ಪಟನಾ ವಿಮಾನ ನಿಲ್ದಾಣದ ನಿರ್ಮಾಣ ಹಂತದಲ್ಲಿರುವ ಟರ್ಮಿನಲ್ ಕಟ್ಟಡದ ಪೈಪ್ ಒಳಗೆ ಮಹಿಳೆಯ ಶವ ಪತ್ತೆ

Date:

Advertisements

ಪಟನಾ ಜಯಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಹಂತದಲ್ಲಿರುವ ಟರ್ಮಿನಲ್ ಕಟ್ಟಡದಲ್ಲಿ ನೀರು ತುಂಬಿದ ಪೈಪ್‌ನಲ್ಲಿ ಶನಿವಾರ ತಡರಾತ್ರಿ 30ರಿಂದ 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಹೊಸದಾಗಿ ಅಳವಡಿಸಲಾದ ಪೈಪ್‌ಗಳಲ್ಲಿ ಒಂದರಲ್ಲಿ ನೀರು ಸರಿಯಾಗಿ ಹರಿಯುತ್ತಿರಲಿಲ್ಲ. ಆದ್ದರಿಂದ ಎಂಜಿನಿಯರ್‌ಗಳು ಗಮನಿಸಿ ಪದೇ ಪದೇ ಸರಿಪಡಿಸುವ ಯತ್ನ ಮಾಡಿದರು. ಬಳಿಕ ಪೈಪ್‌ ಅನ್ನು ಸಂಪೂರ್ಣವಾಗಿ ಪರಿಶೀಲಿಸಿದಾಗ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

Advertisements

ಶನಿವಾರ ಸಂಜೆ ಸುಮಾರು 7:10ಕ್ಕೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ಸಚಿವಾಲಯದ ಎಸ್‌ಡಿಪಿಒ 1 ಅನು ಕುಮಾರಿ ತಿಳಿಸಿದ್ದಾರೆ. “ಪೊಲೀಸರ ತಂಡ ಸ್ಥಳಕ್ಕೆ ತಲುಪಿದ್ದು ಪೈಪ್ ಕತ್ತರಿಸಿದ ನಂತರ ಮಹಿಳೆಯ ಶವ ಪತ್ತೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಮಹಿಳೆ ದಿನಗೂಲಿ ಕಾರ್ಮಿಕೆ ಎಂದು ಶಂಕಿಸಲಾಗಿದೆ. ಇನ್ನೂ ಮಹಿಳೆಯ ಗುರುತು ಪತ್ತೆಯಾಗಿಲ್ಲ. “ಆಕೆಯ ಗುರುತು ಪತ್ತೆಗಾಗಿ ಏಜೆನ್ಸಿಗಳನ್ನು ಪ್ರಶ್ನಿಸುತ್ತಿದ್ದೇವೆ” ಎಂದು ಎಸ್‌ಡಿಪಿಒ ಹೇಳಿದ್ದಾರೆ. ವರದಿ ಪ್ರಕಾರ ತನಿಖಾಧಿಕಾರಿಗಳು ಸ್ಥಳದಲ್ಲಿ ಪ್ರಸ್ತುತ ಮಹಿಳಾ ಕಾರ್ಮಿಕರನ್ನು ನೇಮಿಸಿಕೊಂಡಿರುವ ಮೂರು ಗುತ್ತಿಗೆದಾರ ಏಜೆನ್ಸಿಗಳನ್ನು ಸಂಪರ್ಕಿಸಿದ್ದಾರೆ. ಎಲ್ಲಾ ಮಹಿಳಾ ಕಾರ್ಮಿಕರನ್ನು ಸಂದರ್ಶಿಸಿದ್ದಾರೆ. ಆದರೆ ಮೃತ ಮಹಿಳೆ ಯಾರೆಂದು ಇನ್ನೂ ತಿಳಿದಿಲ್ಲ.

ಮಹಿಳೆಯ ದೇಹದಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟನಾ ಇಂದಿರಾ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕಳುಹಿಸಲಾಗಿದೆ. ತನಿಖೆ ಮುಂದುವರೆದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X