ವಿಜಯಪುರ‌ | ಕಲ್ಲಂಗಡಿ ಹಣ್ಣು ಬೆಳೆದು ಲಕ್ಷಾಂತರ ರೂಪಾಯಿ ಆದಾಯ ಗಳಿಸಿದ ರೈತ

Date:

Advertisements

ವಿಜಯಪುರ ಪಟ್ಟಣದ ಯುವ ರೈತ ಮೆಹಬೂಬ್ ಖಾನ್ ಪಟೇಲ್ ಬೇಸಿಗೆಯಲ್ಲಿ ಮೂರು ಎಕರೆ ಜಮೀನಿನಲ್ಲಿ ಗುಣಮಟ್ಟದ ಕಲ್ಲಂಗಡಿ ಹಣ್ಣು ಬೆಳೆದು ಲಕ್ಷಾಂತರ ರೂಪಾಯಿಗಳ ಆದಾಯ ಪಡೆದಿದ್ದಾರೆ.

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಆಸಂಗಿ ರಸ್ತೆಯ ಪಕ್ಕದ ಒಟ್ಟು 24 ಎಕರೆ ಜಮೀನಿನ ಪೈಕಿ ಮೂರು ಎಕರೆಯಲ್ಲಿ ಕಲ್ಲಂಗಡಿ ಕೃಷಿ ಮಾಡಿ ಉತ್ತಮ ಫಸಲು ಪಡೆದಿದ್ದಾರೆ. ಈರುಳ್ಳಿ, ಕಬ್ಬು, ಮೆಕ್ಕೆಜೋಳ, ಬೆಳೆದು ಲಾಭ ಬರದೇ ಕೈಸುಟ್ಟುಕೊಂಡಿದ್ದರು. ಇದರಿಂದ ಹೊರಬರಲು ಆಯ್ಕೆ ಮಾಡಿಕೊಂಡ ಕಲ್ಲಂಗಡಿ ಕೃಷಿ ಉತ್ತಮ ಪ್ರತಿಫಲ ನೀಡಿದೆ.

24 ಎಕೆರೆ ಜಮೀನಿನಲ್ಲಿ 3 ಎಕರೆ ಕಲ್ಲಂಗಡಿ ಇದ್ದರೆ ಇನ್ನು 3 ಎಕರೆಯಲ್ಲಿ ಜಮೀನಿನಲ್ಲಿ ಈರುಳ್ಳಿ ಬೆಳೆ ಇದೆ. ಈರುಳ್ಳಿ ಬೆಳೆಗೆ ಅಂದಾಜು 1 ಲಕ್ಷದವರೆಗೆ ಖರ್ಚು ಮಾಡಿದ್ದರೆ ಆದರೆ ಆದರೆ ದರ ಮಾರುಕಟ್ಟೆಯಲ್ಲಿ ಒಂದು ಕ್ವಿಂಟಾಲಿಗೆ ಕೇವಲ ₹700 ಮಾತ್ರ ಇದೆ. ಇಂದಿನ ದಿನಗಳಲ್ಲಿ ಬೆಲೆ ಏರಿಕೆಯಿಂದ ಬಳಲುತ್ತಿರುವ ರೈತರಿಗೆ ತಮ್ಮ ಬೆಳೆಗೆ ಬೆಲೆ ಸಿಗದೆ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಹಗಲಿನಷ್ಟೇ ಸತ್ಯ. ಏಕೆಂದರೆ ರೈತರು ಶ್ರಮಜೀವಿಗಳು. ರೈತರ ಶ್ರಮಕ್ಕೆ ಸರಿಯಾದ ಪ್ರತಿಫಲ ಸಿಗದೇ ಇರುವುದರಿಂದ ಅನೇಕ ರೈತರು ಆತ್ಮಹತ್ಯೆಗೆ ಮೊರೆ ಹೋಗುತ್ತಿರುವುದು ದುರಂತವೇ ಸರಿ. ಈರುಳ್ಳಿ ಬೆಳೆ ಕೈಕೊಟ್ಟಿದ್ದರಿಂದ ಕಲ್ಲಂಗಡಿ ಬೆಳೆ ಕೈ ಹಿಡಿದಿರುವುದು ಮೆಹಬೂಬ್ ಖಾನ್ ಪಟೇಲರಿಗೆ ಸಂತಸ ತಂದಿದೆ.

Advertisements

ಬೇಸಾಯ ಕ್ರಮ: ಮೂರು ಎಕರೆ ಜಮೀನನ್ನು ಟ್ರ್ಯಾಕ್ಟರ್ ಮೂಲಕ ಅದಗೊಳಿಸಿದ್ದಾರೆ. ಮಣ್ಣಿನಲ್ಲಿ ಗೊಬ್ಬರ ಮಿಶ್ರಣವಾದ ಬಳಿಕ ಸಾಲಿನಿಂದ ಸಾಲಿಗೆ 4.5 ಅಡಿಯಂತೆ ಸಾಲು ಬಿಟ್ಟು ಸಾಲಿನಲ್ಲಿ ಸಸಿಯಿಂದ ಸಸಿಗೆ ಎರಡು ಅಡಿಯಂತೆ ಸಾತರದ ಕಳಶ ಕಂಪನಿಯಿಂದ ಬಿತ್ತನೆಬೀಜ ತಂದು ಬಿತ್ತಿದ್ದಾರೆ. 15 ಸಾವಿರ ಸಸಿಗಳನ್ನು ಬೆಳಸಿ ನಂತರ ನಾಟಿ ಮಾಡಿ ಹನಿ ನೀರಾವರಿ ಮೂಲಕ ಬೆಳೆಸಲಾಗಿದೆ. ಕಲ್ಲಂಗಡಿ ಹಣ್ಣಿನ ಬೇಸಾಯಕ್ಕೆ ಸೂಕ್ತ ಸಮಯವೆಂದರೆ ಫೆಬ್ರವರಿ ಮೊದಲನೇ ವಾರದಲ್ಲಿ ನಾಟಿ ಮಾಡಬೇಕು. 55ರಿಂದ 60 ದಿನಗಳಲ್ಲಿ ಫಸಲು ಕೈಗೆ ಬರುತ್ತದೆ. ಈ ಬೆಳಗೆ ರೋಗಭಾದೆ ಕಡಿಮೆ 3 ಎಕರೆಯಲ್ಲಿ 75ರಿಂದ 80 ಟನ್‌ಗಳಷ್ಟು ಇಳುವರಿ ಬಂದಿದೆ.

ಕಲ್ಲಂಗಡಿ ಹಣ್ಣು ಬೆಳೆದಿರುವ ಭೂಮಿ

ಮೆಹಬೂಬ್ ಖಾನ್ ಪಟೇಲ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕಲ್ಲಂಗಡಿ ಹಣ್ಣಿನ ಬೇಸಾಯಕ್ಕೆ 20 ಸಾವಿರದಂತೆ ಅರವತ್ತು ಸಾವಿರ ಖರ್ಚು ತಗುಲುತ್ತದೆ. ಬೆಂಗಳೂರಿನ ಮೆಟ್ರೋ ಮಾರುಕಟ್ಟೆಗೆ ಹಣ್ಣು ಕಳುಹಿಳಿಸಿರುವೆ. ಹಣ್ಣಿನ ಬೆಲೆ ಸರಾಸರಿ ಕೆ.ಜಿಗೆ ₹8ರಿಂದ ₹10ರಷ್ಟು ಇದ್ದು, ₹6 ಲಕ್ಷದಿಂದ ₹7.5ಲಕ್ಷ ಆದಾಯ ಲಭಿಸಿದೆ. ಮೂರು ಎಕರೆ ಬೆಳೆಯಿಂದ ನಿವ್ವಳ ₹6ಲಕ್ಷ ಲಾಭ ಬಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬುದ್ಧಗಯಾ ಮಹಾಬೋಧಿ ಬೌದ್ಧರಿಗೆ ಒಪ್ಪಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಇಂದಿನ ದಿನಗಳಲ್ಲಿ ವೈಜ್ಞಾನಿಕ ಬೆಳೆಗಳಿಗೆ ಪ್ರಮುಖ ಮಾಹಿತಿಯನ್ನು ಒದಗಿಸುವ ಕೆಲಸ ಸರ್ಕಾರ ಮತ್ತು ಸರ್ಕಾರಿ ಅಧಿಕಾರಿಗಳ ರೈತರಿಗೆ ಮಾಹಿತಿ ತಲುಪಿಸುವ ವ್ಯವಸ್ಥೆ ಜರೂರಾಗಿ ಆಗಬೇಕಿದೆ. ಬೆಳೆಗಳಿಗೆ ಬೆಂಬಲ ಪ್ರೋತ್ಸಾಹಧನದಂತಹ ಕಾರ್ಯಕ್ರಮಗಳಿದ್ದಾಗಿ ರೈತರ ಆತ್ಮಹತ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ಮಧ್ಯಸ್ಥಿಕೆ ವಹಿಸಿ ಇಂತಹ ರೈತರ ಸ್ಪೂರ್ತಿದಾಯಕ ಬೆಳೆಗಳನ್ನು ಇನ್ನಿತರ ರೈತರಿಗೆ ಪರಿಚಯಿಸಿ ಪ್ರೋತ್ಸಾಹಿಸಬೇಕಾಗಿದೆ.

WhatsApp Image 2025 02 05 at 18.09.20 1
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X