ತುಮಕೂರು | ಸೂರಿಗಾಗಿ ಧರಣಿ ನಡೆಸುತ್ತಿದ್ದವರ ಮೇಲೆ ಪೊಲೀಸ್ ದಬ್ಬಾಳಿಕೆ; ಸಿರಿಮನೆ ನಾಗರಾಜ್ ಖಂಡನೆ

Date:

Advertisements

ಭೂಮಿ-ವಸತಿಗಾಗಿ ಧರಣಿ ನಡೆಸುತ್ತಿದ್ದ ದಲಿತ, ಅಲೆಮಾರಿ, ಆದಿವಾಸಿ, ಅಲ್ಪಸಂಖ್ಯಾತ ಸಮುದಾಯದವರ ಮೇಲೆ ನಡೆದಿರುವ ಪೊಲೀಸ್‌ ದಬ್ಬಾಳಿಕೆಯನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಂಸ್ಥಾಪಕ ಉಪಾಧ್ಯಕ್ಷ ಸಿರಿಮನೆ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಅವರಿಗೆ ಪತ್ರ ಬರೆದಿದ್ದಾರೆ.

“ಕಳೆದ 16 ದಿನಗಳಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಪೊಲೀಸರು ಬಲಪ್ರಯೋಗ ಮಾಡಿ ಧರಣಿಕಾರರನ್ನು ಹತ್ತಿಕ್ಕುವ ಯತ್ನ ಮಾಡಲಾಗಿದೆ. ಈ ವೇಳೆ ಕೆಲವರನ್ನು ಊರ್ಡಿಗೆರೆ ಪೊಲೀಸ್ ಠಾಣೆಗೆ ಕೊಂಡೊಯ್ಯಲಾಗಿದೆ. ಕನಿಷ್ಟ ತಲೆಮೇಲೊಂದು ಸೂರಿಗೆ ಪರದಾಡುತ್ತಿರುವ ನಿರ್ಗತಿಕ ನಾಗರಿಕರ ಧ್ವನಿಯನ್ನು ಹತ್ತಿಕ್ಕಲು ಈ ರೀತಿಯ ಕ್ರಮ ಕೈಗೊಂಡಿರುವುದು ಖಂಡನೀಯ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಈ ಸಮಸ್ಯೆಗಳು ಆಡಳಿತಾತ್ಮಕವಾಗಿ ಬಗೆಹರಿಸಬಹುದಾಗಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರಂತರವಾಗಿ ಸಮಸ್ಯೆಗಳು ಮುಂದುವರೆಐುತ್ತಲೇ ಇವೆ. ಮುಂಚಿನ ಹೋರಾಟಗಳ ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದನ್ನು ಸ್ಮರಿಸಿಕೊಂಡು, ಇದೇ ರೀತಿ ಈ ಬಾರಿಯ ಸಮಸ್ಯೆಗೂ ಸೂಕ್ತ ಪರಿಹಾರ ನೀಡಬೇಕೆಂದು” ಅವರು ಮನವಿ ಮಾಡಿದ್ದಾರೆ.

Advertisements

ಇದನ್ನೂ ಓದಿ: ತುಮಕೂರು | ಕಾರ್ಮಿಕರ ದಿನ, ಬಸವ ಜಯಂತಿ ಆಚರಿಸಿದ ವಿಶೇಷಚೇತನರ ʼಪ್ರೇರಣಾʼ

ಪತ್ರದ ಅಂತ್ಯದಲ್ಲಿ ನಾಗರಾಜ್ ಅವರು, ಬಂಧಿತರನ್ನು ಬಿಡುಗಡೆ ಮಾಡಿ, ಭೂಮಿ-ವಸತಿ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X