ತುಮಕೂರು | ಅಂಬೇಡ್ಕರ್ ಅರ್ಥವಾಗದೆ ಭಾರತ ಅರ್ಥವಾಗುವುದಿಲ್ಲ: ಪ್ರಾಧ್ಯಾಪಕ ಡಾ. ಶ್ರೀನಿವಾಸ್

Date:

Advertisements

ಅಂಬೇಡ್ಕರ್ ಅವರನ್ನು ಅರ್ಥಮಾಡಿಕೊಳ್ಳದೇ ಭಾರತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಅಭಿಪ್ರಾಯಪಟ್ಟರು.

ತುಮಕೂರು ವಿಶ್ವ ವಿದ್ಯಾನಿಲಯ ಹಾಗೂ ತಿಪಟೂರಿನ ಜನಸ್ಪಂದನ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿರುವ ‘ಸಂವಿಧಾನ ಅರಿವು’ ಎರಡು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಎಲ್ಲ ಸಂವಿಧಾನಗಳಿಗೂ ಬ್ರಿಟನ್ ಸಂವಿಧಾನವೇ ತಾಯಿ ಎಂದು ಹೇಳಲಾಗುತ್ತದೆ. ಆದರೆ ಬ್ರಿಟನ್ ವಿದ್ವಾಂಸರಾದ ಜಾನ್ ಆಸ್ಟನ್ ಅವರು ಭಾರತದ ಸಂವಿಧಾನವೇ ಅತ್ಯುನ್ನತವಾದ ಸಂವಿಧಾನವೆಂದು ಹೇಳಿದ್ದಾರೆ. ನಮ್ಮ ಸಂವಿಧಾನ ಎಲ್ಲ ಸ್ಥರದ ಜನರಿಗೆ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಒದಗಿಸುತ್ತದೆ. ಅಂಬೇಡ್ಕರ್ ಅವರನ್ನು ಅರ್ಥಮಾಡಿಕೊಳ್ಳದೇ ಭಾರತವನ್ನಾಗಲಿ, ಭಾರತದ ಸಂವಿಧಾನವನ್ನಾಗಲಿ ಅರ್ಥಮಾಡಿಕೊಳ್ಳುವುದು ಅಪೂರ್ಣವಾದಂತೆ” ಎಂದು ಹೇಳಿದರು.

“ನಮ್ಮ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುತ್ತದೆ. ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಸಂವಿಧಾನ ಹಾಗೂ ಕಾನೂನುಗಳ ಮೂಲಕ ಒದಗಿಸಬಹುದು. ಆದರೆ, ಭ್ರಾತೃತ್ವ ಭಾವನೆಯನ್ನು ಸಂಪೂರ್ಣವಾಗಿ ಉಂಟುಮಾಡಲಾರದು. ಅದು ಭಾರತದ ಪ್ರಜೆಗಳಾದ ನಮ್ಮ ಜವಾಬ್ದಾರಿ” ಎಂದರು.‌

Advertisements

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕನ್ನಡದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 73 ಅಂಕ

“ಇಂದು ಹಿಂದೂ ರಾಷ್ಟ್ರ ಅಥವಾ ಇನ್ನಾವುದೇ ರಾಷ್ಟ್ರದ ಕುರಿತು ಮಾತನಾಡುವವರು ಇದ್ದಾರೆ. ಆದರೆ, ನಮ್ಮ ಸಂವಿಧಾನ ಇದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ. ನಮ್ಮ ಸಂವಿಧಾನ ಎಂದಿಗೂ ಭಾರತ ರಾಷ್ಟ್ರಕ್ಕಾಗಿ ಮಾತ್ರ ಅವಕಾಶ ನೀಡುತ್ತದೆ.
ಇದಕ್ಕಾಗಿ ನಾವು ನಮ್ಮ ಸಂವಿಧಾನವನ್ನು ಸಂರಕ್ಷಣೆ ಮಾಡಬೇಕು. ಇದು ನಮ್ಮೆಲ್ಲರ ಜವಾಬ್ದಾರಿ. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಸಂವಿಧಾನ ರಕ್ಷಣೆಗೆ ಸ್ವತಃ ಅಂಬೇಡ್ಕರ್ ಅವರೇ ನಮಗೆ ಆದರ್ಶ” ಎಂದರು.

ಗೋಷ್ಠಿಯಲ್ಲಿ ಜನ ಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ ಬಿ ಶಶಿಧರ್(ಟೂಡ) ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X