ಮಂಡ್ಯ | ನಗರಕೆರೆಯಲ್ಲಿ ಚಿರತೆ ಪ್ರತ್ಯಕ್ಷ; ಆತಂಕಗೊಂಡ ಕೃಷಿಕರು

Date:

Advertisements

ನಗರಕೆರೆ ಗ್ರಾಮದ ತೊರೆ ಮಾಲದಲ್ಲಿನ ಪ್ರದೇಶದಲ್ಲಿ ಚಿರತೆಯೊಂದು ತನ್ನ ಮರಿಯೊಂದಿಗಿರುವುದು ಕಂಡುಬಂದಿದೆ. ಚಿರತೆ ಪ್ರತ್ಯಕ್ಷವಾಗಿರುವುದನ್ನು ಕಂಡ ರೈತರು ಆತಂಕಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಚಿರತೆ ಇರುವಿಕೆಯ ಸುದ್ದಿ ಹರಡಿತ್ತು. ಆದರೂ ಯಾವತ್ತಿಗೂ ಚಿರತೆ ಮುಖಾಮುಖಿಯಾಗಿರಲಿಲ್ಲ. ನಿನ್ನೆ ಮಧ್ಯಾಹ್ನ ರೈತ ಎನ್ ಎಲ್ ಬಲರಾಮು ಅವರ ಪುತ್ರ ಚಿರಾಗ್ ಅವರು ತೋಟದ ಕಡೆ ಹೋದಾಗ, ಚಿರತೆ ತನ್ನ ಮರಿಯೊಂದಿಗೆ ಇರುವುದನ್ನು ಅತಿ ಸನಿಹದಲ್ಲೇ ಕಂಡಿದ್ದಾರೆ

ಇತರೆ ರೈತರನ್ನು ಕರೆದು ಚಿರತೆ ಇರುವುದನ್ನ ತೋರಿಸಿದ್ದು, ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಜತೆಗೆ ಮುಂಜಾಗೃತಾ ಕ್ರಮವಾಗಿ ಚಿರತೆ ಇರುವ ಕುರಿತು ಆರಣ್ಯ ಇಲಾಖೆ ಅಧಿಕಾರಿ ಗವಿಯಪ್ಪ ಅವರಿಗೆ ಮಾಹಿತಿ ನೀಡಿದ್ದಾರೆ.

Advertisements

ರೈತರಿಂದ ಸುದ್ದಿ ತಿಳಿದ ಗವಿಯಪ್ಪ ಮಂಗಳವಾರ ಬೆಳಿಗ್ಗೆಯೇ ತಮ್ಮ ಸಿಬ್ಬಂದಿಯನ್ನು ನಗರಕೆರೆಯಲ್ಲಿನ ಚಿರತೆ ಕಂಡ ಸ್ಥಳಕ್ಕೆ ಕಳುಹಿಸಿಕೊಡುವುದಾಗಿ ಹೇಳಿದ್ದು, ರೈತರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ.

ಈ ಪ್ರದೇಶದಲ್ಲಿ ಕಾಡು ಹಂದಿ ಮುಳ್ಳು ಹಂದಿಗಳ ಹಾವಳಿ ವಿಪರೀತವಾಗಿದ್ದು, ಆಹಾರ ಹರಸಿ ಬಂದ ಚಿರತೆ
ಇಲ್ಲೇ ಬೀಡು ಬಿಟ್ಟಿರುವುದಾಗಿ ಇಲ್ಲಿನ ರೈತ ಮುಖಂಡರಾದ ಎನ್ ಎಸ್ ಪ್ರಸನ್ನಕುಮಾರ್, ಮಲ್ಲಿಕಾರ್ಜುನ ಧನಂಜಯ್ಯ ಕುಮಾರ್ ಸೇರಿದಂತೆ ಮತ್ತಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿದ್ದೀರಾ? ಶ್ರೀನಿವಾಸಪುರ ಮಾವಿನ ಮಾರುಕಟ್ಟೆ ಮತ್ತೆ ಸಜ್ಜು; ಮೇ 15ರಿಂದ ಆರಂಭ

ಚಿರತೆ ಇಲ್ಲಿ ನೆಲೆಸಿರುವುದರಿಂದ ಈ ಭಾಗದ ಕೃಷಿಕರು, ಕುರಿಗಾಹಿಗಳ ಸುರಕ್ಷತೆಗೆ ಧಕ್ಕೆ ಬಂದಿದೆ. ಈ ಮೊದಲು ಈ ಪ್ರದೇಶದಲ್ಲಿ ಜಮೀನಿನ ಕಾವಲಿಗೆ ಕಟ್ಟಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿತ್ತು. ಆಗ ಅರಣ್ಯ ಇಲಾಖೆಯವರು ಬೋನ್ ಇರಿಸಿ ಕಾರ್ಯಾಚರಣೆ ಮಾಡಿದ್ದರು. ಚಿರತೆ ಸೆರೆ ಸಿಕ್ಕಿರಲಿಲ್ಲ. ಇದೀಗ ಅರಣ್ಯ ಇಲಾಖೆ ಕಾರ್ಯಚರಣೆ ಯಶಸ್ವಿಯಾಗಿ ಈ ಭಾಗದ ರೈತರ ಆತಂಕ‌ ದೂರಾಗುವುದೇ ಕಾಯ್ದು ನೋಡಬೇಕು ಎನ್ನುತ್ತಿದ್ದಾರೆ ನಗೆಕೆರೆ ಗ್ರಾಮಸ್ಥರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X