ಭಾರತ-ಪಾಕಿಸ್ತಾನ ಸಂಘರ್ಷ | ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆ

Date:

Advertisements

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಜಾರ್ಖಂಡ್‌ನ ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆಯಾಗಿದೆ. ಸೇನಾ ಗುಪ್ತಚರ ಸಂಸ್ಥೆ ಮತ್ತು ಜಾರ್ಖಂಡ್ ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಶುಕ್ರವಾರ ಜಂಟಿಯಾಗಿ ದಾಳಿ ನಡೆಸಿ ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳನ್ನು ವಶಪಡಿಸಿಕೊಂಡಿವೆ.

ನಕಲಿ ಸಮವಸ್ತ್ರದ ಬಗ್ಗೆ ಲಕ್ನೋದ ಮಿಲಿಟರಿ ಗುಪ್ತಚರ ಸಂಸ್ಥೆಗೆ ಸುಳಿವು ಸಿಕ್ಕ ಬಳಿಕ ರಾಂಚಿಯ ರಾಂಚಿಯ ಬೂಟಿ ಮೋರ್‌ನಲ್ಲಿರುವ ಶ್ರೀ ಗಣೇಶ್ ಸೇನಾ ಅಂಗಡಿಗೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

Advertisements

ಕಾರ್ಯಾಚರಣೆಯ ಸಮಯದಲ್ಲಿ, ಯಾವುದೇ ಅನುಮತಿಯಿಲ್ಲದೆ ತಯಾರಿಸಲಾದ ನಕಲಿ ಸೇನಾ ಸಮವಸ್ತ್ರಗಳು ಮತ್ತು ಯುದ್ಧ ಉಡುಪುಗಳು ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ನಕಲಿ ಸಮವಸ್ತ್ರಗಳನ್ನು ಜನರಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ವರದಿಯಾಗಿದೆ.

ಸದ್ಯ ಈ ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಮತ್ತು ಅವರ ಉದ್ದೇಶವೇನು ಎಂಬುದನ್ನು ನಿರ್ಧರಿಸಲು ತನಿಖೆ ನಡೆಸಲಾಗುತ್ತಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ 26 ಭಾರತೀಯರನ್ನು ಬಲಿ ಪಡೆದುಕೊಂಡ ಬಳಿಕ ಇತ್ತೀಚೆಗೆ ಭಾರತ ಪಾಕಿಸ್ತಾನದ ಒಟ್ಟು ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ.

ಭಯೋತ್ಪಾದನೆ ವಿರುದ್ಧದ ಭಾರತ ಸರ್ಕಾರ ನಡೆಸಿದ ಈ ಪ್ರತಿದಾಳಿಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ. ಇದೀಗ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X