ಸಂಸತ್ತು ಅಧಿವೇಶನ | ಪ್ರತಿಪಕ್ಷಗಳ ಗದ್ದಲಕ್ಕೆ ಮತ್ತೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

Date:

Advertisements
  • ಅಧಿವೇಶನಕ್ಕೂ ಮುನ್ನ ವಿಪಕ್ಷಗಳು ಸಭೆ
  • ಫೈಜಲ್ ಲೋಕಸಭೆ ಸದಸ್ಯತ್ವ ಮರುಸ್ಥಾಪನೆ

ಸಂಸತ್ತು ಅಧಿವೇಶನ ಆರಂಭವಾದ ಮೂರನೇ ವಾರವೂ ಪ್ರತಿಪಕ್ಷಗಳು ಗದ್ದಲ ಉಂಟು ಮಾಡಿವೆ. ಇದರಿಂದ ಬುಧವಾರದ (ಮಾರ್ಚ್ 29) ಬಜೆಟ್ ಅಧಿವೇಶನದ ಲೋಕಸಭೆ ಮತ್ತು ರಾಜ್ಯಸಭೆಗಳ ಕಲಾಪ ಮಧ್ಯಾಹ್ನದ ವರೆಗೂ ಮುಂದೂಡಿಕೆಯಾಗಿದೆ.

ವಿಪಕ್ಷಗಳ ಕೋಲಾಹಲದಿಂದ ಬೆಳಿಗ್ಗೆ 11 ಗಂಟೆಗೆ ಆರಂಭವಾದ ಲೋಕಸಭೆ ಕಲಾಪ ಮಧ್ಯಾಹ್ನ 12 ಗಂಟೆವರೆಗೂ ಮುಂದೂಡಿಕೆಯಾಗಿದೆ. ರಾಜ್ಯಸಭೆಯ ಕಲಾಪವೂ ಮಧ್ಯಾಹ್ನ 12 ಗಂಟೆವರೆಗೆ ಮುಂದೂಡಲ್ಪಟ್ಟಿದೆ.

ಸದನ ಆರಂಭಕ್ಕೂ ಮುನ್ನ ಸಂಸತ್ತಿನ ವಿಪಕ್ಷಗಳ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಅವರ ಕಚೇರಿಯಲ್ಲಿ ವಿಪಕ್ಷಗಳ ಸಭೆ ನಡೆಯಿತು. ಇದರಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಎಎಪಿ ನಾಯಕ ರಾಘವ್ ಚಡಾ ಮತ್ತು ಇತರರು ಭಾಗವಹಿಸಿದ್ದರು.

Advertisements

ಸಂಸತ್ತು ಅಧಿವೇಶನದ ಕಲಾಪದ ವೇಳೆ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಪ್ರತಿಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

ಎನ್‌ಸಿಪಿಯ ಮೊಹಮ್ಮದ್ ಫೈಜಲ್ ಅನರ್ಹತೆ ಹಿಂಪಡೆತ

ಮೊಹಮ್ಮದ್‌ ಫೈಜಲ್‌

ಬುಧವಾರ ಆರಂಭವಾದ ಲೋಕಸಭೆ ಕಲಾಪದ ವೇಳೆ ಈ ಮುನ್ನ ಅನರ್ಹಗೊಂಡಿದ್ದ ಎನ್ಸಿಪಿ ನಾಯಕ ಮೊಹಮ್ಮದ್ ಫೈಜಲ್ ಪಿ.ಪಿ. ಅವರ ಸದಸ್ಯತ್ವವನ್ನು ಲೋಕಸಭೆ ಕಾರ್ಯಾಲಯ ಮರುಸ್ಥಾಪಿಸಿದೆ.

ಅಪರಾಧ ಪ್ರಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಮೊಹಮ್ಮದ್ ಫೈಜಲ್ ಅವರನ್ನು ಕಳೆದ ಜನವರಿಯಲ್ಲಿ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಮೊಹಮ್ಮದ್‌ ಫೈಜಲ್‌ ಲಕ್ಷದ್ವೀಪದ ಸಂಸದರಾಗಿದ್ದಾರೆ. ತಮಗೆ ಶಿಕ್ಷೆ ನೀಡಿರುವ ಸೆಷನ್ಸ್‌ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಫೈಜಲ್‌ ಕೇರಳ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ತಮಗೆ ಅಪರಾಧ ಹಾಗೂ ವಿಧಿಸಿರುವ ಶಿಕ್ಷೆ ಅಮಾನತುಗೊಳಿಸುವಂತೆ ಕೋರಿದ್ದರು. ಏಪ್ರಿಲ್‌ 13ಕ್ಕೆ ಸಂಸತ್ತು ಅಧಿವೇಶನ ಕೊನೆಗೊಳ್ಳಲಿದೆ.

5d4d09db59db7dd57fe9e8598de7b91a?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X