ಮಧುಗಿರಿ | ದಲಿತ ಯುವಕನಿಗೆ ದೇವಾಲಯ ಪ್ರವೇಶ ನಿರಾಕರಣೆ; ವಿಡಿಯೋ ವೈರಲ್

Date:

Advertisements

ದೇವಾಲಯ ಪ್ರವೇಶಸಿದ್ದಕ್ಕೆ ಪರಿಶಿಷ್ಟ ಜಾತಿಯ ಯುವಕನೊಬ್ಬನನ್ನು ದೇವಾಲಯದಿಂದ ಹೊರ ಹಾಕಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ಕವಣದಾಲ ಗ್ರಾಮದಲ್ಲಿ ನಡೆದಿದೆ.

ಶನಿವಾರ ಸಂಜೆ ಯುವಕ ಸ್ವಾಮಿನಾಥ್ ಪೂಜೆ ಮಾಡಿಸಲೆಂದು ಗ್ರಾಮದಲ್ಲಿರುವ ರಾಮಾಂಜನೇಯ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ಸ್ಥಳದಲ್ಲಿದ್ದ ಒಕ್ಕಲಿಗ ಸಮುದಾಯದವರು ಯುವಕನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಅನಾದಿ ಕಾಲದಿಂದ ನಿಮ್ಮ ಜಾತಿಯವರು (ಪರಿಶಿಷ್ಟ ಜಾತಿಯವರು) ದೇಗುಲದ ಒಳಗೆ ಬಂದಿಲ್ಲ. ಈಗಲೂ ಬರುವುದು ಬೇಡ. ನೀನ್ಯಾಕೆ ಬಂದೆ? ಎಂದು ಹೊರ ನಡೆಯಲು ತಾಕೀತು ಮಾಡಿದ್ದಾರೆ.

ಈ ಕುರಿತು ಯುವಕ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisements

“ಊರಿನ ಜನರೆಲ್ಲ ಒಳಗಡೆ ಕುಳಿತಿರುವಾಗ ನಾನೇಕೆ ಹೊರಗಡೆ ನಿಲ್ಲಬೇಕು. ಒಳಗಡೆ ಹೋಗಿದ್ದು ತಪ್ಪು ಹೇಗಾಗುತ್ತದೆ? ನೀವು ಒಳಗೆ ಹೋಗುವುದಾದರೇ ನಾನೇಕೆ ಹೋಗಬಾರದು? ಸಂವಿಧಾನಕ್ಕೆ ಗೌರವ ಇಲ್ಲವೆ?” ಎಂದು ಯುವಕ ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೇರೆಯಾಗಿದೆ.

ಆಗ ಸ್ಥಳೀಯರು ನಿಮ್ಮವರು (ಪರಿಶಿಷ್ಟ ಜಾತಿ) ಯಾರು ಒಳಗೆ ಬಂದಿಲ್ಲ. ಒಬ್ಬರಿಗೆ ಹೇಳಿದರೆ ಉಳಿದವರು ಅರ್ಥ ಮಾಡಿಕೊಳ್ಳಬೇಕು. ನೀನು ಒಳಗಡೆ ಹೋಗಬೇಡ ಎಂದು ಆಗ್ರಹಿಸಿದ್ದಾರೆ. ಇದರಿಂದ ಕೆಲ ವೇಳೆ ದೇವಾಲಯದ ಬಳಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ಓದಿ: ರಾಸಲೀಲೆ ಪ್ರಕರಣ | ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ನ್ಯಾಯಾಂಗ ಬಂಧನ

ಘಟನೆ ಸಂಬಂಧ ಯುವಕ ಭಾನುವಾರ ಬಡವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಗ್ರಾಮಸ್ಥರ ಒತ್ತಾಯದ ಮೇರೆಗೆ ದೂರು ವಾಪಸ್ ಪಡೆದಿದ್ದಾರೆ. ಈ ಬೆಳೆವಣಿಗೆ ನಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಲ್ ಡಿವೖಎಸ್‌ಪಿ ಮಂಜುನಾಥ್, ತಹಶೀಲ್ದಾರ್ ಶಿರೀನ್ ತಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿನೇಶ್ ಅವರು ಸ್ಥಳಕ್ಕೆ ಭೇಟಿನೀಡಿ ಶಾಂತಿಸಭೆ ನಡೆಸಿದರು. ಶಾಂತಿಸಭೆಯಲ್ಲಿ ಸಂತ್ರಸ್ತ ಯುವಕ, ಒಕ್ಕಲಿಗ ಸಮುದಾಯದವರು ಹಾಗೂ ಗ್ರಾಮಸ್ಥರು ಇದ್ದರು.

ಮುಂದಿನ ದಿನಗಳಲ್ಲಿ ದೇವಸ್ಥಾನ ಪ್ರಶೇಶಿಸಲು ಯಾರಿಗೂ ಅಡ್ಡಿಪಡಿಸಬಾರದು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X