ಶ್ರೀನಿವಾಸಪುರ ಮಾವಿನ ಮಾರುಕಟ್ಟೆ ಮತ್ತೆ ಸಜ್ಜು; ಮೇ 15ರಿಂದ ಆರಂಭ

Date:

Advertisements

ದೇಶದ ಅತಿದೊಡ್ಡ ಮಾವು ಉತ್ಪಾದನಾ ಕ್ಷೇತ್ರವಾಗಿ ಪ್ರಸಿದ್ಧಿಪಡೆದಿರುವ ಶ್ರೀನಿವಾಸಪುರದಲ್ಲಿನ ಮಾವಿನ ಮಾರುಕಟ್ಟೆ ಈ ವರ್ಷದ ಮೇ 15ರಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಈಗಾಗಲೇ ತಯಾರಿ ಕಾರ್ಯಗಳು ತೀವ್ರಗೊಂಡಿದ್ದು, ಎಪಿಎಂಸಿ ಹಾಗೂ ಖಾಸಗಿ ಮಾರುಕಟ್ಟೆಗಳ ಮಾಲೀಕರು, ರೈತರು ಮತ್ತು ವ್ಯಾಪಾರಸ್ಥರು ಸಜ್ಜಾಗುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಸುಮಾರು 57 ಸಾವಿರ ಎಕರೆ ಭಾಗದಲ್ಲಿ ಮಾವು ಬೆಳೆಯಲಾಗುತ್ತಿದೆ. ಈ ಹಿನ್ನೆಲೆ ಶ್ರೀನಿವಾಸಪುರ ‘ಮಾವಿನ ನಾಡು’, ‘ಮಾವಿನ ರಾಜಧಾನಿ’ ಎಂಬ ಹೆಸರನ್ನು ಸಂಪೂರ್ಣವಾಗಿ ಸ್ಥಾಪಿಸಿಕೊಂಡಿದೆ. ಇಲ್ಲಿನ ಮಾವಿಗೆ ರಾಜ್ಯದಷ್ಟೇ ಅಲ್ಲದೆ ದೇಶಾದ್ಯಂತ ಭಾರೀ ಬೇಡಿಕೆ ಉಂಟಾಗಿದೆ.

ತೋತಾಪುರಿ, ನೀಲಂ, ರಾಜಗಿರ, ಮಲಿಕಾ‌, ಬಾದಾಮಿ, ಬೇನಿಶ, ಮಲ್ಗೋಬಾ, ಖುದ್ದೂಸ್, ಶಕರ್ ಬೀಜ್, ದೇಸರಿ, ಇಮಾಮ್ ಪಸಂದ್, ಪಾಶಾ ಪಸಂದ್, ಶೇರಿ, ದಿಲ್ ಪಸಂದ್, ಖುದಾದತ್, ಕೆಸರ್, ಚಿತ್ತೋರ, ನಾಟಿ ಸೇರಿದಂತೆ ಮುಂತಾದ ಪ್ರಸಿದ್ಧ ಮಾವು ತಳಿಗಳು ಇಲ್ಲಿ ಸಸ್ಯವಾಗುತ್ತವೆ. ಇವುಗಳಲ್ಲಿ ಕೆಲವು ತಳಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಸಿದ್ಧಿಯಾಗಿವೆ.

Advertisements
ಮಾರುಕಟ್ಟೆ 1

ಇಲ್ಲಿನ ಮಾವುಗಳು ಜಮ್ಮು-ಕಾಶ್ಮೀರ್, ಪಂಜಾಬ್, ಹರಿಯಾಣ, ರಾಜಸ್ಥಾನ್, ಗುಜರಾತ್, ಉತ್ತರ ಪ್ರದೇಶ, ಜಾರ್ಖಂಡ್, ಮಧ್ಯ ಪ್ರದೇಶ, ವೆಸ್ಟ್ ಬಂಗಾಳ, ಗೋವಾ, ಕೇರಳ, ಛತ್ತೀಸ್‌ಗಢ, ಬಿಹಾರ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಹಾಗೂ ಇತರ ರಾಜ್ಯಗಳಿಗೆ ನಿತ್ಯ ರವಾನೆಯಾಗುತ್ತವೆ. ಬಾದಾಮಿ, ಮಲಿಕಾ‌, ಬೇನಿಶ ತಳಿಗಳ ಮಾವುಗಳು ದುಬೈ, ಸೌದಿ ಅರೇಬಿಯಾ, ಸಿಂಗಾಪುರ್ ಸೇರಿದಂತೆ ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿವೆ. ಅಲ್ಲದೆ ಇಲ್ಲಿನ ಮಾವಿನಿಂದ ತಯಾರಾಗುವ ಜ್ಯೂಸ್ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳಿಗೂ ವಿದೇಶಗಳಲ್ಲಿ ಬೇಡಿಕೆ ಹೆಚ್ಚುತ್ತಿದೆ.

ಮಾರುಕಟ್ಟೆ

ಈ ಬಾರಿ ಮೇ 15ರಿಂದ ಮಾರುಕಟ್ಟೆ ಆರಂಭವಾಗಲಿದ್ದು, ರೈತರು ಹಾಗೂ ವ್ಯಾಪಾರಸ್ಥರಲ್ಲಿ ನೂತನ ಆಸೆಗಳು ಮೂಡಿವೆ. ಮಾರುಕಟ್ಟೆಗಳ ತಯಾರಿ ಕೆಲಸಗಳು ಪೂರ್ಣಗೊಂಡಿದ್ದು, ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿಸಲಾಗುತ್ತಿದೆ. ಪ್ರತ್ಯಕ್ಷ ಖರೀದಿದಾರರು, ಜೈವಿಕ ಉತ್ಪನ್ನ ಹಮ್ಮಿಕೊಳ್ಳುವ ವ್ಯಾಪಾರಸ್ಥರು, ತಾಜಾ ಮಾರುಕಟ್ಟೆ ವ್ಯವಸ್ಥಾಪಕರು ಎಲ್ಲರೂ ತಾವು ತಾವು ಸಜ್ಜಾಗುತ್ತಿದ್ದಾರೆ.

ಈ ಬಾರಿ ಮಾವಿಗೆ ಹವಾಮಾನ ಬೆಂಬಲವಾಗಿಲ್ಲವೋ ಎಂಬ ಅನುಮಾನವಿದ್ದರೂ, ಮಾರುಕಟ್ಟೆ ಆರಂಭವಾದ ಮೇಲೆ ಉತ್ಪಾದನೆಯ ಪೂರ್ಣ ಸ್ಥಿತಿ ಗೊತ್ತಾಗಲಿದೆ. ಕೆಲವೊಂದು ಪ್ರದೇಶಗಳಲ್ಲಿ ಫಲವತ್ತತೆ ಕಡಿಮೆಯಾಗಿದ್ದು, ಇದರಿಂದ ಬೆಲೆಗೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಮಾವು ಬೆಳಗಾರ ಬಿ ಎ ಸೈಯದ್ ಫಾರೂಕ್ ಬುರಕಾಯಲಕೋಟೆ ಹೇಳಿದ್ದಾರೆ.

ಇದನ್ನೂ ಓದಿದ್ದೀರಾ? ವಿಜಯಪುರ‌ | ಕಲ್ಲಂಗಡಿ ಹಣ್ಣು ಬೆಳೆದು ಲಕ್ಷಾಂತರ ರೂಪಾಯಿ ಆದಾಯ ಗಳಿಸಿದ ರೈತ

ಎಪಿಎಂಸಿ ಮಾರುಕಟ್ಟೆ ಮಂಡಿಗಳ ಮಾಲೀಕರು ಹಾಗೂ ಖಾಸಗಿ ಮಂಡಿಗಳವರು ಮೇ 15ರಿಂದ ಮಾರುಕಟ್ಟೆ ಆರಂಭವಾಗುತ್ತದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಜ್ಜಾಗುತ್ತಿದ್ದಾರೆ. ಈ ಬಾರಿ ಬೆಳೆಗೆ ಉತ್ತಮ ಬೆಲೆ ಸಿಗುತ್ತದೆಯೋ ಇಲ್ಲವೋ ಎಂಬುದು ಮಾರುಕಟ್ಟೆ ಚಟುವಟಿಕೆ ಪ್ರಾರಂಭವಾದ ನಂತರವೇ ಸ್ಪಷ್ಟವಾಗಲಿದೆ.

ವರದಿ : ಶಬ್ಬೀರ್ ಅಹ್ಮದ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X