ಹಾಸನ l ಬೆಂಕಿ ನಂದಿಸುವ ಅಗ್ನಿಶಾಮಕ ಠಾಣೆಯಲ್ಲೇ, ನೀರಿನ ಪರದಾಟ

Date:

Advertisements

ಬೆಂಕಿಯಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ಹಾಗೂ ಅದರೊಡನೆ ಹೋರಾಡಿ.ಬೆಂಕಿಯನ್ನು ನಂದಿಸಲು ವಿಶೇಷವಾಗಿ ಆಯೋಜಿಸಿರುವುದೇ ಅಗ್ನಿಶಾಮಕ ಠಾಣೆ. ಈ ರೀತಿಯ ಠಾಣೆಗಳು ದೊಡ್ಡ ದೊಡ್ಡ ಪಟ್ಟಣಗಳಲ್ಲಿದ್ದು, ತನ್ನ ಸೇವೆಯನ್ನು ಪಟ್ಟಣಗಳಿಗೆ ಮಾತ್ರವಲ್ಲದೆ ಸುತ್ತಮುತ್ತಲ ಪ್ರದೇಶಗಳಿಗೂ ಕಾರ್ಯನಿರ್ವಹಿಸುತ್ತದೆ. ಆಕಸ್ಮಿಕದಿಂದ ಉಂಟಾದ ಬೆಂಕಿಯನ್ನು ಆರಿಸುವುದು ಮಾತ್ರವಲ್ಲದೆ ಬೇರೆಡೆ ಪ್ರದೇಶಗಳಿಗೆ ಹರಡದಂತೆಯೂ ಈ ಅಗ್ನಿ ಶಾಮಕ ದಳ ನೋಡಿಕೊಳ್ಳುತ್ತದೆ. 

Screenshot 2025 05 11 22 09 44 62 680d03679600f7af0b4c700c6b270fe7

ಆದರೇ, ಇಲ್ಲೊಂದು ವಿಚಿತ್ರ ಅನ್ನಿಸಬಹುದು. ಎಲ್ಲೇ ಬೆಂಕಿ ನಂದಿಸಲು ಬಳಸುವ ಅಗ್ನಿಶಾಮಕ ವಾಹನದಲ್ಲಿ ನೀರು ಇಲ್ಲದೆ ಪರದಾಡುತ್ತಿರುವ ಠಾಣಾ ಸಿಬ್ಬಂದಿಯವರು. ಆಕಸ್ಮಿಕವಾಗಿ ಬೆಂಕಿ ಅನಾಹುತ ಸಂಭವಿಸಿದರೂ ಅದನ್ನು ನಂದಿಸಲು ನೀರಿಲ್ಲದೆ ಕೆರೆ, ಹೊಳೆ, ಭಾಗದಿಂದ ತುಂಬಿಸಿ ಕಾರ್ಯಕ್ಕೆ ತೆಗೆದುಕೊಂಡು ಹೋಗುವ ದುಸ್ಥಿತಿ ಎದುರಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಈ ತಾಲ್ಲೂಕಿನಲ್ಲಿ ಅತಿ ತುರ್ತಾಗಿ ಅಗ್ನಿಶಾಮಕ ಠಾಣೆ ಬೇಕೆಂದು ಹಲವಾರು ಬಾರಿ ರೈತ ಸಂಘ ಹಾಗೂ ಇನ್ನೂ ಇತರೆ ಸಂಘಟನೆಗಳು ಹೋರಾಟ ನಡೆಸಿದ್ದರಿಂದ 2009ರಲ್ಲಿ ಮಾಜಿ ಶಾಸಕ ರುದ್ರೇಶಗೌಡರ ನೇತೃತ್ವದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣ ಮಾಡಲಾಗಿತ್ತು. ಹಾಗೆಯೇ, ಸಿಬ್ಬಂದಿಗಳಿಗೆ ವಸತಿ ನಿಲಯವನ್ನು ನಿರ್ಮಾಣ ಮಾಡಲಾಗಿತ್ತು. ಸುಮಾರು 21 ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲಾಗಿತ್ತು. ಕುಡಿಯುವ ನೀರಿಗೆ ಬೋರ ವೆಲ್ ಹಾಗೂ ತೊಳಲು ಗ್ರಾ.ಪಂ. ನಿಂದ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಲಾಗಿತ್ತು. ಅದು ಈಗ ನೀರಿಲ್ಲದೆ ಅಸ್ತವ್ಯಸ್ತವಾಗಿದೆ.

Screenshot 2025 05 11 22 15 15 33 680d03679600f7af0b4c700c6b270fe7

15 ವರ್ಷ ಹಿಂದೆ ನೀಡಿದ್ದ ಎರಡು ಅಗ್ನಿ ಶಾಮಕ ವಾಹನ ಈಗ ಏನೂ ಪ್ರಯೋಜನವಿಲ್ಲದಂತಾಗಿದೆ. ಅಗ್ನಿ ಅವಘಡ ಸಂಭವಿಸಿದರೆ ಪಕ್ಕದ ತಾಲ್ಲೂಕಿನ ವಾಹನದಲ್ಲಿ ಬೆಂಕಿ ನಿಲ್ಲಿಸುವ ಕಾರ್ಯವನ್ನು ಮಾಡಬೇಕಿದೆ. ಬೋರ್ ವೆಲ್ ನಿಂತಿರುವುದರಿಂದ ನೀರನ್ನು ಭರ್ತಿ ಮಾಡಲು ಯಗಚಿ ಜಲಾಶಯ ಹಾಗೂ ವಿಷ್ಣು ಸಮುದ್ರ ಕೆರೆಯಲ್ಲಿ ವಾಹನವನ್ನು ಭರ್ತಿ ಮಾಡುವ ಕೆಲಸವಾಗಿತ್ತಿದೆ.

Screenshot 2025 05 11 22 03 41 17 40deb401b9ffe8e1df2f1cc5ba480b12

ನಮಗೆ ಇಲಾಖೆಯಿಂದ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಎರಡು ಬೋರ್ ವೆಲ್ ನೀಡಿದ್ದರೂ ಸಹ ನೀರಿಲ್ಲದೆ ಸಂಪೂರ್ಣ ಬತ್ತಿ ಹೋಗಿದೆ. ಎರಡು ದಿನಗಳಿಗೊಮ್ಮೆ ಗ್ರಾ.ಪಂ. ಇಂದ ನೀರನ್ನು ಒದಗಿಸುತ್ತಾರೆ. ಅದು ಸಹ ಸಾಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ಮೇಲಾಧಿಕಾರಿ ಹಾಗೂ ಶಾಸಕರಲ್ಲಿ ಈಗಾಗಲೇ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಲಾಗಿದೆ ಎಂದು ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ಧರ್ಮಯ್ಯನವರು ಮಾಧ್ಯಮಗಳೊಂದಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ l ಗೌರಿ ಲಂಕೇಶ್ ವೇದಿಕೆಯಲ್ಲಿ ಸರಳ ವೈಚಾರಿಕ ವಿವಾಹ: ವಧು-ವರರಲ್ಲಿ ಹೊಸ ತೇಜಸ್ಸನ್ನು ತುಂಬಿದೆ

ಬೇಲೂರು ತಾಲೂಕಿನ ಅಗ್ನಿಶಾಮಕ ಠಾಣೆಯಲ್ಲಿ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿರುವ ಸಮಸ್ಯೆಯನ್ನು ಸಂಬಂಧಿಸಿದವರು ಆದಷ್ಟು ಬೇಗ ಬಗೆ ಅರಿಯಲಿ ಎಂದು ಆಶಿಸೋಣ.

WhatsApp Image 2024 10 24 at 12.02.30
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X