ಬಡ-ಮಧ್ಯಮ ವರ್ಗದವರ ಮೇಲೆ ತೆರಿಗೆ ಹೊರೆಯಾಗದಂತೆ ಗ್ಯಾರಂಟಿಗೆ ಸಂಪನ್ಮೂಲ ಕ್ರೋಡೀಕರಣ: ಸಿಎಂ

Date:

Advertisements
  • ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ: ಸಿಎಂ
  • ‘ವಿತ್ತೀಯ ಶಿಸ್ತು ಕಾಪಾಡಿಕೊಂಡು ಸವಾಲು ಗೆದ್ದಿದ್ದೇವೆ’

ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಡೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಶುಕ್ರವಾರ ತಮ್ಮ 14ನೇ ಆಯವ್ಯಯ ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಗ್ಯಾರಂಟಿ ಯೋಜನೆಗಳಿಗೆ 13,500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೆಚ್ಚಳ ಹಾಗೂ 8000 ಕೋಟಿ ರೂ. ಹೆಚ್ಚುವರಿ ಸಾಲದ ಮೂಲಕ ಮತ್ತು ಉಳಿದ ಸಂಪನ್ಮೂಲವನ್ನು ಯೋಜನೆಗಳ ಆದ್ಯತೆಯನ್ನು ನಿಗದಿಪಡಿಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ” ಎಂದರು.

“ಈ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ, ಜನರಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೇ ಪೆಟ್ರೋಲ್ ಡೀಸೆಲ್ ಮೇಲೆ ತೆರಿಗೆ ಹಾಕಲಿಲ್ಲ, ಬೆಲೆ ಏರಿಕೆ ಮಾಡಿಲ್ಲ” ಎಂದರು.

Advertisements

“ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ಮೂರು ಮಾನದಂಡಗಳನ್ನು ಪಾಲಿಸಬೇಕಿದ್ದು, ಈ ಪೈಕಿ 2023-24 ರ ಬಜೆಟ್ ನಲ್ಲಿ 2 ಮಾನದಂಡಗಳನ್ನು ಕಾಯ್ದುಕೊಳ್ಳುವ ಮೂಲಕ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲಾಗಿದೆ ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ವಿತ್ತೀಯ ಕೊರತೆ ಶೇ.3 ರಷ್ಟಿರಬೇಕು, ಸಾಲದ ಪ್ರಮಾಣ ಜಿಡಿಪಿಯ ಶೇ.25 %ರ ಒಳಗೆ ಇರಬೇಕು. ಉಳಿತಾಯ ಬಜೆಟ್ (revenue surplus) ಇರಬೇಕು ಎನ್ನುವ ಮಾನದಂಡಗಳಿವೆ. ವಿತ್ತೀಯ ಕೊರತೆ ಶೇ. 2.6 ರಷ್ಟಿದ್ದು, ಸಾಲ ಜಿಡಿಪಿಯ ಶೇ. 22.3% ರಷ್ಟಿದೆ. ಹೀಗೆ 2 ಮಾನದಂಡಗಳನ್ನು ಪಾಲಿಸಿ ವಿತ್ತೀಯ ಶಿಸ್ತನ್ನು ಕಾಯ್ದುಕೊಳ್ಳಲಾಗಿದೆ” ಎಂದು ವಿವರಿಸಿದರು.

“ಈ ಆಯವ್ಯಯಲ್ಲಿ 2,50,933 ಕೋಟಿ ರೂ. ರಾಜಸ್ವ ವೆಚ್ಚ, ಬಂಡವಾಳ ವೆಚ್ಚ 54374 ಕೋಟಿ ರೂ.ಗಳಾಗಿದ್ದು, 2022-23 ಹೋಲಿಸಿದರೆ ಶೇ.23 ರಷ್ಟು ರಾಜಸ್ವ ವೆಚ್ಚ ಹಾಗೂ ಶೇ.16 ರಷ್ಟು ಬಂಡವಾಳ ವೆಚ್ಚ ಹೆಚ್ಚಾಗುತ್ತದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021-22 ರಲ್ಲಿ ವಿತ್ತೀಯ ಕೊರತೆ 14,699.14 ಕೋಟಿ ರೂ.ಗಳಷ್ಟಿತ್ತು. ನಮ್ಮ ಸರ್ಕಾರದ ರಾಜಸ್ವ ಕೊರತೆ 12,523 ಕೋಟಿಯಷ್ಟಿದೆ, ವಿತ್ತೀಯ ಕೊರತೆ 66,646 ಕೋಟಿ ರೂ. ಇದು ಜಿಎಸ್ ಡಿಪಿಯ ಶೇ. 2.6 ರಷ್ಟಿದೆ. ರಾಜ್ಯದ ಹೊಣೆಗಾರಿಕೆ 5,71,665 ಕೋಟಿ ರೂ.ಗಳಷ್ಟಿದ್ದು, ಇದು ಜಿಎಸ್ ಡಿಪಿ ಶೇ. 22.3 ರಷ್ಟಿದೆ. 2023-24 ಕ್ಕೆ ರಾಜ್ಯವು ಪಡೆಯುವ ಸಾಲ 85,818 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ” ಎಂದರು

“ವಾಣಿಜ್ಯ ತೆರಿಗೆ ಫೆಬ್ರವರಿ ಆಯವ್ಯಯಕ್ಕಿಂತ 4000 ಕೋಟಿ ರೂ. ಹೆಚ್ಚುವರಿ ಗುರಿ ನಿಗದಿಪಡಿಸಲಾಗಿದೆ. ಅಬಕಾರಿ ಸುಂಕ ಗುರಿ 1000 ಕೋಟಿ ರೂ. ಹೆಚ್ಚಳ ಮಾಡಿದೆ. ಇದನ್ನು ಸೇರಿದಂತೆ ತೆರಿಗೆ ಸಂಗ್ರಹದ ಒಟ್ಟಾರೆ ಗುರಿಯನ್ನು 13,500 ಕೋಟಿ ರೂ.ಗಳಷ್ಟು ಹೆಚ್ಚಳ ಮಾಡಿದೆ” ಎಂದು ಹೇಳಿದರು.

ಗಂಡಸ್ರು ಮಾತ್ರ ಕುಡಿಯೋದಾ?

ವಿಸ್ಕಿ ಮತ್ತು ಬಿಯರ್ ಮೇಲೆ ತೆರಿಗೆ ಹೆಚ್ಚಿಸಿದ್ದಕ್ಕೆ ಪತ್ರಕರ್ತರು “ನೀವು ಮಹಿಳಾ ಪರ ಬಜೆಟ್ ಮಂಡಿಸಿ ಪುರುಷ ವಿರೋಧಿ ಆಗ್ತಿದ್ದೀರಿ” ಎಂದು ಹಾಸ್ಯ ಮಾಡಿದರು. ಹಾಸ್ಯದ ಧಾಟಿಯಲ್ಲೇ ಉತ್ತರಿಸಿದ ಮುಖ್ಯಮಂತ್ರಿಗಳು ”ಗಂಡುಸ್ರು ಮಾತ್ರ ಕುಡಿಯೋದಾ ಎನ್ನುತ್ತಾ, ರಾಜ್ಯದ ಕಲ್ಯಾಣಕ್ಕಾಗಿ ಕುಡಿಯುವವರು ತಮ್ಮ ಪಾಲನ್ನೂ ಕೊಡಲಿ ಬಿಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X