ಒಳಮೀಸಲಾತಿ ಸಮೀಕ್ಷೆ | ‘ಕೊರಮ’ ಅಥವಾ ‘ಕೊರಚ’ ಎಂದು ನಮೂದಿಸಲು ಎಚ್.ಟಿ.ಜಯಣ್ಣ ಮನವಿ

Date:

Advertisements

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ಕೊರಮ ಮತ್ತು ಕೊರಚ ಜನಾಂಗದವರು ಜಾತಿ ಕಾಲಂನಲ್ಲಿ ಕಡ್ಡಾಯವಾಗಿ ‘ಕೊರಮ’ ಅಥವಾ ‘ಕೊರಚ’ ಎಂದಷ್ಟೇ ನಮೂದಿಸಬೇಕು ಎಂದು ನುಲಿಯ ಚಂದಯ್ಯ ಕೊರಮ ಕೊರಚ ಜನಾಂಗದ ಸೇವಾ ಸಂಘದ ರಾಜ್ಯಾಧ್ಯಕ್ಷ ಎಚ್.ಟಿ.ಜಯಣ್ಣ ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಮ್ಮ ವಿವರವನ್ನು ನೀಡಬೇಕು. ಜಾತಿ ಕಾಲಂನಲ್ಲಿ ಕಡ್ಡಾಯವಾಗಿ ‘ಕೊರಮ’ ಅಥವಾ ‘ಕೊರಚ’ ಎಂದಷ್ಟೇ ನಮೂದಿಸಬೇಕು. ಜಾತಿಯ ಮುಂದೆ ಬೇರೆ ಯಾವುದೇ ಉಪ ಕಸಬನ್ನು ಸೇರಿಸಬಾರದು ಎಂದರು.

ರಾಜ್ಯದಲ್ಲಿ ಕೊರಮ ಮತ್ತು ಕೊರಚ ಸಮುದಾಯ ಸುಮಾರು 15 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುವ ಮತ್ತು ಅನಕ್ಷರಸ್ಥರಾಗಿರುವ ಕೊರಮ ಮತ್ತು ಕೊರಚ ಸಮುದಾಯದ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಪಡೆಯಲು ಸರ್ಕಾರ ನಿಗದಿ ಪಡಿಸಿದ ಅವಧಿ ಸಾಕಾಗದು. ಮೇ 17ರ ವರೆಗೆ ಇರುವ ಈ ಸಮೀಕ್ಷಾ ಅವಧಿಯನ್ನು ಕನಿಷ್ಠ ಒಂದು ತಿಂಗಳು ಮುಂದೂಡಬೇಕು ಎಂದು ಅವರು ಆಗ್ರಹಿಸಿದರು.

Advertisements

ಸಮೀಕ್ಷೆ ನಡೆಸಲು ಮನೆ ಮನೆ ಬರುತ್ತಿರುವ ಸಿಬ್ಬಂದಿಯಲ್ಲೂ ತರಬೇತಿಯ ಕೊರತೆ ಕಾಣುತ್ತಿದೆ. ಮೊಬೈಲ್ ಆಪ್ ಮೂಲಕ ಮಾಹಿತಿ ತುಂಬಿಸಬೇಕಾಗಿದೆ. ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ನಿರ್ಧಿಷ್ಟ ಗುರಿ ಸಾಧಿಸಲು ಸಿಬ್ಬಂದಿಯಿಂದ ಸಾಧ್ಯವಾಗುತ್ತಿಲ್ಲ. ಹಾಗಾಗಿ ಸಿಬ್ಬಂದಿಗೆ ಹೆಚ್ಚಿನ ತರಬೇತಿ ನೀಡುವುದರ ಜೊತೆ ಸಮೀಕ್ಷಾ ಅವಧಿಯನ್ನು ವಿಸ್ತರಿಸಬೇಕು ಎಂದು ಅವರು ಮನವಿ ಮಾಡಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಹರೀಶ್ ಕುಮಾರ್ ಮಾತನಾಡಿ, ಈ ಸಮೀಕ್ಷೆ ಕೊರಮ, ಕೊರಚ ಸಮುದಾಯದ ಭವಿಷ್ಯದ ಮೀಸಲಾತಿ ಹಕ್ಕುಗಳು ಹಾಗೂ ಅಭಿವೃದ್ಧಿಗೆ ಬುನಾದಿಯಾಗಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ ಎಸ್.ವೆಂಕಟೇಶ್, ಕಾರ್ಯಕಾರಿಣಿ ಸಮಿತಿ ಸದಸ್ಯ ಚಿಕ್ಕಮಗಳೂರಿನ ಹೋರಿ ತಿಮ್ಮನಹಳ್ಳಿಯ ಶ್ರೀನಿವಾಸ್, ಚಿಕ್ಕಮಗಳೂರು ಜಿಲ್ಲಾ ಅಲೆಮಾರಿ ಅನುಷ್ಠಾನ ಸಮಿತಿ ಸದಸ್ಯ ಮಲ್ಲಿದೇವಿಹಳ್ಳಿ ಶ್ರೀನಿವಾಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X