ಪ್ರಧಾನಿ ಭಾಗವಹಿಸದಿದ್ದರೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಬೇಡಿ: ರಾಜಕೀಯ ಪಕ್ಷಗಳಿಗೆ ಕಪಿಲ್ ಸಿಬಲ್ ಮನವಿ

Date:

Advertisements

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ ಎಂಬ ಘೋಷಣೆಯ ಬೆನ್ನಿಗೇ, ಸರ್ವಪಕ್ಷ ಸಭೆಯನ್ನು ಕರೆಯಬೇಕು ಎಂದು ಆಗ್ರಹಿಸಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ ಎಂದು ಸರ್ಕಾರ ಭರವಸೆ ನೀಡುವವರೆಗೂ ಯಾವುದೇ ರಾಜಕೀಯ ಪಕ್ಷಗಳು ಆ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳಬಾರದು ಎಂದೂ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಧಾನಿಯು ತಾನು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಭರವಸೆ ನೀಡುವವರೆಗೂ ಯಾವ ರಾಜಕೀಯ ಪಕ್ಷಗಳು ಆ ಭಾಗವಹಿಸಬಾರದು ಎಂದು ನಾನು ಮನವಿ ಮಾಡುತ್ತೇನೆ. ಒಂದು ವೇಳೆ ಈಗೇನಾದರೂ ಡಾ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿರುತ್ತಿದ್ದರೆ, ಅವರು ಇಂತಹ ಸಭೆಗೆ ಹಾಜರಾಗಿರುತ್ತಿದ್ದರು ಹಾಗೂ ವಿಶೇಷ ಸಂಸತ್ ಅಧಿವೇಶನ ಕರೆದಿರುತ್ತಿದ್ದರು ಎಂಬ ಬಗ್ಗೆ ನನಗೆ ವಿಶ್ವಾಸವಿದೆ” ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಈ ಚಾರಿತ್ರಿಕ ಒಪ್ಪಂದದಲ್ಲಿ ಅಮೆರಿಕ ಪ್ರಮುಖ ಪಾತ್ರ ವಹಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಇತ್ತೀಚಿನ ಪೋಸ್ಟ್ ಹಾಗೂ 48 ಗಂಟೆಗಳಿಂದ ಮಾತುಕತೆ ಪ್ರಗತಿಯಲ್ಲಿದೆ ಹಾಗೂ ತಟಸ್ಥ ಮಾತುಕತೆಯ ಸ್ಥಳದ ಕುರಿತು ಚರ್ಚಿಸಲಾಯಿತು ಎಂದು ಅಮೆರಿಕ ರಾಜ್ಯ ಕಾರ್ಯದರ್ಶಿ ಮಾರ್ಕೊ ರುಬಿಯೊ ನೀಡಿರುವ ಹೇಳಿಕೆಯನ್ನೂ ಅವರು ಈ ವೇಳೆ ಉಲ್ಲೇಖಿಸಿದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

“ಯಾಕೆ, ಹೇಗೆ ಮತ್ತು ಯಾವ ಸನ್ನಿವೇಶದಲ್ಲಿ ಈ ಒಪ್ಪಂದಕ್ಕೆ ತಲುಪಲಾಯಿತು ಎಂಬ ಯಾವುದರ ಕುರಿತೂ ನಮಗೆ ವಿವರಣೆ ನೀಡಿಲ್ಲ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಕೂಡಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಯ ಬಗ್ಗೆ ತಿಳಿದುಕೊಳ್ಳಲು ದೇಶದ ಜನರು ಕಾಯುತ್ತಿದ್ದಾರೆ” ಎಂದು ಅವರು ಹೇಳಿದರು.

“ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಕೂಡಾ ಭಾಗವಹಿಸಲಿದ್ದಾರೆ ಎಂದು ಸರ್ಕಾರ ಭರವಸೆ ನೀಡುವವರೆಗೂ ಯಾವ ರಾಜಕೀಯ ಪಕ್ಷಗಳೂ ಆ ಸಭೆಯಲ್ಲಿ ಭಾಗವಹಿಸಬಾರದು ಎಂದು ನಾನು ಮನವಿ ಮಾಡಲು ಬಯಸುತ್ತೇನೆ ಎಂದೂ ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X