OYO ಹೋಟೆಲ್‌ನಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

Date:

Advertisements

ಶಾಲಾ ಶಿಕ್ಷಕ ಮತ್ತು ವಿದ್ಯಾರ್ಥಿನಿಯ ಮೃತದೇಹಗಳು ಉತ್ತರ ಪ್ರದೇಶದ ಅಲಿಗಢದ ಓಯೋ ಹೋಟೆಲ್‌ನಲ್ಲಿ ಪತ್ತೆಯಾಗಿವೆ. ಇಬ್ಬರೂ ವಿಷ ಸೇವಿಸಿ, ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮೃತರನ್ನು 23 ವರ್ಷದ ಶಿಕ್ಷಕ ಚಂದ್ರಪ್ರಭ್ ಮತ್ತು 14 ವರ್ಷದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಇಬ್ಬರೂ ಪ್ರೀತಿಸುತ್ತಿದ್ದರು, ಊರು ತೊರೆದು ಹೋಗಿದ್ದರು ಎಂದು ವರದಿಯಾಗಿದೆ. ಆದಾಗ್ಯೂ, ಅವರ ಜೀವನವು ದುರಂತದಲ್ಲಿ ಅಂತ್ಯಗೊಂಡಿದ್ದು, ಇಬ್ಬರೂ ತಮ್ಮ ಜೀವ ಕಳೆದುಕೊಂಡಿದ್ದಾರೆ.

ಪೊಲೀಸ್ ವರದಿಗಳ ಪ್ರಕಾರ, ಮೃತ ಶಿಕ್ಷಕ ಚಂದ್ರಪ್ರಭ್ ಅವರು ಜ್ವಾಲಾಜಿಪುರಂ ನಿವಾಸಿಯಾಗಿದ್ದು, ಖಾಸಗಿ ಶಾಲೆಯಲ್ಲಿ ಪಾಠ ಮಾಡುತ್ತಿದ್ದರು. ಅದೇ ಶಾಲೆಯಲ್ಲಿ ವಿದ್ಯಾರ್ಥಿನಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಿಕ್ಷಕ ಟ್ಯೂಷನ್‌ ತರಗತಿಗಳನ್ನೂ ತೆಗೆದುಕೊಳ್ಳುತ್ತಿದ್ದರು. ಈ ವೇಳೆ, ಶಿಕ್ಷಕ ಮತ್ತು ವಿದ್ಯಾರ್ಥಿನಿ ನಡುವೆ ಪ್ರೇಮ ಬೆಳೆದಿತ್ತು ಎಂದು ಹೇಳಲಾಗಿದೆ.

Advertisements

ಶಿಕ್ಷಕ ಮತ್ತು ವಿದ್ಯಾರ್ಥಿನಿಯ ಪ್ರೇಮ ಸಂಬಂಧದ ಬಗ್ಗೆ 3 ತಿಂಗಳ ಹಿಂದೆ ಕುಟುಂಬಗಳಿಗೆ ಗೊತ್ತಾಗಿತ್ತು. ಬಳಿಕ, ವಿದ್ಯಾರ್ಥಿನಿಯನ್ನು ಟ್ಯೂಷನ್‌ಗೆ ಕಳಿಸುವುದನ್ನು ಪೋಷಕರು ನಿಲ್ಲಿಸಿದ್ದರು. ಶಾಲೆಯಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಭೇಟಿಯಾಗದಂತೆ ತೆಡೆಯಲು ಎರಡೂ ಕುಟುಂಬಗಳು ಯತ್ನಿಸಿದ್ದವು. ಆದರೂ, ಅವರು ರಹಸ್ಯವಾಗಿ ಭೇಟಿ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಮೇ 5ರ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಪೊಲೀಸರಿಗೆ 112 ತುರ್ತು ಸಂಖ್ಯೆಗೆ ಕರೆ ಬಂದಿತು. ಖೇರೇಶ್ವರ ಪೊಲೀಸ್ ಠಾಣೆಯ ಪೊಲೀಸರು ಓಯೋ ಹೋಟೆಲ್‌ಗೆ ತೆರಳಿ, ಪರಿಶೀಲಿಸಿದಾಗ, ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಹೋಟೆಲ್ ಕೊಠಡಿಯಲ್ಲಿ ವಿಷದ ಖಾಲಿ ಬಾಟಲಿ ಪತ್ತೆಯಾಗಿದೆ.

ವಿದ್ಯಾರ್ಥಿನಿ ಸೊಮವಾರ ಬೆಳಿಗ್ಗೆ ಶಾಲೆಗೆ ಹೋಗಿದ್ದಳು. ಆಕೆಯನ್ನು ಶಿಕ್ಷಕ ಹೋಟೆಲ್‌ಗೆ ಕರೆದೊಯ್ದಿದ್ದಾನೆ. ಇಬ್ಬರೂ ಹೋಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X