ಜಮ್ಮು ಕಾಶ್ಮೀರ ಸಮಸ್ಯೆಯ ‘ಅಂತಾರಾಷ್ಟ್ರೀಕರಣ’ ಸರಿಯಲ್ಲ, ಪಿಒಕೆ ಭಾರತದ ಅವಿಭಾಜ್ಯ ಅಂಗ: ಕಾಂಗ್ರೆಸ್

Date:

Advertisements

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು(ಪಿಒಕೆ) ತೆರವುಗೊಳಿಸುವಂತೆ 1994 ರಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾದ ನಿರ್ಣಯವನ್ನು ಕಾಂಗ್ರೆಸ್ ಭಾನುವಾರ ಪುನರುಚ್ಚರಿಸಿದೆ. ಜಮ್ಮು ಕಾಶ್ಮೀರ ಸಮಸ್ಯೆಯನ್ನು ‘ಅಂತಾರಾಷ್ಟ್ರೀಕರಣ’ ಮಾಡುವುದು ಸರಿಯಲ್ಲ. ಪಿಒಕೆ ಭಾರತದ ಅವಿಭಾಜ್ಯ ಅಂಗ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಜಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕೋರಿ ಪತ್ರ ಬರೆದಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶವನ್ನು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಕದನ ವಿರಾಮ | ಇಂದಿರಾ ಗಾಂಧಿಯನ್ನು ನೆನೆದ ವಿಪಕ್ಷಗಳು; ಸರ್ವಪಕ್ಷ ಸಭೆ, ತುರ್ತು ಅಧಿವೇಶನ ನಡೆಸಲು ಆಗ್ರಹ

Advertisements

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದವನ್ನು ಘೋಷಿಸಿದ ಅಮೆರಿಕವನ್ನು ಕಾಂಗ್ರೆಸ್ ಟೀಕಿಸಿದೆ. “ಹಲವು ವರ್ಷಗಳ ನಂತರ, ಕಾಶ್ಮೀರಕ್ಕೆ ಸಂಬಂಧಿಸಿದಂತೆ ಒಂದು ನಿರ್ಣಯಕ್ಕೆ ತಲುಪಬಹುದೇ ಎಂದು ನೋಡಲು (ಭಾರತ ಮತ್ತು ಪಾಕಿಸ್ತಾನ) ಎರಡೂ ದೇಶಗಳೊಂದಿಗೆ ಕಾರ್ಯನಿರ್ವಹಿಸುತ್ತೇನೆ” ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಈ ಹೇಳಿಕೆ ಬೆನ್ನಲ್ಲೇ ಕಾಶ್ಮೀರ ಸಮಸ್ಯೆಯನ್ನು ‘ಅಂತಾರಾಷ್ಟ್ರೀಕರಣ’ ಮಾಡುವುದನ್ನು ಕಾಂಗ್ರೆಸ್ ವಿರೋಧಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ. “ಅಮೆರಿಕ ಅಧ್ಯಕ್ಷರು ಮತ್ತು ಇತರ ಅಮೆರಿಕದ ಅಧಿಕಾರಿಗಳ ಹೇಳಿಕೆಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ನವದೆಹಲಿ(ಭಾರತ) ಇಸ್ಲಾಮಾಬಾದ್‌ನಿಂದ(ಪಾಕಿಸ್ತಾನ) ಯಾವ ಬದ್ಧತೆಗಳನ್ನು ಬಯಸಿದೆ ಮತ್ತು ಪಾಕಿಸ್ತಾನಕ್ಕೆ ಯಾವ ಬದ್ಧತೆಯಿದೆ ಎಂಬ ವಿವರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಟ್ರಂಪ್ ಕದನ ವಿರಾಮ ಘೋಷಿಸಿದ್ದು ನಮಗೆ ಆಶ್ಚರ್ಯ ತಂದಿದೆ. ಇಂತಹ ಘಟನೆ ಇದೇ ಮೊದಲ ಬಾರಿಗೆ ಸಂಭವಿಸಿದೆ. ಕಾಂಗ್ರೆಸ್ ಸರ್ವಪಕ್ಷ ಸಭೆ ಮತ್ತು ವಿಶೇಷ ಅಧಿವೇಶನವನ್ನು ಕರೆಯುವಂತೆ ಒತ್ತಾಯಿಸುತ್ತಿದೆ. 1994ರಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾದ ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದೆ. ನಾವು ಪಿಒಕೆಯನ್ನು ಹಿಂಪಡೆದುಕೊಳ್ಳುವುದಾಗಿ ಸರ್ವಾನುಮತದಿಂದ ಅಂಗೀಕರಿಸಲಾದ ನಿರ್ಣಯವನ್ನು ನಾವು ಪುನರುಚ್ಚರಿಸಬೇಕು” ಎಂದು ಸಚಿನ್ ಪೈಲಟ್ ಹೇಳಿದರು.

ಪಾಕಿಸ್ತಾನವು ಆಕ್ರಮಣಕಾರಿಯಾಗಿ ಜಮ್ಮು ಮತ್ತು ಕಾಶ್ಮೀರದ ಪ್ರದೇಶಗಳನ್ನು ಆಕ್ರಮಣ ಮಾಡಿಕೊಂಡಿದ್ದು ಆ ಸ್ಥಳವನ್ನು ತೆರವುಗೊಳಿಸಬೇಕು. ನಿರ್ಣಯವನ್ನು ಪುನರುಚ್ಚರಿಸುವ ಸಮಯವಿದು. ನಿಲುವಿನಲ್ಲಿ ಬದಲಾವಣೆಯಾದರೆ, ಅದನ್ನು ಮೊದಲು ಚರ್ಚಿಸಬೇಕು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ನಿರ್ಣಯವನ್ನು ಅಂಗೀಕರಿಸಲಾಯಿತು. ನಾವು ನಮ್ಮ ನಿಲುವನ್ನು ಬದಲಾಯಿಸಿಲ್ಲ” ಎಂದು ಪೈಲಟ್ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X