ಉಡುಪಿ | ಕಾಪು ಮಜೂರು ಗ್ರಾಮ ಪಂಚಾಯತ್ ಬಜೆಟ್‌ ನಲ್ಲಿ ಐತಿಹಾಸಿಕ ನಿರ್ಧಾರ

Date:

Advertisements

ಉಡುಪಿ ಜಿಲ್ಲೆ ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್‌ ವಾರ್ಷಿಕ ಬಜೆಟ್‌ ನಲ್ಲಿ ಭಾರತ- ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಗಮನಿಸಿ, ಪಾಕಿಸ್ತಾನದ ವಿರುದ್ದ ಯುದ್ದ ನಡೆಯುವ ಸಂದರ್ಭ ಎದುರಾದಲ್ಲಿ ರಾಷ್ಟ್ರ ಮತ್ತು ಸೈನಿಕರ ಹಿತದೃಷ್ಟಿಯಿಂದ ಎಲ್ಲಾ ಸದಸ್ಯರ ಒಪ್ಪಿಗೆಯ ಮೇರೆಗೆ ರೂ.10.00 ಲಕ್ಷ ಮೊತ್ತವನ್ನು ಬಜೆಟ್‌ ನಲ್ಲಿ ಮೀಸಲಿರಿಸಿದೆ.

ಈ ಬಗ್ಗೆ ಗ್ರಾ.ಪಂ ಅಧ್ಯಕ್ಷರಾದ ಶ್ರೀ ಪ್ರಸಾದ್‌ ಶೆಟ್ಟಿ ವಳದೂರು ಹಾಗೂ ಉಪದ್ಯಾಕ್ಷರಾದ ಶ್ರೀಮತಿ ಮಂಜುಳಾ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಜೂರು ಗ್ರಾಮ ಪಂಚಾಯತ್‌ ಈ ಹಿಂದಿನಿಂದಲೂ ಉತ್ತಮ ಆಡಳಿತ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಕಾಶ್ಮೀರದಲ್ಲಿ ಪಾಕಿಸ್ತಾನ ಪ್ರಾಯೋಜಿತ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತ ಉಗ್ರರ ಅಡಗುತಾಣಗಳನ್ನು ದ್ವಂಸ ಮಾಡುತ್ತಿರುವುದು ಹೆಮ್ಮಯ ಸಂಗತಿ.

Advertisements

ಭಾರತ-ಪಾಕಿಸ್ತಾನ ನಡುವೆ ಯುದ್ದದ ವಾತವರಣ ನಿರ್ಮಾಣ ವಾಗಿದ್ದು, ಒಂದು ವೇಳೆ ಯುದ್ದ ನಡೆದರೆ ಭಾರತೀಯ ಸೈನ್ಯಕ್ಕೆ ಎಲ್ಲಾ ರೀತಿಯ ನೆರವು ನೀಡುವುದು ಗ್ರಾಮ ಪಂಚಾಯತ್‌ ಕರ್ತವ್ಯವಾಗಿದೆ.ಈ ಬಗ್ಗೆ ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿ ಯವರ ಜೊತೆ ಚರ್ಚಿಸಿದಾಗ ದೇಶಕ್ಕೆ ಆಪತ್ತು ಎದುರಾದಗ ಪ್ರತಿಯೊಬ್ಬ ನಾಗರೀಕನು ಸೈನ್ಯದ ಜೊತೆ ಕೈಜೋಡಿಸಬೇಕು ಮಜೂರು ಗ್ರಾಮ ಪಂಚಾಯತ್‌ ತೆಗೆದುಕೊಂಡ ನಿರ್ಧಾರ ದೇಶದಲ್ಲೆ ಪ್ರಥಮ ಮತ್ತು ಐತಿಹಾಸಿಕ ನಿರ್ಣಯವಾಗಿದೆ. ಇದು ಇತರ ಪಂಚಾಯತ್‌ ಗಳಿಗೂ ಪ್ರೇರಣೆಯಾಗಲಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X