ದೇಶದಲ್ಲಿ 18 ವರ್ಷದೊಳಗಿನ 30% ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ವರದಿ

Date:

Advertisements

ಭಾರತದಲ್ಲಿ 18 ವರ್ಷ ಪೂರೈಸುವುದಕ್ಕೂ ಮೊದಲೇ 30% ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂಬ ಆಘಾತಕಾರಿ ವರದಿ ಬೆಳಕಿಗೆ ಬಂದಿದೆ.

ಅಮೆರಿಕ ಮೂಲದ ವೈದ್ಯಕೀಯ ನಿಯತಕಾಲಿಕೆ ‘ದಿ ಲ್ಯಾನ್ಸೆಟ್ ಜರ್ನಲ್‌‘ ಬಿಡುಗಡೆ ಮಾಡಿರುವ ವರದಿಯಲ್ಲಿ, “2023ರಲ್ಲಿ ದೇಶದ ಹೆಣ್ಣುಮಕ್ಕಳ ಪೈಕಿ 30% ಬಾಲಕಿಯರು ಮತ್ತು 13% ಬಾಲಕರು 18 ವರ್ಷಪೂರೈಸುವುದಕ್ಕೂ ಮೊದಲೇ ಲೈಂಗಿಕ ಕಿರುಕುಳಗಳಿಗೆ ತುತ್ತಾಗಿದ್ದಾರೆ” ಎಂದು ಹೇಳಲಾಗಿದೆ.

ಪತ್ರಿಕೆಯು 1990ರಿಂದ 2023ರ ಅವಧಿಯಲ್ಲಿ ಮಕ್ಕಳ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು 200ಕ್ಕೂ ಹೆಚ್ಚು ದೇಶಗಳಲ್ಲಿ ವಿಶ್ಲೇಷಣೆ ನಡೆಸಿದೆ. ಎಲ್ಲ ದೇಶಗಳ ಪ್ರಕರಣಗಳನ್ನೂ ಒಟ್ಟುಗೂಡಿಸಿದರೆ, ಪ್ರತಿ ಐವರು ಹೆಣ್ಣು ಮಕ್ಕಳಲ್ಲಿ ಒಬ್ಬರು ಮತ್ತು ಏಳು ಗಂಡು ಮಕ್ಕಳಲ್ಲಿ ಒಬ್ಬರು 18ನೇ ವರ್ಷಕ್ಕೆ ಕಾಲಿಡುವುದಕ್ಕೂ ಮೊದಲೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂಬುದು ವಿಶ್ಲೇಷಣೆಯಲ್ಲಿ ಕಂಡುಬಂದಿದೆ ಎಂದು ಪತ್ರಿಕೆ ಹೇಳಿದೆ

Advertisements

ಆದಾಗ್ಯೂ, ಜಗತ್ತಿನಾದ್ಯಂತ ಎಲ್ಲ ಪ್ರಕರಣಗಳನ್ನು ಗಮನಿಸಿದರೆ, ದಕ್ಷಿಣ ಏಷ್ಯಾದಲ್ಲಿ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಭಾರತದಲ್ಲಿ 30% ಹೆಣ್ಣು ಮಕ್ಕಳು 18 ವರ್ಷ ಪೂರೈಸುವುದಕ್ಕೂ ಮುನ್ನವೇ ಲೈಂಗಿಕ ದೌರ್ಜನ್ಯ ಎದುರಿಸಿದ್ದರೆ, ನೆರೆಯ ಬಾಂಗ್ಲಾದೇಶದಲ್ಲಿ 9.3% ಹೆಣ್ಣು ಮಕ್ಕಳು ಇದೇ ಕಿರುಕುಳವನ್ನು ಅನುಭಿವಿಸಿದ್ದಾರೆ.

ಇನ್ನು, ಆಫ್ರಿಕಾ ರಾಷ್ಟ್ರಗಳಲ್ಲಿ 18 ವರ್ಷಕ್ಕಿಂತ ಒಳಪಟ್ಟ ಬಾಲಕರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ಕೋಟಿ ಡಿ’ಐವೋರ್ ದೇಶದಲ್ಲಿ 18 ವರ್ಷದೊಳಗಿನ 28% ಬಾಲಕರ ಮೇಲೆ ಲೈಂಗಿಕ ಕಿರುಕುಳ/ದೌರ್ಜನ್ಯಗಳು ನಡೆದಿವೆ ಎಂದು ಪತ್ರಿಕೆಯ ವರದಿ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X