ಆಸ್ತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮಾರಕಾಸ್ತ್ರಗಳಿಂದ ಅಳಿಯಂದಿರು ಅತ್ತೆಯನ್ನು ಕೊಲೆ ಮಾಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಬಂದರವಾಡ ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ.
ಬಂದರವಾಡ ಗ್ರಾಮದ ನಿವಾಸಿ ಲಕ್ಕಮ್ಮ (40) ಕೊಲೆಯಾದವರು.
ಈ ಹಿಂದೆ ಮನೆ ಕಟ್ಟುವ ವಿಚಾರದಲ್ಲಿ ಗಲಾಟೆ ನಡೆದಿತ್ತು, ಹಳೆಯ ವೈಷಮ್ಯ ಹಿನ್ನೆಲೆ ಅಳಿಯಂದಿರು ಸೇರಿ ಅತ್ತೆಯ ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಆರೋಪಿಗಳಾದ ಸಂತೋಷ್(35), ಮಂಜುನಾಥ್(25) ಸೇರಿ ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಕುರಿತಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಡ್ದೂರು ಶ್ರೀನಿವಾಸಲು, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.