ದಾವಣಗೆರೆ | ಸಿಪಿಐ(ಎಂ) ಹಿರಿಯ ಮುಖಂಡ ಕೆ.ಎಲ್ ಭಟ್ ನಿಧನ; JJM ವೈದ್ಯಕೀಯ ಕಾಲೇಜಿಗೆ ದೇಹದಾನ

Date:

Advertisements

ಹಿರಿಯ ಹೋರಾಟಗಾರ, ದಾವಣಗೆರೆ ಜಿಲ್ಲಾ ಸಿಪಿಐ(ಎಂ) ಮಾಜಿ ಜಿಲ್ಲಾ ಕಾರ್ಯದರ್ಶಿ ಕಾಮ್ರೇಡ್ ಕೆ ಲಕ್ಷ್ಮೀನಾರಾಯಣ ಭಟ್ (ಕೆ.ಎಲ್.ಭಟ್) ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರ ಇಚ್ಛೆಯಂತೆಯೇ ಅವರ ಮೃತದೇಹವನ್ನು ಜೆಜೆಎಂ ವೈದ್ಯಕೀಯ ಕಾಲೇಜಿಗೆ ದಾನ ನೀಡಲಾಗುತ್ತದೆ ಎಂದು ಪಕ್ಷವು ತಿಳಸಿದೆ.

82 ವರ್ಷದ ಕೆ.ಎಲ್ ಭಟ್ ಅವರು ದಾವಣಗೆರೆಯ ಎಲ್‌ಐಸಿ ಕಾಲೋನಿಯಲ್ಲಿ ನೆಲೆಸಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬುಧವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅಸಂಖ್ಯಾತ ಚಳವಳಿಯ ಒಡನಾಡಿಗಳನ್ನು ಆಗಲಿದ್ದಾರೆ.

ಭಟ್ ಅವರು ಬದುಕಿದ್ದಾಗಲೇ, ತಮ್ಮ ನಿಧನದ ಬಳಿಕ ತಮ್ಮ ಮೃತದೇಹವನ್ನು ಜೆಜೆಎಂ ವೈದ್ಯಕೀಯ ಕಾಲೇಜಿಗೆ ನೀಡಬೇಕೆಂದು ಸೂಚಿಸಿದ್ದರು. ಅವರ ಇಚ್ಛೆಯಂತೆ ಅವರ ಮೃತದೇಹವನ್ನು ಶುಕ್ರವಾರ ಕಾಲೇಜಿಗೆ ವೈದ್ಯಕೀಯ ಸಂಶೋಧನೆಗಾಗಿ ಹಸ್ತಾಂತರಿಸಲಾಗುತ್ತದೆ ಎಂದು ಪಕ್ಷ ಮತ್ತುಕುಟುಂಬದ ಮೂಲಗಳು ತಿಳಿಸಿವೆ.

Advertisements

ಕೆ.ಎಲ್ ಭಟ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್‌.ಕೆ, “ಉಡುಪಿ ಜಿಲ್ಲೆಯ ಕೊಲ್ಲೂರು ಲಕ್ಷ್ಮೀನಾರಾಯಣ ಭಟ್ ಅವರು 1960ರ ದಶಕ ಕೊನೆಯಲ್ಲಿ ಭಾರತೀಯ ‌ಜೀವ ವಿಮಾ‌ ನಿಗಮದಲ್ಲಿ ದಾವಣಗೆರೆ ಶಾಖೆಯಲ್ಲಿ ಓರ್ವ ಗುಮಾಸ್ತನಾಗಿ‌ ಕೆಲಸ ಆರಂಭಿಸಿದ್ದರು. ಬಳಿಕ ವಿಮಾ‌ ನೌಕರರ‌ ಸಂಘದ ನಾಯಕರಾಗಿ ನೌಕರರ ಮೇಲೆ ನಡೆಯುತ್ತಿದ್ದ ಶೋಷಣೆ ವಿರುದ್ದ ಹೋರಾಡುತ್ತಾ ಸಿಪಿಐ(ಎಂ) ಪಕ್ಷದಲ್ಲಿ ವಿವಿಧ ಹಂತಗಳಲ್ಲಿ ಕೆಲಸ‌ಮಾಡಿದರು. ಅದರ ಜತೆಗೆ ದಾವಣಗೆರೆಯಲ್ಲಿ ಸಮುದಾಯ‌ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಅಪಾರ ಕೆಲಸ‌ಮಾಡಿದ್ದರು” ಎಂದು ಸ್ಮರಿಸಿದ್ದಾರೆ.

“ಭಟ್ ಅವರು ನಿವೃತ್ತಿ ಬಳಿಕಾವೂ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮಪಂಚಾಯತ್ ನೌಕರರು ಸೇರಿ ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡುತ್ತಲೇ ಸಿಐಟಿಯು ಜಿಲ್ಲಾ‌ಸಂಚಾಲಕರಾಗಿ ಬಳಿಕ ಸಿಪಿಎಂ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ‌ ಮಾಡಿದ್ದರು. ದುಡಿಯುವ ಜನರ‌ ಮೇಲೆ ನಡೆಯುತ್ತಿರುವ ನಿರಂತರವಾದ ದಾಳಿಗಳ ವಿರುದ್ದ ಚಳವಳಿಗಳನ್ನು ಮುನ್ನಡೆಸಿದ್ದರು. ವಿಶೇಷವಾಗಿ ದಾವಣಗೆರೆಯಲ್ಲಿ 90 ದಶಕದಲ್ಲಿ ನಡೆದ ಕೋಮು‌ಸಂಘರ್ಘ ಮತ್ತು‌ಕೋಮು ಗಲಭೆಗಳಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳ ಪರವಾಗಿ ಹಾಗೂ ಶಾಂತಿ ಸ್ಥಾಪನೆಯಾಗಿ ಮತ್ತು ಜನರನ್ನು ವಿಭಜಿಸುವ ಹಿಂದುತ್ವವಾದಿಗಳ ವಿರುದ್ದ ಮತ್ತು ಸಮಾಜದಲ್ಲಿ ‌ಶಾಂತಿ‌ಸಾಮರಸ್ಯಕ್ಕಾಗಿ ದಾವಣಗೆರೆ ವಿವಿಧ ಜನಪರ,ಜೀವಪರ ಸಂಘಟನೆಗಳು ಹಾಗೂ ವ್ಯಕ್ತಿಗಳನ್ನು ಒಳಗೊಂಡು ಅವಿತರವಾಗಿ ಶ್ರಮಿಸಿದ್ದರು” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X