ಪುಣೆ | ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರಾಂಶುಪಾಲರ ಮೇಲೆ ಹಲ್ಲೆ

Date:

Advertisements

ವಿದ್ಯಾರ್ಥಿಗಳಿಗೆ ಅನ್ಯಧರ್ಮಿಯ ಪ್ರಾರ್ಥನೆಯನ್ನು ಹಾಡಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿರುವ ಘಟನೆ ಪುಣೆ ತಾಲೇಗಾಂವ್ ದಭಾಡೆ ಪಟ್ಟಣದ ಡಿ ವೈ ಪಾಟೀಲ್ ಪ್ರೌಢಶಾಲೆಯಲ್ಲಿ ನಡೆದಿದೆ.

ಅಲೆಕ್ಸಾಂಡರ್, ಹಲ್ಲೆಗೊಳಗಾದ ಪ್ರಾಂಶುಪಾಲರು. ಪ್ರಾಂಶುಪಾಲರನ್ನು ಶಾಲೆಯ ಆವರಣದಲ್ಲೇ ಅಟ್ಟಾಡಿಸಿ ಹಲ್ಲೆ ನಡೆಸಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. “ಹರ್ ಹರ್ ಮಹಾದೇವ್” ಎಂದು ಕೂಗುತ್ತಾ ಬಂದ 100ಕ್ಕೂ ಹೆಚ್ಚು ಜನರ ಗುಂಪು ಪ್ರಾಂಶುಪಾಲರನ್ನು ಮನಬಂದಂತೆ ಹಲ್ಲೆ ನಡೆಸಿದೆ.

ವಿಡಿಯೋಗಳಲ್ಲಿ ಸೆರೆಯಾಗಿರುವಂತೆ, ಹಲ್ಲೆಯಿಂದ ಮೆಟ್ಟಿಲುಗಳ ಮೇಲೆ ಹರಿದ ಅಂಗಿಯಲ್ಲಿ ಪ್ರಾಂಶುಪಾಲರು ಹೋಗುತ್ತಿದ್ದಾಗ ಹಿಂದೂ ಸಂಘಟನೆಯ ಒಬ್ಬಾತ ಹಲ್ಲೆ ನಡೆಸುತ್ತಾನೆ. ಇತರರು ಆತನನ್ನು ತಡೆದರು. ಅಲ್ಲದೆ ವಿದ್ಯಾರ್ಥಿಗಳ ಶೌಚಗೃಹದ ಬಳಿ ಸಿಸಿ ಟಿವಿ ಅಳವಡಿಸಿರುವುದಕ್ಕೆ ಹಲ್ಲೆ ನಡೆಸಿದ ಗುಂಪು ಆಕ್ಷೇಪಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಥ್ರೆಡ್ಸ್: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಕೋಟಿ ಮಂದಿ ಇನ್‌ಸ್ಟಾಲ್‌; ಆ್ಯಪ್‌ನಲ್ಲಿರುವ ವಿಶೇಷತೆಗಳೇನು?

ಪುಣೆ ತಾಲೇಗಾಂವ್ ಎಂಐಡಿಸಿ ಪ್ರದೇಶದ ಪೊಲೀಸ್ ಅಧಿಕಾರಿ ರಂಜಿತ್ ಸಾವಂತ್ ಮಾತನಾಡಿ, ಕೆಲವು ಪೋಷಕರು, ಹಿಂದುತ್ವ ಸಂಘಟನೆಗೆ ಸೇರಿದ ಗುಂಪಿನೊಂದಿಗೆ ಸೇರಿಕೊಂಡು ಪ್ರಾಂಶುಪಾಲರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಕಾರ್ಯಕರ್ತರು ಆಕ್ಷೇಪಿಸಿದಂತೆ ಸಿಸಿ ಟಿವಿಯು ಶೌಚಾಲಯದ ಮಾರ್ಗದಲ್ಲಿಲ್ಲ, ಹೊರ ಭಾಗದಲ್ಲಿದೆ. ಅದೇ ರೀತಿ ಪ್ರತಿದಿನ ಬೆಳಿಗ್ಗೆ ಹಾಡುವ ಅನ್ಯ ಸಮುದಾಯದ ಪ್ರಾರ್ಥನೆ ಸಾಮಾನ್ಯ ಪ್ರಾರ್ಥನೆಯಾಗಿದೆ. ಇದು ಬೈಬಲಿನ ಒಂದು ಪದ್ಯ. ಇದರಲ್ಲಿ ಮತಾಂತರದ ಯಾವುದೇ ಪ್ರಚೋದನೆಯಿಲ್ಲ” ಎಂದು ತಿಳಿಸಿದರು.

ಪೋಷಕರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಅಧಿಕಾರಿಗಳು ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X