ಬೆಳಗಾವಿ | ಕಳ್ಳನನ್ನು ಕೊಲೆ ಮಾಡಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಆರೋಪಿಗಳ ಬಂಧಿಸುವಲ್ಲಿ ಯಶಸ್ವಿಯಾದ ಪೋಲಿಸ್ ಇಲಾಖೆ

Date:

Advertisements

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಫರ್ನಿಚರ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಲು ಬಂದ ಯುವಕನೋರ್ವನನ್ನು ಹಿಗ್ಗಾಮುಗ್ಗ ಹೊಡೆದು ಕೊಲೆ ಮಾಡಿ ಯಾರಿಗೂ ಗೊತ್ತಾಗದಂತೆ ಖಾಲಿ ನಿವೇಶನ ಒಂದರಲ್ಲಿ ಶವ ಎಸೆದು ಯಾರಿಗೂ ಗೊತ್ತಾಗದಂತೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಥಣಿ ತಾಲೂಕಿನ ಅರಳಿಹಟ್ಟಿ ಗ್ರಾಮದ ವಿಕಾಸ ಶಿವದಾಸ ಕೋಷ್ಠಿ (16) ಕೊಲೆಯಾಗಿದ್ದ ಯುವಕ ಅನಾಥ ಶವವಾಗಿ ಮೇ 1ರಂದು ಪತ್ತೆಯಾಗಿದ್ದ. ಕೊಳೆತು ನಾರುತಿದ್ದ ಯುವಕನ ಶವವನ್ನು ಪೊಲೀಸರೇ ಹೂತು ಶವಸಂಸ್ಕಾರ ಮಾಡಿದ್ದರು.
ತನಿಖೆ ಮುಂದುವರೆಸಿದಾಗ ಹಲ್ಯಾಳ ರಸ್ತೆಯ ಶೇಡ್ ಒಂದರಲ್ಲಿ ಯುವಕನನ್ನ ಹಿಗ್ಗಾಮುಗ್ಗ ಹೊಡೆದ ಬಗ್ಗೆ ಚೀರಾಟ ಮತ್ತು ಕೂಗಾಟದ ಮಾಹಿತಿಯನ್ನು ಸಾರ್ವಜನಿಕರಿಂದ ಕಲೆ ಹಾಕಿದ ಅಥಣಿ ಪೊಲೀಸರು ಮೊದಲ ಆರೋಪಿ ಅಬ್ದುಲ್ ಬಾರಿ ಮುಲ್ಲಾ ಅವರನ್ನು ಸಂದೇಹದ ಮೇರೆಗೆ ಬಂಧಿಸಿ ವಿಚಾರಿಸಿದಾಗ ಕಳ್ಳತನಕ್ಕೆ ಬಂದಿದ್ದ ಯುವಕನನ್ನು ಹೊಡೆದು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಅಥಣಿ ಪಟ್ಟಣದ ಅಬ್ದುಲಬಾರಿ ಅಬ್ದುಲರಜಾಕ ಮುಲ್ಲಾ (36), ಜುಬೆರಹ್ಮದ ಮಹಮದ್‌ಅಕ್ರಂ ಮೌಲ್ವಿ (34), ಬಿಲಾಲಅಹಮ್ಮದ್ ಮುಕ್ತಾರಅಹಮದ್ ಮೌಲ್ವಿ (25), ಹಜರತಬಿಲಾಲ ಅಹಮ್ಮದಇಸಾಲಿ ನಾಲಬಂದ (28), (27) ដល់ ៥ (36) 2 6 ಜನ ಆರೋಪಿಗಳು ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರನ್ನು ಅಥಣಿ ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Advertisements

ಏನಿದು ಕೊಲೆ ಪ್ರಕರಣ : ಮೇ 1ರಂದು ತಾಲೂಕಿನ ಹುಲಗಬಾಳಿ ಸಂಪರ್ಕ ರಸ್ತೆಯ ಪಕ್ಕದ ಬೀರಸಿದ್ದೇಶ್ವರ ನಗರದ ಖುಲ್ಲಾ ಪ್ಲಾಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವವೊಂದು ಪತ್ತೆಯಾಗಿತ್ತು. ಈ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಥಣಿ ಪೊಲೀಸರು ಕೂಡ ಅನಾಥ ಶವ ಪತ್ತೆಯಾಗಿರುವ ಬಗ್ಗೆ ಪತ್ರಿಕೆಗಳಿಗೂ ಮಾಹಿತಿ ನೀಡಲಾಗಿತ್ತು ಆದರೆ ಆರಂಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಲಭ್ಯವಾಗಲಿಲ್ಲ. ಆದರೆ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಆರ್ ಬಿ ಬಸರಗಿ, ಅಥಣಿ ಡಿವೈಎಸ್ಪಿ ಪ್ರಶಾಂತ ಮುನ್ನಳ್ಳಿ ಮಾರ್ಗದರ್ಶನದಲ್ಲಿ ಅಥಣಿ ಸಿಪಿಐ ಸಂತೋಷ ಹಳ್ಳೂರ ಅವರ ನೇತೃತ್ವದಲ್ಲಿ ಪಿಎಸ್‌ಐ ನಿರ್ಮಲಪ್ಪ ಉಪ್ಪಾರ, ಕುಮಾರ ಮತ್ತು ಮಲ್ಲಿಕಾರ್ಜುನ ತಳವಾರ ಅವರ ಮುಂದಾಳತ್ವದಲ್ಲಿ ಎರಡು ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು.

ಪ್ರಕರಣದ ಕುರಿತು ತನಿಖೆ ಕೈಗೊಂಡಾಗ ಸಾರ್ವಜನಿಕರ ಗುಪ್ತ ಮಾಹಿತಿ ಸಂಗ್ರಹಿಸಿ, ತಾಂತ್ರಿಕ ಸಹಾಯದಿಂದ ವೈಜ್ಞಾನಿಕವಾಗಿ ತನಿಖೆ ನಡೆಸಿದಾಗ ಮೊದಲ ಆರೋಪಿ ಅಬ್ದುಲಬಾರಿ ಮುಲ್ಲಾ ಅವರನ್ನು ಬುಧವಾರ ಬಂಧಿಸಿ ವಿಚಾರಣೆ ನಡೆಸಿದಾಗ ಉಳಿದ ಆರೋಪಿಗಳ ಹೆಸರು ಹೇಳಿದ್ದಾನೆ.

ಕೊಲೆಯಾದ ವಿಕಾಸ ಅಥಣಿ ಪಟ್ಟಣದ ಹೊರವಲಯದ ಸಂಕೋನಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದಲ್ಲಿರುವ ನಾಲಬಂದ ಫರ್ನಿಚ‌ರ್ ಅಂಗಡಿಗೆ ಕಳ್ಳತನ ಮಾಡಲು ಬಂದಿದ್ದಾಗ ಆತನನ್ನು ಅಬ್ದುಲ್ ಬಾರಿ ಮುಲ್ಲಾ ಅವರ ಸೆಡ್ ನಲ್ಲಿ ವಿಕಾಸ ಶಿವದಾಸ ಕೋಷ್ಠಿ ಈತನ ಕೈ, ಕಾಲುಗಳನ್ನು ಕಟ್ಟಿ ಹಿಗ್ಗಾಮುಗ್ಗ ತಳಿಸಿದ್ದರು.

ಇವರ ಹೊಡಿತಕ್ಕೆ ಅಂಜಿ ವಿಕಾಸ್ ಎಂಬ ಯುವಕ ಎಲ್ಲಾ ಫರ್ನಿಚರ್ ಅಂಗಡಿಗಳಲ್ಲಿ ಆಗಿರುವ ಕಳ್ಳತನವನ್ನು ತಾನೇ ಮಾಡಿರುವುದಾಗಿ ಒಪ್ಪಿಕೊಂಡು, ಫರ್ನಿಚ‌ರ್ ಅಂಗಡಿಯಲ್ಲಿನ ವಸ್ತುಗಳನ್ನು ಕಳ್ಳತನ ಮಾಡಿ ತೀರ್ಥ ಗ್ರಾಮದಲ್ಲಿ ಮುಚ್ಚಿ ಇಟ್ಟಿರುವುದಾಗಿ ತಿಳಿಸಿದ್ದನು ಆದರೆ ಆರೋಪಿಗಳು ತಮ್ಮ ವಾಹನಗಳಲ್ಲಿ ಈ ಯುವಕನನ್ನು ಸತ್ತಿ ಗ್ರಾಮಕ್ಕೆ ಕರೆದುಕೊಂಡು ಹೋದಾಗ ಅಲ್ಲಿ ಯಾವುದೇ ಕದ್ದ ವಸ್ತುಗಳು ಇಲ್ಲದೆ ಇರುವುದನ್ನು ಕಂಡು ಮತ್ತೆ ಅದೇ ಶೆಡ್ಡಿಗೆ ಕರೆದುಕೊಂಡು ಬಂದು ಹೊಡೆದು ಕೊಲೆ ಮಾಡಿರುವುದಾಗಿ ಬಂಧಿತರು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X