ಬಜೆಟ್‌ 23-24 | ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ 100 ಕೋಟಿ ರೂ. ಅನುದಾನ

Date:

Advertisements

ನಗರ ಪ್ರದೇಶದ ಬಡವರು ಮತ್ತು ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸುವ ಉದ್ದೇಶದಿಂದ ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಿ 100 ಕೋಟಿ ರೂ. ಮೀಸಲಿಡಲಾಗಿದೆ.

ಬಜೆಟ್‌ನಲ್ಲಿ ಪ್ರಸ್ತಾವ ಮಾಡಿರುವಂತೆ ಮೊದಲಿಗೆ ಇಂದಿರಾ ಕ್ಯಾಂಟೀನ್ ಹೊಸ ಮೆನುವನ್ನು ಪರಿಚಯಿಸಲಾಗುವುದು. ಇದನ್ನು ಬಿಬಿಎಂಪಿ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಪುನರಾರಂಭ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

ಎರಡನೇ ಹಂತದಲ್ಲಿ ರಾಜ್ಯದಾದ್ಯಂತ ಎಲ್ಲ ಪಟ್ಟಣಗಳಲ್ಲಿ ಮತ್ತು ಬಿಬಿಎಂಪಿ ಹೊಸ ವಾರ್ಡ್ ಗಳಿಗೆ ಈ ಯೋಜನೆಯನ್ನು ವಿಸ್ತರಣೆ ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ದುರಸ್ತಿ, ನವೀಕರಣ ಹಾಗೂ ನಿರ್ವಹಣೆಗಾಗಿ ರಾಜ್ಯ ಸರ್ಕಾರವು ನೂರು ಕೋಟಿ ರೂಪಾಯಿ ಒದಗಿಸಲಿದೆ ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.

Advertisements

ಹಿಂದೆ ಅಧಿಕಾರದಲ್ಲಿ ಇದ್ದ ಬಿಜೆಪಿ ಸರ್ಕಾರವು ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಸ್ಥಗಿತಗೊಳಿಸಿ, ಜನವಿರೋಧಿ ನೀತಿಯನ್ನು ಅನುಸರಿಸಿತು ಎಂದು ಸಹ ಬಜೆಟ್ ದಾಖಲೆಯಲ್ಲಿ ಉಲ್ಲೇಖ ಮಾಡಲಾಗಿದೆ.

ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿದ್ದರು. ಇದರಿಂದ ಸಿದ್ದರಾಮಯ್ಯ ಅವರಿಗೆ ಜನಪ್ರಿಯತೆ ಹಾಗೂ ವರ್ಚಸ್ಸು ಕೂಡ ದೊರಕಿತ್ತು. ಆದರೆ, ಬಿಜೆಪಿ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯನ್ನು ಸಂಪೂರ್ಣ ನಿರ್ಲಕ್ಷಿಸಿತು ಎಂಬುದು ಕಾಂಗ್ರೆಸ್ ಆರೋಪವಾಗಿತ್ತು. ಆದರೆ ಈ ಬಾರಿ ಚುನಾವಣೆಗೆ ಪೂರ್ವದಲ್ಲಿ ಬಿಜೆಪಿ ತಂದಿದ್ದ ಪ್ರಣಾಳಿಕೆಯಲ್ಲಿ ಇಂದಿರಾ ಕ್ಯಾಂಟೀನ್ ಆಲೋಚನೆಯಂಥದ್ದೇ ಇದ್ದ ಹಾಗೂ ಅಟಲ್ ಬಿಹಾರಿ ವಾಜಪೇಯಿ ಹೆಸರಿನಲ್ಲಿ ಯೋಜನೆ ಜಾರಿಗೆ ತರುವ ಪ್ರಸ್ತಾವ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಜೆಟ್ 23-24 | ಬೆಂಗಳೂರಿನ 100 ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಆವಿಷ್ಕಾರ ಪಾರ್ಕ್

ಅದರ ಪ್ರಕಾರ, ಪೌಷ್ಟಿಕಾಂಶಯುಕ್ತ ಆಹಾರವನ್ನು ಅತ್ಯಂತ ಕಡಿಮೆ ಬೆಲೆಗೆ ಜನರಿಗೆ ಒದಗಿಸುವುದು ಅಟಲ್ ಹೆಸರಿನ ಆಹಾರ ಕೇಂದ್ರದ ಉದ್ದೇಶವಾಗಿತ್ತು. ಇದೀಗ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ಮರುಜೀವ ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X