ಬೀದರ್ | ಜಗತ್ತಿಗೆ ಶಾಂತಿ, ಸಮಾನತೆ ಸಾರಿದ ಭಗವಾನ್ ಬುದ್ಧ : ಸಚಿವ ಈಶ್ವರ ಖಂಡ್ರೆ

Date:

Advertisements

ಭಗವಾನ್ ಬುದ್ಧ ಜಗತ್ತಿಗೆ ಶಾಂತಿ, ಸಮಾನತೆ, ಸರಳತೆಯ ಸಂದೇಶ ನೀಡಿದರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಭಗವಾನ್ ಬುದ್ಧ ಜಯಂತ್ಯುತ್ಸವ ಅಂಗವಾಗಿ ಭಗವಾನ್ ಬುದ್ಧ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

‘ಅಂದಿನ ಸಮಾಜದಲ್ಲಿ ಮೌಢ್ಯ, ಅಸಮಾನತೆ, ದೌರ್ಜನ್ಯ ಮುಂತಾದ ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದವು. ಅವುಗಳ ವಿರುದ್ಧವಾಗಿ ಗೌತಮ ಬುದ್ಧರು ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಸಮಾನತೆ, ಪ್ರೀತಿ, ವಿಶ್ವಾಸಗಳನ್ನು ಮೂಡಿಸಿದರು. ರಾಜಮನೆತನದಲ್ಲಿ ಹುಟ್ಟಿದರು. ಸಹ ಸರ್ವವವೂ ತ್ಯಾಗಗೈದು, ಬೋಧಿವೃಕ್ಷದ ಕೆಳಗೆ ತಪಸ್ಸು ಮಾಡಿ ಜ್ಞಾನವನ್ನು ಪಡೆದರು. ದೇಶದ ಹಲವೆಡೆ ಸಂಚಾರ ಕೈಗೊಂಡು ತಮ್ಮ ತತ್ವಗಳನ್ನು ಬೋಧಿಸಿದರು’ ಎಂದರು.

Advertisements
1003710223

‘ಜಗತ್ತಿನಲ್ಲಿ ನಡೆಯುವ ಅನಾಹುತಗಳಿಗೆ ಆಸೆಯೇ ಕಾರಣ, ಆಸೆ ದುಃಖಕ್ಕೆ ಮೂಲ ಕಾರಣವಾಗಿದೆ, ಆಸೆ ತ್ಯಾಗದಿಂದ ದುಃಖ ಕಡಿಮೆಯಾಗುತ್ತದೆ. ಆಸೆ ಹೋಗಬೇಕೆಂದರೆ ಅಷ್ಟಾಂಗ ಮಾರ್ಗ ಪಾಲನೆ ಮಾಡಬೇಕು’ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗೌತಮಬುದ್ಧರ ಭಾವಚಿತ್ರದ ರಥ ಮೆರವಣಿಗೆಗೆ ಸಚಿವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೇರಿದಂತೆ ವಿವಿಧ ಮುಖಂಡರು, ಅಧಿಕಾರಿಗಳು ಇದ್ದರು.

ಬಳಿಕ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ನಡೆದ ವೇದಿಕೆ ಕಾರ್ಯಕ್ರಮವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಉದ್ಘಾಟಿಸಿದರು.

1003710178
ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿದರು.

‘ಭಗವಾನ್ ಬುದ್ಧರು ಮಾನವೀಯತೆ, ಸಮಾನತೆ, ಸಹಬಾಳ್ವೆಯಿಂದ ಬದುಕಲು ಮಾರ್ಗ ಹಾಕಿಕೊಟ್ಟಿದ್ದಾರೆ. ನಾವೆಲ್ಲರೂ ಸರಳತೆ ಜೀವನವನ್ನು ಅನುಸರಿಸಿ, ಪ್ರೀತಿ ವಿಶ್ವಾಸದಿಂದ ಕೂಡಿ ಬಾಳಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರ ಮಾರ್ಗದಲ್ಲಿ ನಡೆದು ಉತ್ತಮವಾದ ಸಮಾಜವನ್ನು ಕಟ್ಟಬೇಕು’ ಎಂದು ತಿಳಿಸಿದರು.

ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ ಪ್ಯಾಗೆ ಅವರು ಅತಿಥಿ ಉಪನ್ಯಾಸ ನೀಡಿ, ‘ಬುದ್ಧರ ಜೀವನ ಹಾಗೂ ಬೌದ್ಧ ಧಮ್ಮದ ಕುರಿತು ತಿಳಿಸಿದರು.

ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಭಂತೆ ಅಶೋಕ, ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ವಿಜಯಕುಮಾರ ಸೊನಾರೆ ಮುಖಂಡರಾದ ಮಾರುತಿ ಬೌದ್ಧೆ, ಅನೀಲ ಬೆಲ್ದಾರ, ಬಾಬು ಪಾಸ್ವಾನ್, ಕಾಶಿನಾಥ ಚೆಲುವಾ, ರಾಜಪ್ಪ ಗೂನಳ್ಳಿ, ತಾನಾಜಿ ಸಗರ, ಶಿವಶರಣಪ್ಪ ಹುಗ್ಗೆ ಪಾಟೀಲ್, ಓಂಪ್ರಕಾಶ್ ರೊಟ್ಟೆ, ಚಕ್ರಧರ ಹೊಸಳ್ಳಿ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X