ದಾವಣಗೆರೆ | ಪಾಕ್ ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ದಾಳಿ ಐತಿಹಾಸಿಕ ದಿನ; ಮೊಹಮ್ಮದ್ ಜಿಕ್ರಿಯಾ

Date:

Advertisements

“ಜಮ್ಮುಕಾಶ್ಮೀರ ಪಹಲ್ಗಾಮ್ ನಲ್ಲಿ ಅಮಾಯಕ 26 ಪ್ರವಾಸಿಗರ ಹತ್ಯೆ ಮಾಡಿದ್ದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ಗೆ ನುಗ್ಗಿ ಉಗ್ರರ ನೆಲೆ ಮೇಲೆ ದಾಳಿ ಮಾಡಿರುವ ದಿನ ಐತಿಹಾಸಿಕವಾದದ್ದು” ಎಂದು ಜವಾಹರ್ ಬಾಲ್ ಮಂಚ್ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಹೆಮ್ಮೆ ವ್ಯಕ್ತಪಡಿಸಿದರು.

“ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕ್ ನೆಲಕ್ಕೆ ನುಗ್ಗಿ ಉಗ್ರರಿಗೆ ತರಬೇತಿ ಸೇರಿದಂತೆ ಎಲ್ಲಾ ರೀತಿಯ ನೆರವು ನೀಡುತ್ತಿದ್ದ ಉಗ್ರ ತಾಣಗಳನ್ನು ಧ್ವಂಸ ಮಾಡುವ ಮೂಲಕ ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಭಾರತೀಯ ಸೇನೆಯು ತಕ್ಕ ಉತ್ತರ ನೀಡಿದೆ. ಉಗ್ರಗಾಮಿಗಳ ನೆಲೆಗಳನ್ನು ಧ್ವಂಸ ಮಾಡುವ ಜೊತೆಗೆ ಉಗ್ರರ ಹತ್ಯೆ ಮಾಡಿ ಪ್ರತೀಕಾರ ತೀರಿಸಿಕೊಂಡ ಭಾರತದ ಹೆಮ್ಮೆಯ ಧೀರರ ಪರಾಕ್ರಮಕ್ಕೆ ಅಭಿನಂದನೆ ಸಲ್ಲಿಸಿ, ಎಲ್ಲರೂ ಗೌರವಿಸಬೇಕು” ಎಂದು ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಅಪಘಾತ, ಓರ್ವ ಸಾವು.

Advertisements

“ಮೊದಲಿನಿಂದಲೂ ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಲೇ ಇದೆ. ಅಮಾಯಕರನ್ನು ಕೊಲ್ಲಲು ಬಂದ ಉಗ್ರರ ಹಿಡಿದುಕೊಡುವ ಬದಲು ಸಹಾಯ ಮಾಡುತ್ತಿರುವ ಪಾಕಿಸ್ತಾನಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ತಕ್ಕ ಪಾಠ ಕಲಿಸಬೇಕು. ಇನ್ನು ಮುಂದಾದರೂ ಪಾಕಿಸ್ತಾನ ಭಯೋತ್ಪಾದನೆ ಮಟ್ಟಹಾಕುವತ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ವರ್ಷಗಳಲ್ಲಿ ವಿಶ್ವದ ಭೂಪಟದಲ್ಲೇ ಆ ರಾಷ್ಟ್ರ ಇಲ್ಲವಾಗಿಬಿಡಬಹುದು” ಎಂದು ಮೊಹಮ್ಮದ್ ಜಿಕ್ರಿಯಾ ಹೇಳಿದ್ದಾರೆ.

“ದೇಶದ ಸೇನೆಯು ಕ್ಷಿಪಣಿ ದಾಳಿ ನಡೆಸಿ ಉಗ್ರರ ನೆಲೆ ಧ್ವಂಸಗೊಳಿಸುವ ಜೊತೆಗೆ ತಕ್ಕ ಉತ್ತರ ನೀಡಿರುವುದು ಐತಿಹಾಸಿಕ ಕ್ಷಣ ಎಂದರೆ ತಪ್ಪಾಗಲಾರದು. ಎಲ್ಲಾ ಸೈನಿಕರಿಗೂ ಸಲಾಂ ಹೇಳಲೇಬೇಕು” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಇಡೀ ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತದೆ. ಶಾಲೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ರಾಜಕೀಯ...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X