ಶಿರಸಿ | ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

Date:

Advertisements

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಳ್ಳಿಯೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಏಳನೇ ತರಗತಿ ವ್ಯಾಸಂಗ ಮುಗಿಸಿ ಬೇಸಿಗೆ ರಜೆಯ ಕಾರಣ ಮನೆಯಲ್ಲಿಯೇ ಇದ್ದ ಬಾಲಕಿ ಮೇಲೆ ವಿಶ್ವನಾಥ್‌ ಹೆಗಡೆ(40) ಎಂಬಾತ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಮಗು ತನ್ನ ತಾಯಿಗೆ ಈ ವಿಷಯವನ್ನು ತಿಳಿಸಿದ್ದು, ತಾಯಿ ಆರೋಪಿಯ ಮನೆ ಬಾಗಿಲಿಗೆ ಹೋಗಿ ಕೇಳಿದ್ದಾರೆ.

ಆರೋಪಿ ವಿಶ್ವನಾಥ್‌ ಹೆಗಡೆ, “ನಾನು ಹಾಗೇನೂ ಮಾಡಿಲ್ಲ. ನಾನೇ ಮಾಡಿದ್ದೇನೆ ಎನ್ನುವುದಕ್ಕೆ ನಿನ್ನ ಹತ್ತಿರ ಸಾಕ್ಷಿ ಇದೆಯೇ?” ಎಂದು ಭಂಡತನ ಮೆರೆದಿದ್ದಾನೆ. ಬಳಿಕ ತಾಯಿ, ʼಮಗುವಿನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಶಿರಸಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣದಡಿ ದೂರು ನೀಡಿದ್ದಾರೆ.

Advertisements
ಆರೋಪಿ ವಿಶ್ವನಾಥ್‌ ಹೆಗಡೆ
ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿರುವ ಆರೋಪಿ ವಿಶ್ವನಾಥ್‌ ಹೆಗಡೆ

ದೂರು ನೀಡಿದ ಮೂರ್ನಾಲ್ಕು ದಿನಗಳ ಬಳಿಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೂ ದೌರ್ಜನ್ಯ ಪ್ರಕರಣವೆಂದು ದೂರು ದಾಖಲಿಸಿಕೊಂಡಿದ್ದು, ದೂರುದಾರರಿಗೆ ಪೊಲೀಸರು ಎಫ್‌ಐಆರ್‌ ಪ್ರತಿಯನ್ನೂ ಕೂಡ ನೀಡದೆ ಕಳುಹಿಸಿದ್ದಾರೆ ಎನ್ನಲಾಗಿದೆ. ‌ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿಯಲ್ಲಿ ನಡೆಯಬೇಕಿದ್ದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಮುಂದೂಡಿಕೆ

ಬುಧವಾರ ಬೆಳಿಗ್ಗೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡುವ ಕುರುಹು ತಿಳಿದ ಆರೋಪಿ ಪರಾರಿಯಾಗಿದ್ದಾನೆ. ಇಡೀ ದಿನ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾನೆಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ಈ ದಿನ.ಕಾಮ್‌ ಮಾಹಿತಿಗಾಗಿ ಪೊಲೀಸ್‌ ಠಾಣೆಗೆ ಕರೆ ಮಾಡಿದಾಗ, ಅವರು ಎಫ್‌ಐಆರ್‌ ಕಾಪಿ ಸಂಖ್ಯೆಯನ್ನು ನೀಡಿದ್ದಾರೆ. ಆ ಸಂಖ್ಯೆಯ ಅನ್ವಯ ಕಾಪಿ ಹುಡುಕಿದಾಗ ಆನ್‌ಲೈನ್‌ನಲ್ಲಿ ನಾಟ್‌ ಫೌಂಡ್‌ ಎಂದು ಕಂಡುಬರುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಶಿರಸಿ ಗ್ರಾಂತರ ಪೊಲೀಸ್‌ ಠಾಣೆಗೆ ಸಂಪರ್ಕಿಸಿದೆ. ಆದರೆ ಅಲ್ಲಿಯ ಸಿಬ್ಬಂದಿ ಯಾವುದೇ ರೀತಿಯ ಮಾಹಿತಿಯನ್ನು ನೀಡಿಲ್ಲ. ಬಳಿಕ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ(ಎಸ್‌ಪಿ)ಯವರನ್ನು ಸಂಪರ್ಕಿಸಿದೆ. ಆದರೂ ಅವರು ಕರೆಗೆ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X