ರಾಯಚೂರು | ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯ

Date:

Advertisements

ಬೀದಿಬದಿ ವ್ಯಾಪಾರಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಾ ನಗರ ಪಾಲಿಕೆ ಉಪ ಅಯುಕ್ತರಿಗೆ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ವತಿಯಿಂದ ಮನವಿ ಸಲ್ಲಿಸಿದರು.

ನಗರದ ಲಿಂಗಸೂಗೂರು ರಸ್ತೆ ಸೇರಿದಂತೆ ವಿವಿಧೆಡೆ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಸುಮಾರು 5 ತಿಂಗಳು ಗತಿಸಿದರೂ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಒತ್ತಾಯಿಸಿದರು.ಪಾಲಿಕೆ ತೆರವುಗೊಳಿಸಲಾಗಿತ್ತು, ಈಗಾಗಲೇ ೫ ತಿಂಗಳು ಗತಿಸಿದೆ, ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ್ದರೂ ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.

ತೆರವುಗೊಂಡಿದ್ದರಿಂದ ವ್ಯಾಪಾರಿಗಳ ಕುಟುಂಬ ನಿರ್ವಹಣೆಗೆ ತುಂಬಾ ತೊಂದರೆ ಉಂಟಾಗಿದೆ. ಜೀವನ ನಡೆಸುವುದು ಕಷ್ಟಕರವಾಗಿದೆ.ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳು ಭರವಸೆ ನೀಡಿದ್ದರು.ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದೆ. ಪಾಲಿಕೆ ಬೀದಿಬದಿಯಲ್ಲಿ ಸುಗಮವಾಗಿ ವ್ಯಾಪಾರ ಮಾಡಿಕೊಳ್ಳಲು ಸ್ಥಳ ನಿಗದಿಪಡಿಸಬೇಕು, ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ ಕಾಯ್ದೆ ಸಂಪೂರ್ಣ ಜಾರಿಯಾಗಬೇಕು ಎಂದು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಕ್ತಿನಗರ ಶಾಖೋತ್ಪನ್ನ ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಬೀದಿಬದಿ ವ್ಯಾಪಾರಸ್ಥರಿಗೆ ವಿವಿಧ ಯೋಜನೆಗಳನ್ನು ಜೀವನಕ್ಕೆ ದಾರಿಯಾಗುವಂತೆ ವ್ಯವಸ್ಥೆ ಒದಗಿಸಿಕೊಡಬೇಕು, ಅಂಗಡಿ ನಿರ್ಮಾಣ ಮಾಡಿ ಟೆಂಡರ್, ಹರಾಜು ಮಾಡದೇ ಬೀದಿಬದಿ ವ್ಯಾಪಾರಿಗಳಿಗೆ ಹಂಚಿಕೆ ಮಾಡಬೇಕು, ವ್ಯಾಪಾರಿಗಳೂ ಸಹ ಪಾಲಿಕೆಗೆ ಪಾವತಿ ಮಾಡಬೇಕಾದ ಅನುದಾನವನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಜಿ.ಅಮರೇಶ, ಅಧ್ಯಕ್ಷ ಶೇಖ್ ಹುಸೇನ್ ಬಾಷಾ, ಉಪಾಧ್ಯಕ್ಷ ಮೌನುದ್ದಿನ್, ಬೀಮಾಶಂಕರ, ಕರಿಮುಲ್ಲಾ, ರಾಮು, ಮಾರೆಪ್ಪ, ಸೇರಿದಂತೆ ಅನೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X