ಬೀದರ್‌ | ವಂಚನೆ ಆರೋಪದಡಿ ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಬಂಧನ

Date:

Advertisements

ಬೀದರ್‌ ಡಿಸಿಸಿ ಬ್ಯಾಂಕಿಗೆ ಸುಳ್ಳು ಮಾಹಿತಿ ಕೊಟ್ಟು, ಸಾರ್ವಜನಿಕರ ಹಣ ವಂಚಿಸಿರುವ ಆರೋಪದಡಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ಅಧ್ಯಕ್ಷ ಡಿ.ಕೆ. ಸಿದ್ರಾಮ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಜನವಾಡ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆ ಭಾಲ್ಕಿಗೆ ತೆರಳಿ, ಡಿ.ಕೆ. ಸಿದ್ರಾಮ ಅವರನ್ನು ಅವರ ನಿವಾಸದಲ್ಲಿ ವಶಕ್ಕೆ ಪಡೆದರು. ಆನಂತರ ಅವರನ್ನು ಬೀದರ್‌ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು. ನ್ಯಾಯಾಲಯವು ಸಿದ್ರಾಮ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು.

ಹಣ ವಂಚನೆಗೆ ಸಂಬಂಧಿಸಿದಂತೆ ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ. ಸಿದ್ರಾಮ, ಮಾಜಿ ವ್ಯವಸ್ಥಾಪಕ ಅಪರಂಜಿ ಬಿ.ಎಸ್‌., ಡಿಸಿಸಿ ಬ್ಯಾಂಕಿನ ಮಾಜಿ ಸಿಇಒ ಮಹಾಜನ್‌ ಮಲ್ಲಿಕಾರ್ಜುನ, ಬ್ಯಾಂಕಿನ ಮಾಜಿ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ, ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ಸದಾಶಿವ ಪಾಟೀಲ, ಇಮಾಮಪುರ ಡಿಸಿಸಿ ಬ್ಯಾಂಕಿನ ಶಾಖೆ ಮಾಜಿ ವ್ಯವಸ್ಥಾಪಕ ಸೈಯದ್‌ ರಾಹಿಲ್‌ ಅಹಮ್ಮದ್‌, ಎನ್‌ಎಸ್‌ಎಸ್‌ಕೆ ಇತರೆ ನಿರ್ದೇಶಕರ ವಿರುದ್ಧ ಜನವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಮರ ಖಂಡ್ರೆ ಅವರು ರಾಜಕೀಯ ದುರುದ್ದೇಶದಿಂದ ಈ ರೀತಿ ಮಾಡಿದ್ದಾರೆ ಎಂದು ಡಿ.ಕೆ.ಸಿದ್ರಾಮ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್ ನಿರ್ಮಾಪಕರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X