ಯುದ್ಧ ಸ್ಥಿತಿ | ಭಾರತದ ಮೇಲೆ ಎಂಟು ಕ್ಷಿಪಣಿ ಹಾರಿಸಿದ ಪಾಕಿಸ್ತಾನ; ತಡೆದು ನಿಲ್ಲಿಸಿದ ಭಾರತ

Date:

Advertisements

ಭಾರತದ 15 ನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯತ್ನಿಸಿರುವ ಪಾಕಿಸ್ತಾನದ ಪ್ರಯತ್ನಗಳನ್ನು ವಿಫಲಗೊಳಿಸಿದ ಬೆನ್ನಲ್ಲೇ, ಪಾಕಿಸ್ತಾನ ದೇಶವು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳ ಮೇಲೆ ಅಗಾಧವಾದ ದಾಳಿಯನ್ನು ಪ್ರಾರಂಭಿಸಿದೆ. ಗಡಿಯಲ್ಲಿ ಯುದ್ಧ ಸ್ಥಿತಿ ನಿರ್ಮಾಣವಾಗಿದೆ.

ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿರುವ ಗಡಿ ಪ್ರದೇಶಗಳಾದ ಆರ್‌ಎಸ್ ಪುರ, ಅರ್ನಿಯಾ, ಸಾಂಬಾ, ಹಿರಾನಗರಗಳು ಭಾರೀ ಶೆಲ್ ದಾಳಿಗೆ ಒಳಗಾಗಿದ್ದರೆ, ಭಾರತೀಯ ವಾಯುಪಡೆ ಪಾಕ್ ದಾಳಿಯನ್ನು ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಆರ್‌ಎಸ್ ಪುರ, ಅರ್ನಿಯಾ, ಸಾಂಬಾ, ಹಿರಾನಗರ ಭಾರೀ ಮಿಲಿಟರಿ ಹೊಂದಿರುವ ಪ್ರದೇಶಗಳಾಗಿದ್ದು, ಈ ಪ್ರದೇಶಗಳ ಮೇಲೆ ಎಂಟು ಕ್ಷಿಪಣಿಗಳನ್ನು ಹಾರಿಸಲಾಗಿದೆ. ಈ ಎಲ್ಲವನ್ನೂ ಭಾರತೀಯ ವಾಯುಪಡೆ ತಡೆದು ನಿಲ್ಲಿಸಿದೆ.

Advertisements

ರಾತ್ರಿ 9 ಗಂಟೆಗೆ ಸ್ವಲ್ಪ ಮೊದಲು, ಜಮ್ಮುವಿನಿಂದ ಜೋರಾಗಿ ಸ್ಫೋಟಗಳು ಕೇಳಿಬಂದವು. ನಂತರ ಸೈರನ್‌ಗಳ ಕೂಗು ಹಾಕಿ, ಬ್ಲ್ಯಾಕೌಟ್ ಮಾಡಲಾಗಿದೆ.

ಸ್ಥಳೀಯರು ಕಳುಹಿಸಿದ ಸೆಲ್‌ಫೋನ್ ವಿಡಿಯೊಗಳು ಯುದ್ಧದ ಸ್ಥಿತಿಯನ್ನು ವಿವರಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಪಾಕಿಸ್ತಾನ ಮೂಲದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ಜಮ್ಮು, ಪಠಾಣ್‌ಕೋಟ್ ಮತ್ತು ಉಧಂಪುರದಲ್ಲಿರುವ ಮಿಲಿಟರಿ ನೆಲೆಗಳನ್ನು ಟಾರ್ಗೆಟ್ ಮಾಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಯಾವುದೇ ಸಾವುನೋವುಗಳು ಅಥವಾ ಆಸ್ತಿಪಾಸ್ತಿ ನಾಶವಾದ ಸಂಬಂಧ ವರದಿಯಾಗಿಲ್ಲ. ರಕ್ಷಣಾ ಸಚಿವಾಲಯವು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಭಾರತವು ತನ್ನ ಸಾರ್ವಭೌಮತ್ವವನ್ನು ರಕ್ಷಿಸಲು ಮತ್ತು ತನ್ನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಸಿದ್ಧವಾಗಿದೆ” ಎಂದು ತಿಳಿಸಿದೆ.

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಪಾಕಿಸ್ತಾನಿ ಡ್ರೋನ್‌ಗಳನ್ನು ತಡೆಹಿಡಿಯಲಾಗಿದೆ. ಸ್ಫೋಟಗಳು ಕೇಳಿಬರುತ್ತಿವೆ.

ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್‌ ಪಂದ್ಯವನ್ನೂ ರದ್ದು ಮಾಡಲಾಗಿದೆ. ವಿಶೇಷ ರೈಲಿನ ಮೂಲಕ ಆಟಗಾರರು ಮತ್ತು ಸಿಬ್ಬಂದಿಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಯೋಜಿಸಲಾಗಿದೆ ಎಂದು ವರದಿಯಾಗಿದೆ. ಮತ್ತೊಂದೆಡೆ ಭಾರತದ ಪ್ರತಿ ದಾಳಿಯ ಸಾಧ್ಯತೆಯಿಂದಾಗಿ ಪಾಕಿಸ್ತಾನದಲ್ಲಿ ಪಿಎಸ್‌ಎಲ್ ಪಂದ್ಯವನ್ನೂ ಮುಂದೂಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X