ಕಲಬುರಗಿ ನಗರದ ಸಮಗ್ರ ಅಭಿವೃದ್ಧಿಗಾಗಿ ಮೂಲಸೌಲಭ್ಯಗಳ ಹೆಚ್ಚಳ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಕಲಬುರಗಿ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಮೂಲ ಸೌಲಭ್ಯಗಳನ್ನು ಹೆಚ್ಚಿಸುವದರೊಂದಿಗೆ ʼಸ್ಮಾರ್ಟ್‌ ಸಿಟಿʼ ರೂಪಿಸುವ ಸಲುವಾಗಿ ತಜ್ಞರೊಂದಿಗೆ ಚರ್ಚಿಸಿ, ಮುಂದಿನ ಮೂರು ವರ್ಷದ ಒಳಗೆ ಕಲಬುರಗಿ ನಗರವನ್ನು ಅತ್ಯುತ್ತಮ ನಗರವಾಗಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಬೆಂಗಳೂರು ನಗರದಲ್ಲಿ ವಿಶೇಷ ಸಭೆ ನಾಡೆಸಿ ಮಾತನಾಡಿ, “ಗುಣಮಟ್ಟದ ಕುಡಿಯುವ ನೀರು ಸರಬರಾಜು, ಸುಸ್ಥಿರ ಒಳಚರಂಡಿ ವ್ಯವಸ್ಥೆ, ತ್ಯಾಜ್ಯ ನೀರು ಮರುಬಳಕೆ, ಘನತ್ಯಾಜ್ಯ ಬೇರ್ಪಡಿಸುವಿಕೆ ಹಾಗೂ ವಿಲೇವಾರಿ, ಉತ್ತಮ ಸಂಚಾರಿ ವ್ಯವಸ್ಥೆ, ಹಸಿರೀಕರಣ ಮುಂತಾದ ಮೂಲ ಸೌಲಭ್ಯಗಳನ್ನು ಕಲಬುರಗಿ ನಗರಕ್ಕೆ ಒದಗಿಸಲು ಯೋಜಿಸಲಾಗಿದೆ” ಎಂದು ತಿಳಿಸಿದರು.

“ಕಲಬುರಗಿ ನಗರವನ್ನು ಅತ್ಯುತ್ತಮ ಮೂಲಭೂತ ಸೌಲಭ್ಯಗಳ ನಗರವಾಗಿಸುವ ಮೂಲಕ ಹೆಚ್ಚು ಉದ್ದಿಮೆಗಳನ್ನು ಆಕರ್ಷಿಸುವದರೊಂದಿಗೆ ಹೆಚ್ಚೆಚ್ಚು ಮಂದಿ ಯುವಕ ಯವತಿಯರಿಗೆ ಉದ್ಯೋಗ ಸೃಷ್ಟಿಸಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

Advertisements
ಪ್ರಿಯಾಂಕ್‌ ಖರ್ಗೆ ಸಭೆ 1

“ನಗರದ ನೈರ್ಮಲ್ಯ ವ್ಯವಸ್ಥೆಯನ್ನು ಸುಧಾರಿಸುವ ಅವಶ್ಯಕತೆ ಇದೆಯೆಂದು ಹೇಳಿದ ಸಚಿವರು ಈಗಿನ ಶೇ.50ರಷ್ಟಿರುವ ನೈರ್ಮಲ್ಯ ವ್ಯವಸ್ಥೆಯನ್ನು ನೂರಕ್ಕೆ ನೂರರಷ್ಟು ಬಲಪಡಿಸುವ ಗುರಿಯನ್ನು ಇರಿಸಿಕೊಳ್ಳಲಾಗಿದೆ. ಈ ಸಲುವಾಗಿ ನೈರ್ಮಲ್ಯ ನೌಕರರ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂಬ ಅಂಶವನ್ನು ವಿವರಿಸಿದರಲ್ಲದೆ, ನಗರದ ನೂರು ಲಕ್ಷ ಚದರ ಅಡಿ ಪ್ರದೇಶದಲ್ಲಿ ಉದ್ಯಾನ ಹಾಗೂ ಮರಗಳನ್ನು ಪೋಷಿಸುವುದರೊಂದಿಗೆ ಕಲಬುರಗಿ ನಗರವನ್ನು ಹಸಿರೀಕರಣಗೊಳಿಸುವ ಯೋಜನೆಯನ್ನು ರೂಪಿಸಲಾಗುವುದು” ಎಂದು ಪ್ರಕಟಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಪಾದುವಾ ಕಾಲೇಜು ಮೈದಾನದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ

ಸಚಿವರ ಯೋಜನೆಗಳಿಗೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಲು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಹ್ಯೂಮನ್‌ ಸೆಟಲ್‌ಮೆಂಟ್‌ ಸಂಸ್ಥೆಯು ಸಿದ್ಧಪಡಿಸಿದ್ದ ತಜ್ಞರನ್ನು ಒಳಗೊಂಡ ವರದಿಯನ್ನು ಸಚಿವರು ಮತ್ತು ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿತು.

ಸಭೆಯಲ್ಲಿ ಕಲಬುರಗಿ ಶಾಸಕ ಅಲ್ಲಮಪ್ರಭು ಪಾಟೀಲ್‌, ಶ್ರೀಮತಿ ಕನೀಜ್‌ ಫಾತೀಮಾ, ಕಲಬುರಗಿ ಮಹಾನಗರಪಾಲಿಕೆ ಮೇಯರ್‌ ಎಲ್ಲಪ್ಪ ನಾಯ್ಕೋಡಿ, ಕುಡಾ ಅಧ್ಯಕ್ಷ ಮಜರ್‌ ಆಲಂ ಖಾನ್‌, ಕಲಬುರಗಿ ಮಹಾನಗರಪಾಲಿಕೆ ಆಯುಕ್ತ ಅವಿನಾಶ್‌ ಸಿಂಧೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X