ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್‌

Date:

Advertisements

ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸದನಕ್ಕೆ ಭರವಸೆ ನೀಡಿದರು.

16ನೇ ವಿಧಾನಸಭೆಯ ನಾಲ್ಕನೇ ದಿನದ ಕಲಾಪದಲ್ಲಿ ಇಡೀ ದಿನದ ಚರ್ಚೆ ಬಹುತೇಕವಾಗಿ ಸಾರಿಗೆ ಇಲಾಖೆ ನೌಕರನ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಮೀಸಲಾಯಿತು.

ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ತೀವ್ರ ಮಾತಿನ ಜಟಾಪಟಿಗೂ ಇಂದಿನ ಸದನ ಸಾಕ್ಷಿಯಾಯಿತು. ಎರಡು ಬಾರಿ ಸಭಾಧ್ಯಕ್ಷರು ಈ ವಿಚಾರದಲ್ಲಿ ಸದನ ಮುಂದೂಡಿದ್ದು ನಡೆಯಿತು. ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ನೌಕರ ಆತ್ಮಹತ್ಯೆಗೆ ಪ್ರಯತ್ನಿಸಿರುವ ಪ್ರಕರಣ ಬಗ್ಗೆ ತನಿಖೆಯಾಗಿ ಸತ್ಯ ಹೊರಬರಬೇಕು ಅಷ್ಟೇ ನಮ್ಮದು ಆಗ್ರಹ ಎಂದು ಸದನದ ಮುಂದೆ ಬೇಡಿಕೆ ಇಟ್ಟರು.

Advertisements

ಗೃಹ ಸಚಿವರು ಪ್ರತಿಕ್ರಿಯಿಸಿ, “ಸಾರಿಗೆ ಇಲಾಖೆ ಸೇರಿದಂತೆ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಸದನಕ್ಕೆ ಭರವಸೆ ನೀಡಿದರು.

ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹ

ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್‌ಆರ್‌ಟಿಸಿ ಬಸ್ ಡಿಪೊ ಚಾಲಕ ಕಂ ನಿರ್ವಾಹಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು ಧರಣಿ ಆರಂಭಿಸಿದ್ದರು. ಗದ್ದಲ ಹೆಚ್ಚಾಗಿದ್ದರಿಂದ ಸದನದ ಕಲಾಪವನ್ನು ಸಭಾಧ್ಯಕ್ಷರು ಮುಂದೂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X