ಬೀದರ್‌ | ಧುಮ್ಮನಸೂರನಲ್ಲಿ ʼನಮ್ಮೂರ ಸಮುದಾಯ ಗ್ರಂಥಾಲಯʼ ಉದ್ಘಾಟನೆ

Date:

Advertisements

ಹುಮನಾಬಾದ ತಾಲ್ಲೂಕಿನ ಧುಮ್ಮನಸೂರ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ನಿರ್ಮಾಣ ಮಾಡಿರುವ ನಮ್ಮೂರ ಸಮುದಾಯ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ್ ಬದೋಲೆ ಅವರು ಗುರುವಾರ ಉದ್ಘಾಟಿಸಿದರು.

ಜಿ.ಪಂ.ಸಿಇಒ ಡಾ.ಗಿರೀಶ ಬದೋಲೆ ಅವರು ಮಾತನಾಡಿ, ʼಗ್ರಾಮ ಪಂಚಾಯಿತಿ ಅಧ್ಯಕ್ಷ, ಪಿಡಿಒ ಹಾಗೂ ಸರ್ವ ಸದಸ್ಯರ ಸಹಕಾರದೊಂದಿಗೆ ನಿರ್ಮಿಸಲಾದ ಸಮುದಾಯ ಗ್ರಂಥಾಲಯ ಇತರೆ ಪಂಚಾಯಿತಿಗಳಿಗೆ ಮಾದರಿಯಾಗಿದೆ. ಗ್ರಂಥಾಲಯದಲ್ಲಿರುವ ದಿನಪತ್ರಿಕೆ, ಪುಸ್ತಕಗಳನ್ನು ಓದುವ ಮೂಲಕ ಮಕ್ಕಳು, ಗ್ರಾಮಸ್ಥರು ಸದುಪಯೋಗಪಡಿದುಕೊಳ್ಳಬೇಕುʼ ಎಂದು ತಿಳಿಸಿದರು.

ಬಳಿಕ ನರೇಗಾ ಯೋಜನೆಯಡಿಯಲ್ಲಿ ಕೆರೆ ಅಭಿವೃದ್ಧಿಪಡಿಸಿರುವ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ನರೇಗಾ ಯೋಜನೆಯ ಬಗ್ಗೆ ಕೂಲಿ ಕಾರ್ಮಿಕರ ಜೊತೆ ಕೆಲವು ಸಮಯ ಚರ್ಚೆ ನಡೆಸಿ ಯೋಜನೆ ಬಗ್ಗೆ ಮಾಹಿತಿ ಮಾಹಿತಿ ನೀಡಿದರು.

Advertisements
WhatsApp Image 2025 05 08 at 10.29.43 PM
ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ನಮ್ಮೂರ ಸಮುದಾಯ ಗ್ರಂಥಾಲಯದಲ್ಲಿ ಓದುಗರಿಗೆ ಪುಸ್ತಕ ವಿತರಿಸಿದರು.

ತಾಲ್ಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ದಿಪೀಕಾ ನಾಯ್ಕರ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಪ್ಪಾ ಭೋತಳೆ, ಗ್ರಾಮ ಪಂಚಾಯತ ಪಿಡಿಓ ಮಲ್ಲಿರ್ಕಾಜುನ್‌ ಸಗರ್, ತಾಲೂಕು ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X