ರಾಜಸ್ಥಾನ | ಗಣಿಗಾರಿಕೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೈಬಿಡಲು 20 ಲಕ್ಷ ರೂ. ಲಂಚ: ಶಾಸಕನ ಬಂಧನ

Date:

Advertisements

ರಾಜ್ಯ ವಿಧಾನಸಭೆಯಲ್ಲಿ ಗಣಿಗಾರಿಕೆಗೆ ಸಂಬಂಧಿಸಿದ ಮೂರು ಪ್ರಶ್ನೆಗಳನ್ನು ಕೈಬಿಡಲು 20 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಭಾರತ್ ಆದಿವಾಸಿ ಪಕ್ಷದ ಶಾಸಕ ಜೈಕೃಷ್ಣ ಪಟೇಲ್ ಅವರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದೆ ಎಂದು ಎಸಿಬಿಯ ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.

ತೋಡಾಭಿಮ್ ಪ್ರದೇಶದಲ್ಲಿ ಗಣಿಗಾರಿಕೆ ಗುತ್ತಿಗೆಗೆ ಸಂಬಂಧಿಸಿದ ಮೂರು ಪ್ರಶ್ನೆಗಳನ್ನು ಕೈಬಿಡಲು ಪಟೇಲ್ ಗಣಿ ಮಾಲಿಕನಿಂದ 2.5 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಜೈಕೃಷ್ಣ ಪಟೇಲ್ ಬನ್ಸ್ವಾರಾ ಜಿಲ್ಲೆಯ ಬಗಿಡೋರಾ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಲೋಕಸಭಾ ಚುನಾವಣೆ ವೇಳೆ ನಡೆದ ಉಪಚುನಾವಣೆಯಲ್ಲಿ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಗಣಿಗಾರಿಕೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೈಬಿಡಲು ಪಟೇಲ್ ದೂರುದಾರರಿಂದ 10 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ 2.5 ಕೋಟಿ ರೂ.ಗೆ ಒಪ್ಪಂದವನ್ನು ಮಾಡಲಾಯಿತು. ಬನ್ಸ್ವಾರಾದಲ್ಲಿ ಈ ಮೊದಲು ಅವರಿಗೆ 1 ಲಕ್ಷ ರೂ. ನೀಡಿದ್ದರು. ಇದೀಗ ಮತ್ತೆ 20 ಲಕ್ಷ ರೂ. ಪಡೆಯುವಾಗ ಶಾಸಕರು ಎಸಿಬಿ ಬಲೆಗೆ ಬಿದ್ದಿದ್ದಾರೆ.

ʼಪ್ರಕರಣದ ಬಗ್ಗೆ ವಿಧಾನಸಭಾ ಸ್ಪೀಕರ್‌ಗೆ ಮಾಹಿತಿ ನೀಡಲಾಗಿದೆ. ಅವರ ಅನುಮತಿಯ ಮೇರೆಗೆ ಕಾರ್ಯಾಚರಣೆ ನಡೆಸಿ ಶಾಸಕರನ್ನು ಬಂಧಿಸಲಾಯಿತು. ಶಾಸಕರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಮತ್ತು ಲಂಚವನ್ನು ಪಡೆದಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಎಸಿಬಿ ಬಳಿ ಆಡಿಯೋ ಮತ್ತು ವಿಡಿಯೋ ಪುರಾವೆಗಳಿವೆ. ಇದು ಅವರನ್ನು ಶಿಕ್ಷೆಗೆ ಒಳಪಡಿಸಲು ಸಹಾಯ ಮಾಡುತ್ತದೆʼ ಎಂದು ಎಸಿಬಿ ಮಹಾನಿರ್ದೇಶಕ ರವಿಪ್ರಕಾಶ್ ಮೆಹರ್ದಾ ಹೇಳಿದರು.

ಭಾರತ್ ಆದಿವಾಸಿ ಪಕ್ಷದ (ಬಿಎಪಿ) ಸಂಚಾಲಕ ಮತ್ತು ಬನ್ಸ್ವಾರಾ ಸಂಸದ ರಾಜ್ಕುಮಾರ್ ರೋಟ್ ಈ ಕುರಿತು ಪ್ರತಿಕ್ರಿಯಿಸಿ, ಶಾಸಕರ ಕೈವಾಡ ಕಂಡುಬಂದರೆ ಅವರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X