ಸೆ 8ರಿಂದ ಸ್ಪೀಕರ್‌ ಸಮಾವೇಶ; ಪ್ರಥಮ ಬಾರಿಗೆ ಆತಿಥ್ಯ ವಹಿಸಲಿರುವ ಕರ್ನಾಟಕ

Date:

Advertisements

ರಾಜ್ಯದಲ್ಲಿ ಅಖಿಲ ಭಾರತೀಯ ಸಭಾಧ್ಯಕ್ಷರ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಸೆಪ್ಟೆಂಬರ್‌ 8 ರಿಂದ 10ರವರೆಗೆ ಸಮ್ಮೇಳನ ನಡೆಸಲಾಗುವುದು ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ತಿಳಿಸಿದರು.

ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೊದಲ ಬಾರಿಗೆ ಸ್ಪೀಕರ್‌ ಸಮಾವೇಶದ ಆತಿಥ್ಯ ವಹಿಸುವ ಅವಕಾಶ ರಾಜ್ಯಕ್ಕೆ ಸಿಕ್ಕಿದೆ. ಬೆಂಗಳೂರಿನಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಸೆ. 8 ರಂದು ಸಂಜೆ ವಿಧಾನಸೌಧದಲ್ಲಿ ಲೋಕಸಭೆ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಾವೇಶದಲ್ಲಿ ದೇಶದ ಎಲ್ಲಾ ರಾಜ್ಯಗಳ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿಗಳು, ಉಪಸಭಾಪತಿಗಳು, ಹಿರಿಯ ಅಧಿಕಾರಿಗಳು ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಭಾಗಿಯಾಗಿಯಾಗುವ ನಿರೀಕ್ಷೆ ಇದೆ. ಮೇ. 11ರಂದು ಪ್ರತಿನಿಧಿಗಳೊಂದಿಗೆ ರಾಜ್ಯದ ಮೈಸೂರು, ಮಂಗಳೂರು ಅಥವಾ ಬೇಲೂರು-ಹಳೇಬೀಡು ಇವುಗಳಲ್ಲಿ ಯಾವುದಾದರೊಂದು ಐತಿಹಾಸಿಕ ಪ್ರೇಕ್ಷಣಿಯ ಸ್ಥಳಕ್ಕೆ ಪ್ರವಾಸ ಕೈಗೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

“ರಾಜ್ಯದಲ್ಲಿ ಸಮ್ಮೇಳನ ಆಯೋಜಿಸುವಂತೆ ಕೋರಿ ಲೋಕಸಭಾ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿತ್ತು. ಅವರು ಒಪ್ಪಿಗೆ ಸೂಚಿಸಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಸಮಾವೇಶ ನಡೆಯಲಿದೆ. ಉದ್ಘಾಟನೆ ಹಾಗೂ ಸಮಾರೋಪ ಕಾರ್ಯಕ್ರಮಗಳಿಗೆ ಶಾಸಕರನ್ನು ಆಹ್ವಾನಿಸಲಾಗುವುದು. ಉಳಿದಂತೆ ಆಹ್ವಾನಿತರಷ್ಟೇ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

Advertisements

ಇದನ್ನೂ ಓದಿ: ಬೆಂಗಳೂರು | ಅನಿಲ ಸೋರಿಕೆಯಿಂದ ಹೊತ್ತಿ ಉರಿದ ಮನೆ: ಇಬ್ಬರು ಸಜೀವ ದಹನ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X