ಸ್ಥಳೀಯ ನಿವಾಸಿಗಳು ಓಡಿಸಿದ್ದರೂ ಮರುದಿನ ಹತ್ತಿರದ ಹೊಲದಲ್ಲಿ ಅದು ಶವವಾಗಿ ಪತ್ತೆಯಾಗಿತ್ತು.

2021 ರಲ್ಲಿ ರಾಜ್ಯದಲ್ಲಿ 11 ಮಂದಿ ರೇಬೀಸ್‌ನಿಂದ ಸಾವನ್ನಪ್ಪಿದ್ದಾರೆ. 2022 ರಲ್ಲಿ 27, 2023 ರಲ್ಲಿ 25,2024 ರಲ್ಲಿ 26 ಮಂದಿ ಮೃತಪಟ್ಟಿದ್ದಾರೆ. ಈ ವರ್ಷದ ಐದನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, 14 ಜನರು ಸಾವನ್ನಪ್ಪಿದ್ದಾರೆ. ಇವರಲ್ಲಿ ಹೆಚ್ಚಿನವರು ಮಕ್ಕಳು. ಕಳೆದ 5 ವರ್ಷಗಳಲ್ಲಿ 102 ಜನರು ರೇಬೀಸ್‌ನಿಂದ ಸಾವನ್ನಪ್ಪಿದ್ದಾರೆ. ಈ ಪೈಕಿ 20 ಮಂದಿ ಲಸಿಕೆ ಹಾಕಿಸಿಕೊಂಡಿದ್ದರೂ ಪ್ರಾಣ ಕಳೆದುಕೊಂಡಿದ್ದಾರೆ.

ನಾಯಿ ಕಚ್ಚಿದ ಮೊದಲ ಕೆಲವು ನಿಮಿಷಗಳು ನಿರ್ಣಾಯಕ ಎಂದು ವೈದ್ಯರು ಹೇಳುತ್ತಾರೆ. ಗಾಯವನ್ನು ಸೋಪಿನಿಂದ ಕೆಲವು ನಿಮಿಷ ತೊಳೆದುಕೊಂಡು ಲಸಿಕೆ ಹಾಕಿಸಿಕೊಳ್ಳುವುದು ತುರ್ತಾಗಿ ಮಾಡಬೇಕಾದ ಕೆಲಸಗಳಾಗಿವೆ. ರೇಬೀಸ್ ರೋಗವು ಅಂತಿಮ ಹಂತ ತಲುಪಿದರೆ ಯಾವುದೇ ಪರಿಣಾಮಕಾರಿ ಚಿಕಿತ್ಸೆ ಇಲ್ಲ ಮತ್ತು ಇದು ಶೇ. 100 ಮಾರಣಾಂತಿಕವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X